AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ 1.30ರ ಹೊತ್ತಿಗೆ ಆಸ್ಪತ್ರೆ ತಲುಪಿದ ಆಕ್ಸಿಜನ್​ ಟ್ಯಾಂಕರ್​​; ಸ್ವಲ್ಪವೇ ತಡವಾಗಿದ್ದರೂ 500 ರೋಗಿಗಳ ಜೀವ ಹೋಗುತ್ತಿತ್ತು..

ಬರೀ ಜಿಟಿಬಿ ಆಸ್ಪತ್ರೆಗಳಷ್ಟೇ ಅಲ್ಲದೆ, ಬುಧವಾರ ಮುಂಜಾನೆ ಹೊತ್ತಿಗೆ ದೆಹಲಿಯ ಹಲವು ಪ್ರತಿಷ್ಠಿತ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ವೈದ್ಯಕೀಯ ಆಕ್ಸಿಜನ್ ಪೂರೈಕೆ ಆಗಿದೆ.

ಮಧ್ಯರಾತ್ರಿ 1.30ರ ಹೊತ್ತಿಗೆ ಆಸ್ಪತ್ರೆ ತಲುಪಿದ ಆಕ್ಸಿಜನ್​ ಟ್ಯಾಂಕರ್​​; ಸ್ವಲ್ಪವೇ ತಡವಾಗಿದ್ದರೂ 500 ರೋಗಿಗಳ ಜೀವ ಹೋಗುತ್ತಿತ್ತು..
ಆಸ್ಪತ್ರೆ ತಲುಪಿದ ಆಕ್ಸಿಜನ್​ ಟ್ಯಾಂಕರ್​
Lakshmi Hegde
|

Updated on: Apr 21, 2021 | 12:19 PM

Share

ದೆಹಲಿ: ನಿನ್ನೆ ರಾತ್ರಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ದೆಹಲಿಯ ಜಿಟಿಬಿ ಆಸ್ಪತ್ರೆಯಲ್ಲಿ ವೈದ್ಯಕೀಯ ಆಕ್ಸಿಜನ್​ ತೀವ್ರ ಕೊರತೆ ಆಗಿದೆ. ಹೆಚ್ಚೆಂದರೆ ಇನ್ನು ನಾಲ್ಕು ತಾಸುಗಳಿಗಷ್ಟೇ ಆಕ್ಸಿಜನ್​ ಸಾಕು. ಇಲ್ಲಿ ಸುಮಾರು 500 ರೋಗಿಗಳಿಗೆ ಆಕ್ಸಿಜನ್​ ಅಗತ್ಯವಿದೆ. ದಯವಿಟ್ಟು ಸಹಾಯ ಮಾಡಿ ಎಂದು ನಿನ್ನೆ ರಾತ್ರಿ ಟ್ವೀಟ್ ಮಾಡಿ, ರೈಲ್ವೆ ಸಚಿವ ಪಿಯುಷ್​ ಗೋಯಲ್​ ಅವರನ್ನು ಟ್ಯಾಗ್ ಮಾಡಿದ್ದರು. ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಇದೆ ಮನವಿ ಮಾಡಿದ್ದಲ್ಲದೆ, ದೆಹಲಿಯ ಹಲವು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ತುಂಬ ಆಗಿದೆ ಎಂದೂ ಹೇಳಿದ್ದರು.

ಅದಾದ ಕೆಲವೇ ಹೊತ್ತಲ್ಲಿ, ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಆಕ್ಸಿಜನ್ ಪೂರೈಕೆಯಾಗಿದೆ. ವೈದ್ಯಕೀಯ ಆಕ್ಸಿಜನ್ ಹೊತ್ತ ಟ್ರಕ್​ ಅಲ್ಲಿಗೆ ತೆರಳಿದೆ. ಇದರಿಂದಾಗಿ ಹಲವು ರೋಗಿಗಳ ಪ್ರಾಣ ಉಳಿದಿದೆ. ಈ ಆಸ್ಪತ್ರೆಯಲ್ಲಿ ಸುಮಾರು 500 ರೋಗಿಗಳಿದ್ದು, ಮುಂಜಾನೆ 2ಗಂಟೆವರೆಗೆ ಮಾತ್ರ ಸಾಕಾಗುಷ್ಟು ಇತ್ತು. ಒಂದೊಮ್ಮೆ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದೆ ಇದ್ದರೆ ಇಲ್ಲಿ ಜೀವ ಹಾನಿ ಗ್ಯಾರಂಟಿಯಾಗಿತ್ತು. ಅಂಥ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಮಧ್ಯರಾತ್ರಿ 1.30ರ ಹೊತ್ತಿಗೆ ಮೆಡಿಕಲ್​ ಆಕ್ಸಿಜನ್ ಹೊತ್ತ ಟ್ರಕ್​ ಜಿಟಿಬಿ ಆಸ್ಪತ್ರೆಗೆ ತಲುಪಿದೆ.

ಬರೀ ಜಿಟಿಬಿ ಆಸ್ಪತ್ರೆಗಳಷ್ಟೇ ಅಲ್ಲದೆ, ಬುಧವಾರ ಮುಂಜಾನೆ ಹೊತ್ತಿಗೆ ದೆಹಲಿಯ ಹಲವು ಪ್ರತಿಷ್ಠಿತ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ವೈದ್ಯಕೀಯ ಆಕ್ಸಿಜನ್ ಪೂರೈಕೆ ಆಗಿದೆ. ನಮ್ಮ ಆಸ್ಪತ್ರೆಗೆ ಮುಂಜಾನೆ 3 ಗಂಟೆ ಹೊತ್ತಿಗೆ ಆಕ್ಸಿಜನ್ ಪೂರೈಕೆ ಆಗಿದ್ದಾಗಿ ಲೋಕ್​ ನಾಯಕ್​ ಜೈ ಪ್ರಕಾಶ್​ ನಾರಾಯಣ್ ಆಸ್ಪತ್ರೆಯ ನಿರ್ದೇಶಕ ಡಾ. ಸುರೇಶ್​ ಕುಮಾರ್​ ತಿಳಿಸಿದ್ದಾರೆ. ಅಂಬೇಡ್ಕರ್ ಆಸ್ಪತ್ರೆಗೆ ಮುಂಜಾನೆ 5ಗಂಟೆಗೆ ಪೂರೈಕೆಯಾಗಿದೆ. ಕಳೆದ ಕೆಲವು ದಿನಗಳಿಂದಲೂ ದೆಹಲಿಯಲ್ಲಿ ಆಕ್ಸಿಜನ್ ಕೊರತೆ ಆಗುತ್ತಿರುವ ಬಗ್ಗೆ ಸಿಎಂ ಅರವಿಂದ್ ಕ್ರೇಜಿವಾಲ್ ಕಳೆದ ನಾಲ್ಕೈದು ದಿನಗಳಿಂದಲೂ ಹೇಳುತ್ತಲೇ ಬಂದಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಅಸಮಾಧನವನ್ನೂ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಯಾದಗಿರಿಯಲ್ಲಿ ಭೀಕರ ಅಪಘಾತ ಐವರು ದುರ್ಮರಣ, ಹಾಸನದಲ್ಲಿ ಬೈಕ್​ಗೆ ಕಾರು ಡಿಕ್ಕಿ ಮೂವರ ಸಾವು

ಬೆಂಗಳೂರಿನಲ್ಲಿ ಹೆಚ್ಚಾಯ್ತು ಕೊರೊನಾ ಸೋಂಕಿತರ ಮರಣ ಪ್ರಮಾಣ; ಅಂತ್ಯಸಂಸ್ಕಾರಕ್ಕೆ 13 ಚಿತಾಗಾರಗಳಿಗೆ ಅನುಮತಿ ನೀಡಿದ ಸರ್ಕಾರ

ಕೊರೊನಾ ಚೈನ್ ಲಿಂಕ್ ಬ್ರೇಕ್​ ಮಾಡಲು 14 ದಿನ ಬೇಕಾಗಿದೆ, ಅದಕ್ಕೇ ಈ ಬಿಗಿ ಕ್ರಮ – ಡಾ. ಕೆ.ಸುಧಾಕರ್

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ