AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅಪ್ಪ ಕಟ್ಟಡವೊಂದರ 20 ನೇ ಮಹಡಿಯಿಂದ ಬಿದ್ದು ಸಾವು

ಗುರುಗ್ರಾಮದ ಸೆಕ್ಟರ್ 54ರ ಡಿಎಲ್‌ಎಫ್ ದಿ ಕ್ರೆಸ್ಟ್‌ನಲ್ಲಿ 20 ನೇ ಮಹಡಿಯಿಂದ ಬಿದ್ದು ರಮೇಶ್ ಅಗರ್ವಾಲ್ ಸಾವನ್ನಪ್ಪಿದ್ದಾರೆ ಎಂದು ಪೂರ್ವ ಡಿಸಿಪಿ ವೀರೇಂದ್ರ ವಿಜ್ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ವಿಜ್ ತಿಳಿಸಿದ್ದಾರೆ.

ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅಪ್ಪ ಕಟ್ಟಡವೊಂದರ 20 ನೇ ಮಹಡಿಯಿಂದ ಬಿದ್ದು ಸಾವು
ಓಯೋ
Follow us
ರಶ್ಮಿ ಕಲ್ಲಕಟ್ಟ
|

Updated on:Mar 10, 2023 | 8:27 PM

ಓಯೋ (Oyo) ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ (Ritesh Agarwal) ಅವರ ತಂದೆ ರಮೇಶ್ ಅಗರ್ವಾಲ್  (Ramesh Agarwal)ಅವರು ಗುರುಗ್ರಾಮ್‌ನಲ್ಲಿನ ಕಟ್ಟಡವೊಂದರ 20 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ರಮೇಶ್ ಅಗರ್ವಾಲ್ ಅವರು ಪತ್ನಿಯೊಂದಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ರಿತೇಶ್ ಅಗರ್ವಾಲ್ ಅದೇ ಕಟ್ಟಡದಲ್ಲಿ ವಾಸಿಸುತ್ತಿರಲಿಲ್ಲ ಎಂದು ಮಿಂಟ್ ವರದಿ ಮಾಡಿದೆ. ಗುರುಗ್ರಾಮದ ಸೆಕ್ಟರ್ 54ರ ಡಿಎಲ್‌ಎಫ್ ದಿ ಕ್ರೆಸ್ಟ್‌ನ 20 ನೇ ಮಹಡಿಯಿಂದ ಬಿದ್ದು ರಮೇಶ್ ಅಗರ್ವಾಲ್ ಸಾವನ್ನಪ್ಪಿದ್ದಾರೆ ಎಂದು ಪೂರ್ವ ಡಿಸಿಪಿ ವೀರೇಂದ್ರ ವಿಜ್ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ವಿಜ್ ತಿಳಿಸಿದ್ದಾರೆ.

ಅತೀವ ದುಃಖದಿಂದ ನನ್ನ ಕುಟುಂಬ ಮತ್ತು ನಾನು, ನಮ್ಮ ಮಾರ್ಗದರ್ಶಿ ಬೆಳಕು ಮತ್ತು ಶಕ್ತಿ, ನನ್ನ ತಂದೆ ಶ್ರೀ ರಮೇಶ್ ಅಗರ್ವಾಲ್ ಮಾರ್ಚ್ 10 ರಂದು ನಿಧನರಾದರು ಎಂಬ ವಿಷಯವನ್ನು ಹಂಚಿಕೊಳ್ಳಲು ಬಯಸುತ್ತೇವೆ. ಅವರು ಪೂರ್ಣ ಜೀವನವನ್ನು ನಡೆಸಿದರು. ನನಗೆ ಮತ್ತು ನಮ್ಮಲ್ಲಿ ಅನೇಕರಿಗೆ ಪ್ರತಿದಿನ ಸ್ಫೂರ್ತಿ ನೀಡಿದರು. ಅವರ ನಿಧನ ನಮ್ಮ ಕುಟುಂಬಕ್ಕೆ ಅಪಾರ ನಷ್ಟವಾಗಿದೆ. ನನ್ನ ತಂದೆಯ ಸಹಾನುಭೂತಿ ಮತ್ತು ಪ್ರೀತಿ ನಮ್ಮ ಕಷ್ಟದ ಸಮಯದಲ್ಲಿ ನಮ್ಮ ಕೈ ಹಿಡಿದು ನಮ್ಮನ್ನು ಮುನ್ನಡೆಸಿತು. ಅವರ ಮಾತುಗಳು ನಮ್ಮ ಹೃದಯದಲ್ಲಿ ಆಳವಾಗಿ ಅನುರಣಿಸುತ್ತವೆ. ಈ ದುಃಖದ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸುವಂತೆ ನಾವು ಪ್ರತಿಯೊಬ್ಬರಲ್ಲಿ ವಿನಂತಿಸುತ್ತೇವೆ ಎಂದು ರಿತೇಶ್ ಅಗರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಭಾರೀ ಬಿಸಿಲು: ಕಾರ್ಮಿಕರ ಕೆಲಸದ ಅವಧಿ ಬದಲಾವಣೆ; ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಕರೆ

ಕುಟುಂಬವು ರಿತೇಶ್ ಅಗರ್ವಾಲ್ ಅವರ ವಿವಾಹ ಸಂಭ್ರಮಾಚರಣೆ ಮಾಡಿದಕೆಲವು ದಿನಗಳ ನಂತರ ಈ ಘಟನೆ ಸಂಭವಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಾಫ್ಟ್‌ಬ್ಯಾಂಕ್‌ನ ಮಸಯೋಶಿ ಸನ್ ಸೇರಿದಂತೆ ಪ್ರಮುಖ ಸ್ಟಾರ್ಟಪ್ ಸಂಸ್ಥಾಪಕರು ಮತ್ತು ಹೂಡಿಕೆದಾರರು ಇದರಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಅವರು ರಿತೇಶ್ ಅಗರ್ವಾಲ್ ಮತ್ತು ಅವರ ಪತ್ನಿ ಗೀತಾಂಶ ಸೂದ್ ಅವರೊಂದಿಗೆ ಇರುವವರ ಫೋಟೋಗಳನ್ನು ಹಂಚಿಕೊಂಡು ದಂಪತಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Fri, 10 March 23

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ