AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ಜನರು ತಮ್ಮ ಗೊಂದಲ ನೀತಿಗಳನ್ನು ಅಪ್ಪಿಕೊಂಡು ಸಾಯಲಿ ಎಂದು ಸರ್ಕಾರ ನಿರೀಕ್ಷಿಸುತ್ತಿದೆ: ಪಿ ಚಿದಂಬರಂ

ಜಮ್ಮು ಮತ್ತು ಕಾಶ್ಮೀರದಲ್ಲಿ ಜನರು ತಮ್ಮ ಗೊಂದಲದ ನೀತಿಗಳನ್ನು ಅಪ್ಪಿಕೊಂಡು ಸಾಯಲಿ ಎಂದು ಸರ್ಕಾರ ಬಯಸುತ್ತಿದೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಪಿ ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಈ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲು ಸರ್ಕಾರ ಒಂದು ಕ್ಷಣವನ್ನೂ ಮೀಸಲಿಡುತ್ತಿಲ್ಲ, ಕಾಶ್ಮೀರದಲ್ಲಿ ಸರ್ಕಾರದ ನೀತಿಗಳು ಗೊಂದಲಮಯವಾಗಿದೆ ಇವುಗಳನ್ನೇ ಅಪ್ಪಿಕೊಂಡು ಜನರು ಸಾಯಲಿ ಎಂದು ಸರ್ಕಾರ ಎದುರುನೋಡುತ್ತಿದೆ ಎಂದಿದ್ದಾರೆ.

ಕಾಶ್ಮೀರದಲ್ಲಿ ಜನರು ತಮ್ಮ ಗೊಂದಲ ನೀತಿಗಳನ್ನು ಅಪ್ಪಿಕೊಂಡು ಸಾಯಲಿ ಎಂದು ಸರ್ಕಾರ ನಿರೀಕ್ಷಿಸುತ್ತಿದೆ: ಪಿ ಚಿದಂಬರಂ
ಪಿ ಚಿದಂಬರಂ
ನಯನಾ ರಾಜೀವ್
|

Updated on:Sep 15, 2023 | 2:03 PM

Share

ಜಮ್ಮು ಮತ್ತು ಕಾಶ್ಮೀರ(Jammu And Kashmir)ದಲ್ಲಿ ಜನರು ತಮ್ಮ ಗೊಂದಲದ ನೀತಿಗಳನ್ನು ಅಪ್ಪಿಕೊಂಡು ಸಾಯಲಿ ಎಂದು ಸರ್ಕಾರ ಬಯಸುತ್ತಿದೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಪಿ ಚಿದಂಬರಂ(P Chidambaram) ವಾಗ್ದಾಳಿ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಈ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲು ಸರ್ಕಾರ ಒಂದು ಕ್ಷಣವನ್ನೂ ಮೀಸಲಿಡುತ್ತಿಲ್ಲ, ಕಾಶ್ಮೀರದಲ್ಲಿ ಸರ್ಕಾರದ ನೀತಿಗಳು ಗೊಂದಲಮಯವಾಗಿದೆ ಇವುಗಳನ್ನೇ ಅಪ್ಪಿಕೊಂಡು ಜನರು ಸಾಯಲಿ ಎಂದು ಸರ್ಕಾರ ಎದುರುನೋಡುತ್ತಿದೆ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯನ್ನು ಭಯೋತ್ಪಾದಕರು ಹತ್ಯೆ ಮಾಡಿದ ದಿನದಂದೇ ಬಿಜೆಪಿ ಜಿ20 ಶೃಂಗಸಭೆಯ ಯಶಸ್ವಿ ಸಂಭ್ರಮಾಚರಣೆಯನ್ನು ನಡೆಸಿದೆ ಎಂದು ಇಂಡಿಯಾ ಮೈತ್ರಿಕೂಟದ ಹಲವು ಪಕ್ಷಗಳು ಟೀಕೆ ಮಾಡಿವೆ.

ಅನಂತ್​ನಾಗ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಕರ್ನಲ್ ಮನ್​ಪ್ರೀತ್ ಸಿಂಗ್, ಕಮಾಂಡಿಂಗ್ ಆಫೀಸರ್ ಮೇಜರ್ ಆಶಿಶ್ ಧೋಂಚಕ್, ಉಪ ಪೊಲೀಸ್ ವರಿಷ್ಠಾಧಿಕಾರಿ ಹುಮಾಯೂನ್ ಭಟ್ ಹಾಗೂ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಮೇಜರ್ ಆಶಿಶ್ ಅವರ ಶೌರ್ಯಕ್ಕಾಗಿ ಈ ವರ್ಷದ ಆಗಸ್ಟ್ 15 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸೇನಾ ಪದಕ ಪಡೆದಿದ್ದರು. ಭಯೋತ್ಪಾದಕರ ವಿರುದ್ಧ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಹುತಾತ್ಮ ಯೋಧ ಆಶಿಶ್ ಅವರ ಸೋದರ ಮಾವ ಸುರೇಶ್ ಹೇಳಿದ್ದಾರೆ.

ಮತ್ತಷ್ಟು ಓದಿ: ಅನಂತ್​ನಾಗ್​ನಲ್ಲಿ ಮುಂದುವರೆದ ಎನ್​ಕೌಂಟರ್​ನಲ್ಲಿ ಮತ್ತೋರ್ವ ಯೋಧ ಹುತಾತ್ಮ

ಪಾಣಿಪತ್ ನಲ್ಲಿ ಹೊಸ ಮನೆ ಕಟ್ಟಲಾಗಿದೆ. ಆಶಿಶ್ ರಜೆ ಪಡೆದು ಮನೆಗೆ ಮರಳಲು ಮುಂದಾಗಿದ್ದರು. ಅವರ ಹುಟ್ಟುಹಬ್ಬ ಅಕ್ಟೋಬರ್‌ನಲ್ಲಿಯೇ ಇತ್ತು. 23ರಂದು ಅವರ ಹುಟ್ಟುಹಬ್ಬ ಆಚರಿಸಿ, ಅದೇ ದಿನ ಹೊಸ ಮನೆಗೆ ತೆರಳಲು ಕುಟುಂಬಸ್ಥರು ನಿರ್ಧರಿಸಿದ್ದರು. ಆಶಿಶ್ 2012ರಲ್ಲಿ ಸೇನೆಗೆ ಸೇರಿದ್ದರು.

ಆಶಿಶ್ ಮೊದಲಿನಿಂದಲೂ ಸೇನೆಗೆ ಸೇರಲು ಬಯಸಿದ್ದರು, ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದು ಅವರ ಆಸೆಯಾಗಿತ್ತು, ಸ್ನಾತಕೋತ್ತರ ಪದವಿವರೆಗೆ ಓದಿದ್ದರು. ಕುಟುಂಬ ಪಾಣಿಪತ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:14 pm, Fri, 15 September 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ