Sign In

By signing in or creating an account, you agree with Associated Broadcasting Company's Terms & Conditions and Privacy Policy.

Padma Awards: 2026ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಪ್ರಾರಂಭ; ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ

2026ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಆರಂಭವಾಗಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2025ರ ಜುಲೈ 31. awards.gov.inನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅರ್ಹತೆ, ನಾಮನಿರ್ದೇಶನದ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ಇಲ್ಲಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳನ್ನು ನೀಡಲಾಗುವುದು.

Padma Awards: 2026ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಪ್ರಾರಂಭ; ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ
Droupadi Murmu
Follow us
ಸುಷ್ಮಾ ಚಕ್ರೆ
|

Updated on: Mar 17, 2025 | 4:24 PM

ನವದೆಹಲಿ, (ಮಾರ್ಚ್ 17): 2026ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಮತ್ತು ಶಿಫಾರಸುಗಳ ಪ್ರಕ್ರಿಯೆಯು ಅಧಿಕೃತವಾಗಿ ಪ್ರಾರಂಭವಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 2025ರ ಜುಲೈ 31 ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಗಳು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಒಳಗೊಂಡಿರುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಸಾಧನೆಗಳು ಮತ್ತು ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಅಧಿಕೃತ ಹೇಳಿಕೆಯ ಪ್ರಕಾರ, ಎಲ್ಲಾ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ (awards.gov.in) ಮೂಲಕ ಮಾತ್ರ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.

1954ರಲ್ಲಿ ಸ್ಥಾಪಿಸಲಾದ ಪದ್ಮ ಪ್ರಶಸ್ತಿಗಳು ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲಾಗುವ ಈ ಪ್ರಶಸ್ತಿಗಳು, ವಿವಿಧ ಕ್ಷೇತ್ರಗಳಲ್ಲಿ “ವಿಶಿಷ್ಟ ಕಾರ್ಯ”ವನ್ನು ಗುರುತಿಸುವ ಗುರಿಯನ್ನು ಹೊಂದಿವೆ. ಅವುಗಳೆಂದರೆ,

ಕಲೆ, ಸಾಹಿತ್ಯ ಮತ್ತು ಶಿಕ್ಷಣ

ಕ್ರೀಡೆ ಮತ್ತು ವೈದ್ಯಕೀಯ

ಸಮಾಜ ಕಾರ್ಯ ಮತ್ತು ಸಾರ್ವಜನಿಕ ವ್ಯವಹಾರಗಳು

ವಿಜ್ಞಾನ ಮತ್ತು ಎಂಜಿನಿಯರಿಂಗ್

ವ್ಯಾಪಾರ ಮತ್ತು ಕೈಗಾರಿಕೆ

ನಾಗರಿಕ ಸೇವೆ ಮತ್ತು ಇತರ ವಿಭಾಗಗಳು

ಇದನ್ನೂ ಓದಿ: ಪದ್ಮ ಪ್ರಶಸ್ತಿಗೆ ಭಾಜನರಾದ ಚಿತ್ರರಂಗದ ಸಾಧಕರ ಪಟ್ಟಿ

ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗವನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳನ್ನು ಈ ಪ್ರಶಸ್ತಿಗಳಿಗೆ ಶಿಫಾರಸು ಮಾಡಲಾಗುವುದು. ಆದರೆ, ಪಿಎಸ್‌ಯುಗಳ ಉದ್ಯೋಗಿಗಳು ಸೇರಿದಂತೆ ಸರ್ಕಾರಿ ನೌಕರರ ಪೈಕಿ ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಬೇರೆ ಸರ್ಕಾರಿ ನೌಕರರು ಈ ಪ್ರಶಸ್ತಿಗಳಿಗೆ ಅರ್ಹರಲ್ಲ.

2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ, ಹೆಚ್ಚು ಪ್ರಸಿದ್ಧಿಯಾಗದ ಸಾಧಕರನ್ನು ಗೌರವಿಸಲು ಪದ್ಮ ಪ್ರಶಸ್ತಿಗಳನ್ನು ಮರು ವ್ಯಾಖ್ಯಾನಿಸಲಾಗಿದೆ. ಸಮಾಜಕ್ಕೆ ಅಸಾಧಾರಣ ಕೊಡುಗೆಗಳನ್ನು ನೀಡುವ ಸಾಮಾನ್ಯ ವ್ಯಕ್ತಿಗಳನ್ನು ಗುರುತಿಸಲು “ಜನರ ಪದ್ಮ” ಎಂದು ಕರೆಯಲ್ಪಡುವ ಈ ಉಪಕ್ರಮವನ್ನು ಆರಂಭಿಸಲಾಗುವುದು. ಇದು ತಳಮಟ್ಟದ ಸಾಧಕರಿಗೆ ರಾಷ್ಟ್ರೀಯ ಮನ್ನಣೆಯನ್ನು ತಂದಿದೆ. ಜನರೇ ತಮ್ಮ ನಡುವಿನ ಎಲೆಮರೆಯ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಗಳಿಗೆ ಶಿಫಾರಸು ಮಾಡಬಹುದು.

ಇದನ್ನೂ ಓದಿ: Padma Awards: 2025ರಲ್ಲಿ 10 ಉದ್ಯಮಿಗಳಿಗೆ ಪದ್ಮಪ್ರಶಸ್ತಿ

ಮಹಿಳಾ ಸಾಧಕರು, ಸಮಾಜದ ದುರ್ಬಲ ವರ್ಗಗಳ ಸದಸ್ಯರು, SC/ST ಸಮುದಾಯಗಳು, ಅಂಗವಿಕಲ ವ್ಯಕ್ತಿಗಳು (ದಿವ್ಯಾಂಗ ವ್ಯಕ್ತಿಗಳು), ನಿಸ್ವಾರ್ಥ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ವ್ಯಕ್ತಿಗಳು ಅರ್ಹ ಅಭ್ಯರ್ಥಿಗಳು ಗುರುತಿಸಲ್ಪಡದೆ ಹೋಗದಂತೆ ನೋಡಿಕೊಳ್ಳಲು ಸ್ವಯಂ ನಾಮನಿರ್ದೇಶನಗಳನ್ನು ಪ್ರೋತ್ಸಾಹಿಸಲಾಗುತ್ತದೆ.

ನಾಮನಿರ್ದೇಶನಗಳು ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು. ಅವುಗಳೆಂದರೆ:

ನಾಮನಿರ್ದೇಶಿತರ ಆಯಾ ಕ್ಷೇತ್ರದಲ್ಲಿನ ಸಾಧನೆಗಳು ಮತ್ತು ಕೊಡುಗೆಗಳನ್ನು ವಿವರಿಸುವ ಉಲ್ಲೇಖ (ಗರಿಷ್ಠ 800 ಪದಗಳು).

ರಾಷ್ಟ್ರೀಯ ಪುರಸ್ಕಾರ ಪೋರ್ಟಲ್‌ನಲ್ಲಿ ಲಭ್ಯವಿರುವ ನಿಗದಿತ ಸ್ವರೂಪದಲ್ಲಿ ಅಗತ್ಯವಿರುವ ಪೋಷಕ ದಾಖಲೆಗಳು.

ಪ್ರಶಸ್ತಿ ಶಾಸನಗಳು ಮತ್ತು ನಿಯಮಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಗೃಹ ವ್ಯವಹಾರ ಸಚಿವಾಲಯದ ವೆಬ್‌ಸೈಟ್ (mha.gov.in) ಮತ್ತು ಪದ್ಮ ಪ್ರಶಸ್ತಿ ಪೋರ್ಟಲ್ (padmaawards.gov.in)ನಲ್ಲಿರುವ “ಪ್ರಶಸ್ತಿಗಳು ಮತ್ತು ಪದಕಗಳು” ವಿಭಾಗದ ಅಡಿಯಲ್ಲಿ ಪ್ರವೇಶಿಸಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಹಲವೆಡೆ ಆಲಿಕಲ್ಲು ಮಳೆ: ವರ್ಷದ ಮೊದಲ ಮಳೆಗೆ ಜನ ಖುಷ್
ಮೈಸೂರಿನ ಹಲವೆಡೆ ಆಲಿಕಲ್ಲು ಮಳೆ: ವರ್ಷದ ಮೊದಲ ಮಳೆಗೆ ಜನ ಖುಷ್
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ