AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಿ ನಾಗರಿಕರಿಗೆ ವೀಸಾ ಸೇವೆ ರದ್ದು, ಏಪ್ರಿಲ್ 27ರೊಳಗೆ ಭಾರತ ಬಿಟ್ಟು ತೆರಳಲು ಆದೇಶ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಸರ್ಕಾರ ಪಾಕಿಸ್ತಾನಿ ನಾಗರಿಕರಿಗೆ ವೀಸಾ ನೀಡದಂತೆ ಆದೇಶಿಸಿದೆ. ಈಗಾಗಲೇ ವೀಸಾ ಪಡೆದು ಬಂದವರಿಗೆ ಭಾರತ ಬಿಟ್ಟು ಹೋಗಲು ಏಪ್ರಿಲ್ 27ರವರೆಗೆ ಗಡುವು ನೀಡಲಾಗಿದೆ. ಮಂಗಳವಾರ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನ ಪ್ರಾಣ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಭಾರತ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಪಾಕಿಸ್ತಾನಿ ನಾಗರಿಕರಿಗೆ ವೀಸಾ ಸೇವೆ ರದ್ದು, ಏಪ್ರಿಲ್ 27ರೊಳಗೆ ಭಾರತ ಬಿಟ್ಟು ತೆರಳಲು ಆದೇಶ
Wagah Border
ಸುಷ್ಮಾ ಚಕ್ರೆ
|

Updated on: Apr 24, 2025 | 5:30 PM

Share

ನವದೆಹಲಿ, ಏಪ್ರಿಲ್ 24: ಭಾರತ ಪಾಕಿಸ್ತಾನಿ (Pakistan) ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ. ಏಪ್ರಿಲ್ 27ರೊಳಗೆ ಭಾರತವನ್ನು ತೊರೆಯುವಂತೆ ಸೂಚಿಸಿದೆ. ನಿನ್ನೆ ನಡೆದ ಭದ್ರತಾ ಸಂಪುಟ ಸಮಿತಿಯ (CCS) ನಿರ್ಣಯದ ನಂತರ, ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ನಿರ್ಧಾರದ ಭಾಗವಾಗಿ, ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ಎಲ್ಲಾ ಭಾರತೀಯ ವೀಸಾಗಳನ್ನು ಏಪ್ರಿಲ್ 27 ರಿಂದ ರದ್ದುಗೊಳಿಸಲಾಗುವುದು.

ಪಹಲ್ಗಾಮ್ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನಿ ನಾಗರಿಕರಿಗೆ ಈಗಾಗಲೇ ನೀಡಲಾದ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಪಾಕ್ ನಾಗರೀಕರಿಗೆ ನೀಡಿದ ವೀಸಾಗಳನ್ನು ಏಪ್ರಿಲ್ 27ರಿಂದ ರದ್ದು ಮಾಡಲಾಗುವುದು. ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ವೈದ್ಯಕೀಯ ವೀಸಾಗಳು ಕೇವಲ ಏಪ್ರಿಲ್ 29ರವರೆಗೆ ಮಾತ್ರ ಮಾನ್ಯವಾಗಿರಲಿದೆ. ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ನಾಗರಿಕರು ತಮ್ಮ ವೀಸಾದ ಮಾನ್ಯತೆಯ ಅವಧಿ ಮುಗಿಯುವ ಮೊದಲು ದೇಶವನ್ನು ತೊರೆಯಬೇಕು.

ಇದನ್ನೂ ಓದಿ
Image
ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ಪಾಕಿಸ್ತಾನದ ವಾಯುಮಾರ್ಗ ಬಂದ್, ಭಾರತದೊಂದಿಗಿನ ವ್ಯಾಪಾರವೂ ಸ್ಥಗಿತ

ಹಾಗೇ, ಭಾರತೀಯ ನಾಗರಿಕರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ. ಪಾಕಿಸ್ತಾನದಲ್ಲಿರುವ ಭಾರತೀಯ ನಾಗರಿಕರು ಆದಷ್ಟು ಬೇಗ ಭಾರತಕ್ಕೆ ಮರಳಲು ಸೂಚನೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ 26 ಜನರ ಜೀವವನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಭಾರತೀಯ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಸಚಿವಾಲಯವು ಭಾರತೀಯ ಪ್ರಜೆಗಳನ್ನು ಒತ್ತಾಯಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್