ಕದನ ವಿರಾಮ ಉಲ್ಲಂಘನೆಗಳ ವಿರುದ್ಧ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ

ಕಾಶ್ಮೀರದ ಪಹಲ್ಗಾಮ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧದಲ್ಲಿ ಬಿರುಕು ಹೆಚ್ಚಾಗಿದೆ. ಇಂದು ಭಾರತ ಮತ್ತು ಪಾಕಿಸ್ತಾನ ಸೇನೆ ಮಾತುಕತೆ ನಡೆಸಿದ್ದು, ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗಳ ವಿರುದ್ಧ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ನೀಡಿದೆ. ಗಡಿಯಲ್ಲಿ ಪಾಕ್​ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆಯಾಗಿದೆ. ಪಾಕಿಸ್ತಾನದಿಂದ ಗುಂಡಿನ ದಾಳಿ ನಡೆದಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ ಪರ್ಗವಾಲ್ ಸೆಕ್ಟರ್​ನಲ್ಲಿ ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ ನಡೆದಿದೆ.

ಕದನ ವಿರಾಮ ಉಲ್ಲಂಘನೆಗಳ ವಿರುದ್ಧ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ
Loc

Updated on: Apr 30, 2025 | 6:07 PM

ನವದೆಹಲಿ, ಏಪ್ರಿಲ್ 30: ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terror Attack) ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ನಿನ್ನೆ (ಮಂಗಳವಾರ) ಹಾಟ್‌ಲೈನ್‌ನಲ್ಲಿ ಪಾಕಿಸ್ತಾನದ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗಳ ಕುರಿತು ಚರ್ಚಿಸಲು ಮಾತುಕತೆ ನಡೆಸಿದ್ದಾರೆ. ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆಯಿಂದಾಗಿರುವ ಅಪ್ರಚೋದಿತ ಉಲ್ಲಂಘನೆಗಳ ವಿರುದ್ಧ ಭಾರತ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಉದ್ವಿಗ್ನತೆ ಹೆಚ್ಚಿದೆ, ಅಲ್ಲಿ ಪಾಕಿಸ್ತಾನದ ಪದೇ ಪದೇ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಪಡೆಗಳು ಬಲವಾದ ಪ್ರತೀಕಾರದ ಪ್ರತಿಕ್ರಿಯೆಯನ್ನು ನೀಡಿವೆ. ಇದರ ನಂತರ, ಪಾಕಿಸ್ತಾನಿ ಸೈನಿಕರು ಹಲವಾರು ಪೋಸ್ಟ್‌ಗಳನ್ನು ತೆಗೆದುಹಾಕಿ, ಧ್ವಜಗಳನ್ನು ತೆಗೆದುಹಾಕಿದ ಬಗ್ಗೆ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಉದ್ವಿಗ್ನತೆ ತೀವ್ರವಾಗಿ ಹೆಚ್ಚಿದೆ, ಭಾರತೀಯ ಸೇನೆಯು ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಬಲವಾದ ಪ್ರತಿದಾಳಿ ನಡೆಸುತ್ತಿದೆ. ಅಧಿಕೃತ ಮೂಲಗಳ ಪ್ರಕಾರ, ಪಾಕಿಸ್ತಾನಿ ಪಡೆಗಳು ತಮ್ಮ ಹಲವಾರು ಫಾರ್ವರ್ಡ್ ಪೋಸ್ಟ್‌ಗಳನ್ನು ತ್ಯಜಿಸಿ ರಾಷ್ಟ್ರೀಯ ಧ್ವಜಗಳನ್ನು ತೆಗೆದುಹಾಕಿವೆ ಎಂದು ವರದಿಯಾಗಿದೆ. ಹಾಟ್‌ಲೈನ್ ಮೂಲಕ ಮಾತುಕತೆ ನಡೆಸುವಾಗ ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘನೆಯ ವಿರುದ್ಧ ಭಾರತ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. ರಕ್ಷಣಾ ಮೂಲಗಳ ಪ್ರಕಾರ, ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಈ ಪುನರಾವರ್ತಿತ ಉಲ್ಲಂಘನೆಗಳ ಬಗ್ಗೆ ಭಾರತ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಇದನ್ನೂ ಓದಿ: ಸೇನೆಗೆ ಮೋದಿಯಿಂದ ಪೂರ್ತಿ ಅಧಿಕಾರ, ಪಾಕಿಸ್ತಾನಕ್ಕೆ ಕೈ ಕೊಟ್ಟ ಟರ್ಕಿ, ವಿಶ್ವ ಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ತರಾಟೆ; ಇಂದಿನ ಬೆಳವಣಿಗೆಗಳಿವು

ನಿನ್ನೆ ಬೆಳಿಗ್ಗೆಯವರೆಗೆ, ಕದನ ವಿರಾಮ ಉಲ್ಲಂಘನೆಗಳು ಎಲ್‌ಒಸಿಗೆ ಸೀಮಿತವಾಗಿತ್ತು. ಆದರೆ, ನಿನ್ನೆ ತಡರಾತ್ರಿ ಪಾಕಿಸ್ತಾನಿ ಪಡೆಗಳು ಜಮ್ಮುವಿನ ಪರ್ಗ್ವಾಲ್ ಸೆಕ್ಟರ್‌ನಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಗುಂಡು ಹಾರಿಸಿದಾಗ ಪರಿಸ್ಥಿತಿ ಉಲ್ಬಣಗೊಂಡಿತು. ಪಾಕಿಸ್ತಾನಿ ಸೇನೆಯು ಭಾರತೀಯ ಮಿಲಿಟರಿ ದಾಳಿಗೆ ಸಿದ್ಧತೆಗಳನ್ನು ಪ್ರಾರಂಭಿಸಿದೆ ಎಂದು ಹೇಳಿಕೊಂಡ ನಂತರ ಸೇನೆ ಮತ್ತು ನೌಕಾಪಡೆ ಎರಡೂ ಜಾಗರೂಕವಾಗಿವೆ. ಪಾಕಿಸ್ತಾನ ವಾಯುಪಡೆಯು ಹಾರಾಟ ಕಾರ್ಯಾಚರಣೆಗಳನ್ನು 50% ಕ್ಕಿಂತ ಹೆಚ್ಚು ಕಡಿಮೆ ಮಾಡಿದೆ. ವಾಯುಪ್ರದೇಶದಲ್ಲಿ ಗೊಂದಲವನ್ನು ತಪ್ಪಿಸಲು ಅಗತ್ಯ ಕಾರ್ಯಾಚರಣೆಗಳಿಗೆ ಮಾತ್ರ ಚಟುವಟಿಕೆಯನ್ನು ಸೀಮಿತಗೊಳಿಸಿದೆ ಎಂದು ಮಿಲಿಟರಿ ಮೂಲಗಳು ತಿಳಿಸಿವೆ.


ಪಾಕಿಸ್ತಾನದ ಸಚಿವರೊಬ್ಬರು ಈಗಾಗಲೇ ಸೇನೆಯ ಮನಸ್ಥಿತಿಯನ್ನು ಸೂಚಿಸಿದ್ದು, ಮುಂದಿನ 24ರಿಂದ 36 ಗಂಟೆಗಳಲ್ಲಿ ಭಾರತೀಯ ದಾಳಿ ನಡೆಯುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಪರ್ಗ್ವಾಲ್ ವಲಯದಲ್ಲಿ ಕದನ ವಿರಾಮ ಉಲ್ಲಂಘನೆಯ ನಂತರ, ಭಾರತೀಯ ಪಡೆಗಳು ಪಾಕಿಸ್ತಾನದ ಆಕ್ರಮಣಕ್ಕೆ ತ್ವರಿತವಾಗಿ ಹೆಚ್ಚುವರಿ ಬಿಎಸ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಿವೆ. ಮೂಲಗಳ ಪ್ರಕಾರ, ಈ ಪ್ರದೇಶದಲ್ಲಿ ಬೀಡುಬಿಟ್ಟಿರುವ ಸೇನಾ ಸಿಬ್ಬಂದಿ ಪ್ರಸ್ತುತ ಪರಿಸ್ಥಿತಿ ಮತ್ತು ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆಗಳ ಬಗ್ಗೆ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಿಗೆ (ಡಿಜಿಎಂಒ) ವಿವರಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಪರ ಯಾರೇ ಘೋಷಣೆ ಕೂಗಿದರೂ ಅದು ತಪ್ಪು ಮತ್ತು ದೇಶದ್ರೋಹ: ಸಿದ್ದರಾಮಯ್ಯ, ಸಿಎಂ

ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಬೇಟೆಯಾಡುವುದಾಗಿ ಭಾರತ ಹೇಳಿಕೆ ನೀಡಿದ ನಂತರ ಪಾಕಿಸ್ತಾನ ಸೇನೆಯನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಸಾವನ್ನಪ್ಪಿದ ನಂತರ ಭಾರತವು ಇಸ್ಲಾಮಾಬಾದ್ ವಿರುದ್ಧ ಕಠಿಣ ನಿಲುವು ತೆಗೆದುಕೊಂಡಿತ್ತು. ಇದಾದ ನಂತರ ಪಾಕಿಸ್ತಾನದ ಹತಾಶೆಯ ಹಿನ್ನೆಲೆಯಲ್ಲಿ ಪಾಕಿಸ್ತಾನ ನಿರಂತರ ಕದನ ವಿರಾಮ ಉಲ್ಲಂಘನೆಯನ್ನು ಮಾಡುತ್ತಿದೆ.

65 ವರ್ಷಗಳಷ್ಟು ಹಳೆಯದಾದ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು, ಅಟ್ಟಾರಿ ಭೂ-ಗಡಿ ದಾಟುವಿಕೆಯನ್ನು ಮುಚ್ಚುವುದು ಮತ್ತು ಪಾಕಿಸ್ತಾನಿ ಮಿಲಿಟರಿ ಅಟ್ಯಾಚ್‌ಗಳನ್ನು ಹೊರಹಾಕುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತ ದಿಟ್ಟ ಕ್ರಮಗಳನ್ನು ಘೋಷಿಸಿದೆ. ಅಟ್ಟಾರಿ ಭೂ ಗಡಿಯ ಮೂಲಕ ದೇಶವನ್ನು ಪ್ರವೇಶಿಸಿದ ಎಲ್ಲಾ ಪಾಕಿಸ್ತಾನಿಗಳನ್ನು ಮೇ 1ರೊಳಗೆ ಹೊರಹೋಗುವಂತೆ ಭಾರತ ಸೂಚಿಸಿದೆ. ಹಾಗೇ, ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ತನ್ನ ವಾಯುಪ್ರದೇಶವನ್ನು ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಮುಚ್ಚುವುದಾಗಿ ಘೋಷಿಸಿದೆ. ಶಿಮ್ಲಾ ಒಪ್ಪಂದ ರದ್ದು, ಭಾರತದೊಂದಿಗಿನ ವ್ಯಾಪಾರವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ