AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿ; ಕಾಶ್ಮೀರದ 1,500 ಜನರು ವಶಕ್ಕೆ

ಜಮ್ಮು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ಜನಪ್ರಿಯ ಪ್ರವಾಸಿ ತಾಣದ ಮೇಲೆ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಕೊಂದಿದ್ದಾರೆ. ಅವರಲ್ಲಿ ಹೆಚ್ಚಿನವರು ಇತರ ರಾಜ್ಯಗಳಿಂದ ಬಂದವರಾಗಿದ್ದರು. 2019ರಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರ ಕಾಶ್ಮೀರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಉಗ್ರರಿಗೆ ಆಶ್ರಯ ನೀಡಿದವರನ್ನು ಹುಡುಕುವಲ್ಲಿ ತನಿಖಾ ಸಂಸ್ಥೆಗಳು ನಿರತವಾಗಿವೆ. ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿ; ಕಾಶ್ಮೀರದ 1,500 ಜನರು ವಶಕ್ಕೆ
Indian Army In Pahalgam
Follow us
ಸುಷ್ಮಾ ಚಕ್ರೆ
|

Updated on: Apr 23, 2025 | 9:12 PM

ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terrorists Attack) ನಿನ್ನೆ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಸುಮಾರು 1,500 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ದಾಳಿಯ ನಂತರ ಕಾಶ್ಮೀರದಲ್ಲಿ ದೊಡ್ಡ ಕಾರ್ಯಾಚರಣೆ ನಡೆಸಲಾಗಿದ್ದು, ರಕ್ಷಣಾ ಸಂಸ್ಥೆಗಳು 1500 ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿವೆ. ಅವರ ವಿಚಾರಣೆ ನಡೆಯುತ್ತಿದೆ. ಉಗ್ರರಿಗೆ ಆಶ್ರಯ ನೀಡಿದವರನ್ನು ಹುಡುಕುವಲ್ಲಿ ತನಿಖಾ ಸಂಸ್ಥೆಗಳು ನಿರತವಾಗಿವೆ. ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ಪಹಲ್ಗಾಮ್ ದಾಳಿಯ ನಂತರ, ಭದ್ರತಾ ಸಂಸ್ಥೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಮುಖ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಮೂಲಗಳ ಪ್ರಕಾರ, ಕಾಶ್ಮೀರ ಕಣಿವೆಯಾದ್ಯಂತ 1500ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಈ ಜನರನ್ನು ವಿವಿಧ ಜಿಲ್ಲೆಗಳು ಮತ್ತು ಸೂಕ್ಷ್ಮ ಪ್ರದೇಶಗಳಿಂದ ಬಂಧಿಸಲಾಗಿದೆ. ಇವರಲ್ಲಿ ಭೂಗತ ಕೆಲಸಗಾರರು (OGWs), ಮಾಜಿ ಉಗ್ರಗಾಮಿಗಳು ಮತ್ತು ಈಗಾಗಲೇ FIR ದಾಖಲಾಗಿರುವವರು ಅಥವಾ ಗುಪ್ತಚರ ವೀಕ್ಷಣಾ ಪಟ್ಟಿಯಲ್ಲಿರುವವರು ಸೇರಿದ್ದಾರೆ. ದಾಳಿಕೋರರಿಗೆ ಆಶ್ರಯ ನೀಡಿದವರನ್ನು ಹುಡುಕುವಲ್ಲಿ ತನಿಖಾ ಸಂಸ್ಥೆಗಳು ನಿರತವಾಗಿವೆ. ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ.

ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ: ಮೃತ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸರ್ಕಾರ

ಇದನ್ನೂ ಓದಿ
Image
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಪಹಲ್ಗಾಮ್​ಗೆ ಬಂದು ಪ್ರವಾಸಿಗರನ್ನು ಹತ್ಯೆ ಮಾಡಲು ಉಗ್ರರಿಗೆ ಯಾರು ಆಶ್ರಯ ನೀಡಿದರು, ಸಹಾಯ ಮಾಡಿದರು ಅಥವಾ ಶಸ್ತ್ರಾಸ್ತ್ರಗಳನ್ನು ಒದಗಿಸಿದರು ಎಂಬುದನ್ನು ಕಂಡುಹಿಡಿಯಲು ಈ ಎಲ್ಲ ಜನರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಗುಪ್ತಚರ ಸಂಸ್ಥೆಗಳ ಮಾಹಿತಿಗಳನ್ನು ಒಟ್ಟುಗೂಡಿಸಿ, ಪ್ರತಿಯೊಬ್ಬ ಶಂಕಿತನ ಸಂಪರ್ಕಗಳನ್ನು ತನಿಖೆ ಮಾಡಲಾಗುತ್ತಿದೆ.

ಈ ದಾಳಿಯ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗುತ್ತಿದ್ದು, ಧಾರ್ಮಿಕ, ರಾಜಕೀಯ ಮತ್ತು ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ವಿಶೇಷ ಕಣ್ಗಾವಲು ಇರಿಸಲಾಗಿದೆ. ಭಯೋತ್ಪಾದನೆಯ ವಿರುದ್ಧದ ಈ ಹೋರಾಟವು ಈಗ ನಿರ್ಣಾಯಕ ಹಂತವನ್ನು ತಲುಪಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: Pahalgam Terror Attack: ಪಹಲ್ಗಾಮ್​ನಲ್ಲಿ ಉಗ್ರರ ಗುಂಡಿನ ದಾಳಿ, 13 ಕನ್ನಡಿಗರ ಜೀವ ಉಳಿಸಿದ ಗುಡ್ಡ!

ಇನ್ನು, ಪಹಲ್ಗಾಮ್ ದಾಳಿಯ ಹೊಣೆಯನ್ನು ಟಿಆರ್​ಎಫ್ ಸಂಘಟನೆ ಹೊತ್ತಿಕೊಂಡಿದೆ. ಟಿಆರ್‌ಎಫ್ ಭಯೋತ್ಪಾದಕರು ಪಾಕಿಸ್ತಾನದಿಂದ ತರಬೇತಿ ಮತ್ತು ಹಣಕಾಸು ಪಡೆಯುತ್ತಿದ್ದಾರೆ ಎಂದು ನಿರಂತರವಾಗಿ ಆರೋಪಿಸಲಾಗಿದೆ. ಕಾಶ್ಮೀರ ಕಣಿವೆಯಲ್ಲಿ ಟಿಆರ್‌ಎಫ್ ರಕ್ತಪಾತಕ್ಕೆ ಕಾರಣವಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಈ ಸಂಘಟನೆಯು ಅನೇಕ ದೊಡ್ಡ ಭಯೋತ್ಪಾದಕ ದಾಳಿಗಳನ್ನು ನಡೆಸಿತ್ತು. ಟಿಆರ್‌ಎಫ್ ಅನ್ನು ಲಷ್ಕರ್-ಎ-ತೊಯ್ಬಾದ ಭಾಗವೆಂದು ಪರಿಗಣಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!