AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ. 41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ. ಕೂಡಲೇ […]

ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..
KUSHAL V
| Edited By: ಸಾಧು ಶ್ರೀನಾಥ್​|

Updated on: Aug 20, 2020 | 4:26 PM

Share

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ.

ಕೂಡಲೇ ಕಾಮತ್​ ತಾಯಿ, ಮಗನನ್ನ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಅಷ್ಟರೊಳಗೆ ರಾಮ್​ ಕಾಮತ್​ ಮೃತಪಟ್ಟಿದ್ರು ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಮೃತದೇಹದ ಬಳಿ ಸೂಸೈಡ್​ ನೋಟ್​ ಪತ್ತೆಯಾಗಿದ್ದು ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಕಾಮತ್​ ಉಲ್ಲೇಖಿಸಿದ್ದಾರಂತೆ.

ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!