AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCO Foreign Minister’s meeting: ಗೋವಾದಲ್ಲಿ ಎಸ್‌ಸಿಒ ಸಭೆಗೂ ಮುನ್ನ ಪಾಕ್ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಸಂದೇಶ

ಎಸ್‌ಸಿಒಗೆ ಪಾಕ್‌ನ ಬದ್ಧತೆಯನ್ನು ಒತ್ತಿ ಹೇಳಿದ ಅವರು ಈ ಭೇಟಿಯು ಆ ಬದ್ಧತೆಯ ಸೂಚನೆಯಾಗಿದೆ ಎಂದಿದ್ದಾರೆ.ಇಂದು ಮತ್ತು ನಾಳೆ ಗೋವಾದಲ್ಲಿ ವಿದೇಶಾಂಗ ಸಚಿವರ ಎಸ್‌ಸಿಒ ಸಭೆ ನಡೆಯಲಿದೆ.

SCO Foreign Minister’s meeting: ಗೋವಾದಲ್ಲಿ ಎಸ್‌ಸಿಒ ಸಭೆಗೂ ಮುನ್ನ ಪಾಕ್ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಸಂದೇಶ
ಬಿಲಾವಲ್ ಭುಟ್ಟೋ ಜರ್ದಾರಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 04, 2023 | 4:40 PM

Share

ಪಾಕಿಸ್ತಾನದ (Pakistan) ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto Zardari) ಅವರು ಶಾಂಘೈ ಸಹಕಾರ ಸಂಘಟನೆಯ (Shanghai Cooperation Organisation) ವಿದೇಶಾಂಗ ಸಚಿವರ ಕೌನ್ಸಿಲ್ ಸಭೆಗಾಗಿ ಗೋವಾ ತಲುಪಿದ್ದಾರೆ. 2011ರಲ್ಲಿ ಹಿನಾ ರಬ್ಬಾನಿ ಖಾರ್ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಮೊದಲ ಪಾಕ್ ವಿದೇಶಾಂಗ ಮಂತ್ರಿಯಾಗಿದ್ದಾರೆ ಜರ್ದಾರಿ. ಎಸ್‌ಸಿಒಗೆ ಪಾಕ್‌ನ ಬದ್ಧತೆಯನ್ನು ಒತ್ತಿ ಹೇಳಿದ ಅವರು ಈ ಭೇಟಿಯು ಆ ಬದ್ಧತೆಯ ಸೂಚನೆಯಾಗಿದೆ ಎಂದಿದ್ದಾರೆ.ಇಂದು ಮತ್ತು ನಾಳೆ ಗೋವಾದಲ್ಲಿ ವಿದೇಶಾಂಗ ಸಚಿವರ ಎಸ್‌ಸಿಒ ಸಭೆ ನಡೆಯಲಿದೆ.

ನಾನು ಇಂದು ಭಾರತಕ್ಕೆ ಹೋಗುತ್ತಿದ್ದೇನೆ, ಅಲ್ಲಿ ನಾನು ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಮಂತ್ರಿಗಳ ಕೌನ್ಸಿಲ್ (CFM) ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದ ನಿಯೋಗದ ನೇತೃತ್ವ ವಹಿಸಿದ್ದೇನೆ. ನನ್ನ ಉಪಸ್ಥಿತಿಯು ಪಾಕಿಸ್ತಾನಕ್ಕೆಎಸ್‌ಸಿಒ ಎಷ್ಟು ಮುಖ್ಯವಾಗಿದೆ ಮತ್ತು ಅದರ ಸದಸ್ಯತ್ವವನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂಬುದನ್ನು ತೋರಿಸುತ್ತದೆ. ಇತರ ವಿದೇಶಾಂಗ ಮಂತ್ರಿಗಳೊಂದಿಗೆ ದ್ವಿಪಕ್ಷೀಯವಾಗಿ ತೊಡಗಿಸಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ ಅವರು ಮಿತ್ರ ರಾಷ್ಟ್ರಗಳ ಸಹವರ್ತಿಗಳೊಂದಿಗೆ ಚರ್ಚೆಗಳನ್ನು ನಡೆಸುವ ನಿರೀಕ್ಷೆಯಲ್ಲಿದ್ದಾರೆ.

ಚೀನಾದ ಕ್ವಿನ್ ಗ್ಯಾಂಗ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದಾಗ್ಯೂ, ಭಾರತಕ್ಕೆ ತಮ್ಮ ಭೇಟಿಯನ್ನು ದ್ವಿಪಕ್ಷೀಯ ಸಂಬಂಧದ ದೃಷ್ಟಿಯಿಂದ ನೋಡಬಾರದು ಎಂದು ಜರ್ದಾರಿ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ನನ್ನ ರಾಜ್ಯ ಮಣಿಪುರ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ: ಮೋದಿ, ಅಮಿತ್ ಶಾಗೆ ಮೇರಿ ಕೋಮ್ ಮನವಿ

ನಾವು ಎಸ್ ಸಿಒಗೆ ಬದ್ಧರಾಗಿದ್ದೇವೆ ಮತ್ತು ಈ ಭೇಟಿಯನ್ನು ದ್ವಿಪಕ್ಷೀಯವಾಗಿ ನೋಡಬಾರದು ಎಂದಿದ್ದರು ಅವರು. 2011 ರ ಹಿನಾ ರಬ್ಬಾನಿ ಖಾರ್ ಅವರ ಪ್ರವಾಸದ ನಂತರ ಪಾಕ್ ವಿದೇಶಾಂಗ ಸಚಿವ ಜರ್ದಾರಿ ಅವರ ಮೊದಲ ಭಾರತದ ಭೇಟಿ ಇದಾಗಿದೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಔಪಚಾರಿಕ ಭೇಟಿ ಇರುವುದಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ