SCO Foreign Minister’s meeting: ಗೋವಾದಲ್ಲಿ ಎಸ್‌ಸಿಒ ಸಭೆಗೂ ಮುನ್ನ ಪಾಕ್ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಸಂದೇಶ

ಎಸ್‌ಸಿಒಗೆ ಪಾಕ್‌ನ ಬದ್ಧತೆಯನ್ನು ಒತ್ತಿ ಹೇಳಿದ ಅವರು ಈ ಭೇಟಿಯು ಆ ಬದ್ಧತೆಯ ಸೂಚನೆಯಾಗಿದೆ ಎಂದಿದ್ದಾರೆ.ಇಂದು ಮತ್ತು ನಾಳೆ ಗೋವಾದಲ್ಲಿ ವಿದೇಶಾಂಗ ಸಚಿವರ ಎಸ್‌ಸಿಒ ಸಭೆ ನಡೆಯಲಿದೆ.

SCO Foreign Minister’s meeting: ಗೋವಾದಲ್ಲಿ ಎಸ್‌ಸಿಒ ಸಭೆಗೂ ಮುನ್ನ ಪಾಕ್ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಸಂದೇಶ
ಬಿಲಾವಲ್ ಭುಟ್ಟೋ ಜರ್ದಾರಿ
Follow us
|

Updated on: May 04, 2023 | 4:40 PM

ಪಾಕಿಸ್ತಾನದ (Pakistan) ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto Zardari) ಅವರು ಶಾಂಘೈ ಸಹಕಾರ ಸಂಘಟನೆಯ (Shanghai Cooperation Organisation) ವಿದೇಶಾಂಗ ಸಚಿವರ ಕೌನ್ಸಿಲ್ ಸಭೆಗಾಗಿ ಗೋವಾ ತಲುಪಿದ್ದಾರೆ. 2011ರಲ್ಲಿ ಹಿನಾ ರಬ್ಬಾನಿ ಖಾರ್ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಮೊದಲ ಪಾಕ್ ವಿದೇಶಾಂಗ ಮಂತ್ರಿಯಾಗಿದ್ದಾರೆ ಜರ್ದಾರಿ. ಎಸ್‌ಸಿಒಗೆ ಪಾಕ್‌ನ ಬದ್ಧತೆಯನ್ನು ಒತ್ತಿ ಹೇಳಿದ ಅವರು ಈ ಭೇಟಿಯು ಆ ಬದ್ಧತೆಯ ಸೂಚನೆಯಾಗಿದೆ ಎಂದಿದ್ದಾರೆ.ಇಂದು ಮತ್ತು ನಾಳೆ ಗೋವಾದಲ್ಲಿ ವಿದೇಶಾಂಗ ಸಚಿವರ ಎಸ್‌ಸಿಒ ಸಭೆ ನಡೆಯಲಿದೆ.

ನಾನು ಇಂದು ಭಾರತಕ್ಕೆ ಹೋಗುತ್ತಿದ್ದೇನೆ, ಅಲ್ಲಿ ನಾನು ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಮಂತ್ರಿಗಳ ಕೌನ್ಸಿಲ್ (CFM) ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದ ನಿಯೋಗದ ನೇತೃತ್ವ ವಹಿಸಿದ್ದೇನೆ. ನನ್ನ ಉಪಸ್ಥಿತಿಯು ಪಾಕಿಸ್ತಾನಕ್ಕೆಎಸ್‌ಸಿಒ ಎಷ್ಟು ಮುಖ್ಯವಾಗಿದೆ ಮತ್ತು ಅದರ ಸದಸ್ಯತ್ವವನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂಬುದನ್ನು ತೋರಿಸುತ್ತದೆ. ಇತರ ವಿದೇಶಾಂಗ ಮಂತ್ರಿಗಳೊಂದಿಗೆ ದ್ವಿಪಕ್ಷೀಯವಾಗಿ ತೊಡಗಿಸಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ ಅವರು ಮಿತ್ರ ರಾಷ್ಟ್ರಗಳ ಸಹವರ್ತಿಗಳೊಂದಿಗೆ ಚರ್ಚೆಗಳನ್ನು ನಡೆಸುವ ನಿರೀಕ್ಷೆಯಲ್ಲಿದ್ದಾರೆ.

ಚೀನಾದ ಕ್ವಿನ್ ಗ್ಯಾಂಗ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದಾಗ್ಯೂ, ಭಾರತಕ್ಕೆ ತಮ್ಮ ಭೇಟಿಯನ್ನು ದ್ವಿಪಕ್ಷೀಯ ಸಂಬಂಧದ ದೃಷ್ಟಿಯಿಂದ ನೋಡಬಾರದು ಎಂದು ಜರ್ದಾರಿ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ನನ್ನ ರಾಜ್ಯ ಮಣಿಪುರ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ: ಮೋದಿ, ಅಮಿತ್ ಶಾಗೆ ಮೇರಿ ಕೋಮ್ ಮನವಿ

ನಾವು ಎಸ್ ಸಿಒಗೆ ಬದ್ಧರಾಗಿದ್ದೇವೆ ಮತ್ತು ಈ ಭೇಟಿಯನ್ನು ದ್ವಿಪಕ್ಷೀಯವಾಗಿ ನೋಡಬಾರದು ಎಂದಿದ್ದರು ಅವರು. 2011 ರ ಹಿನಾ ರಬ್ಬಾನಿ ಖಾರ್ ಅವರ ಪ್ರವಾಸದ ನಂತರ ಪಾಕ್ ವಿದೇಶಾಂಗ ಸಚಿವ ಜರ್ದಾರಿ ಅವರ ಮೊದಲ ಭಾರತದ ಭೇಟಿ ಇದಾಗಿದೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಔಪಚಾರಿಕ ಭೇಟಿ ಇರುವುದಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’