AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ‘ಹೊರೆ’: ದೆಹಲಿ ಮಾಲಿನ್ಯಕ್ಕೆ ಚೀನಾ, ಪಾಕಿಸ್ತಾನವೇ ಕಾರಣವಂತೆ!

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಪಕ್ಕದ ನೆರೆ ಹೊರೆಯಲ್ಲಿ ಅತಿ ಹೆಚ್ಚು ಪ್ರಮಾಣದ ಮಾಲಿನ್ಯಕ್ಕೆ ಪಾಕಿಸ್ತಾನ ಮತ್ತು ಚೀನಾವನ್ನು ದೂಷಿಸಬೇಕು. ಈ ಎರಡು ನೆರೆಯ ರಾಷ್ಟ್ರಗಳು ಯಾವುದಾದರೂ ಒಂದು ವಿಷಕಾರಿ ಅನಿಲವನ್ನು ಭಾರತಕ್ಕೆ ಬಿಡುಗಡೆ ಮಾಡಿರಬಹುದು ಎಂದು ಬಿಜೆಪಿ ನಾಯಕ ವಿನೀತ್ ಅಗರ್ವಾಲ್ ಶಾರ್ದಾ ಅನುಮಾನ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಅಥವಾ ಚೀನಾ ನಮಗೆ ಭಯಪಡುತ್ತವೆ. ಹಾಗಾಗಿ ಪಾಕಿಸ್ತಾನ ವಿಷಕಾರಿ ಅನಿಲವನ್ನು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ. ಇದನ್ನ ನಾವು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಹೇಳಿದರು. […]

ನೆರೆ 'ಹೊರೆ': ದೆಹಲಿ ಮಾಲಿನ್ಯಕ್ಕೆ ಚೀನಾ, ಪಾಕಿಸ್ತಾನವೇ ಕಾರಣವಂತೆ!
ಸಾಧು ಶ್ರೀನಾಥ್​
|

Updated on:Nov 06, 2019 | 3:43 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಪಕ್ಕದ ನೆರೆ ಹೊರೆಯಲ್ಲಿ ಅತಿ ಹೆಚ್ಚು ಪ್ರಮಾಣದ ಮಾಲಿನ್ಯಕ್ಕೆ ಪಾಕಿಸ್ತಾನ ಮತ್ತು ಚೀನಾವನ್ನು ದೂಷಿಸಬೇಕು. ಈ ಎರಡು ನೆರೆಯ ರಾಷ್ಟ್ರಗಳು ಯಾವುದಾದರೂ ಒಂದು ವಿಷಕಾರಿ ಅನಿಲವನ್ನು ಭಾರತಕ್ಕೆ ಬಿಡುಗಡೆ ಮಾಡಿರಬಹುದು ಎಂದು ಬಿಜೆಪಿ ನಾಯಕ ವಿನೀತ್ ಅಗರ್ವಾಲ್ ಶಾರ್ದಾ ಅನುಮಾನ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಅಥವಾ ಚೀನಾ ನಮಗೆ ಭಯಪಡುತ್ತವೆ. ಹಾಗಾಗಿ ಪಾಕಿಸ್ತಾನ ವಿಷಕಾರಿ ಅನಿಲವನ್ನು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ. ಇದನ್ನ ನಾವು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅಧಿಕಾರ ವಹಿಸಿಕೊಂಡಾಗಿನಿಂದಲೂ ಪಾಕಿಸ್ತಾನ ನಿರಾಶೆಗೊಂಡಿದೆ ಮತ್ತು ಯಾವುದೇ ಯುದ್ಧದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗದ ಕಾರಣ ಭಾರತದ ವಿರುದ್ಧ ಎಲ್ಲಾ ರೀತಿಯ ತಂತ್ರಗಳನ್ನು ಮಾಡುತ್ತಿದೆ ಎಂದು ಶಾರದಾ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹರಿಯಾಣ ಮತ್ತು ಪಂಜಾಬ್‌ನಲ್ಲಿ ರೈತರು ಕೃಷಿ ತ್ಯಾಜ್ಯವನ್ನು ಸುಡುವುದು ಹಾಗೂ ಕೈಗಾರಿಕೆಗಳೇ ದೆಹಲಿಯಲ್ಲಿ ಅಪಾಯಕಾರಿ ಮಾಲಿನ್ಯದ ಮಟ್ಟಕ್ಕೆ ಕಾರಣ ಎಂದು ದೂಷಿಸಿದ್ದಾರೆ ಆದರೆ ಕೃಷಿ ನಮ್ಮ ದೇಶದ ಬೆನ್ನೆಲುಬು ಯಾವುದೇ ಕಾರಣಕ್ಕೂ ಕೃಷಿಯನ್ನು ದೂಷಿಸಬಾರದು ಎಂದು ಅರವಿಂದ್ ಕೇಜ್ರಿವಾಲ್ ಅವರನ್ನು ಟೀಕಿಸಿದರು.

ಮಹಾಭಾರತ ಮಹಾಕಾವ್ಯದಲ್ಲಿ ಬರುವ ಶ್ರೀಕೃಷ್ಣ ಮತ್ತು ಅರ್ಜುನನನ್ನು ಪಿಎಂ ನರೇಂದ್ರ ಮೋದಿ ಮತ್ತು ಅಮಿತ್ ಶಾ ಗೆ ಹೋಲಿಸಿದ್ದಾರೆ. “ಇದು ಕೃಷ್ಣ ಮತ್ತು ಅರ್ಜುನರ ಸಮಯ. ಕೃಷ್ಣನಂತೆ ಮೋದಿ ಮತ್ತು ಅರ್ಜುನನಾಗಿ ಅಮಿತ್ ಶಾ ಒಟ್ಟಿಗೆ ಇದನ್ನು ನೋಡಿಕೊಳ್ಳುತ್ತಾರೆ” ಇವರಿಬ್ಬರು ಸೇರಿದರೆ ಯಾವುದೇ ಸಮಸ್ಯೆಯನ್ನಾದರೂ ಪರಿಹರಿಸಬಲ್ಲರು ಎಂದು ವಿನೀತ್ ಅಗರ್ವಾಲ್ ಶಾರ್ದಾ ಹೇಳಿದರು.

Published On - 3:19 pm, Wed, 6 November 19

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು