AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ‘ಹೊರೆ’: ದೆಹಲಿ ಮಾಲಿನ್ಯಕ್ಕೆ ಚೀನಾ, ಪಾಕಿಸ್ತಾನವೇ ಕಾರಣವಂತೆ!

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಪಕ್ಕದ ನೆರೆ ಹೊರೆಯಲ್ಲಿ ಅತಿ ಹೆಚ್ಚು ಪ್ರಮಾಣದ ಮಾಲಿನ್ಯಕ್ಕೆ ಪಾಕಿಸ್ತಾನ ಮತ್ತು ಚೀನಾವನ್ನು ದೂಷಿಸಬೇಕು. ಈ ಎರಡು ನೆರೆಯ ರಾಷ್ಟ್ರಗಳು ಯಾವುದಾದರೂ ಒಂದು ವಿಷಕಾರಿ ಅನಿಲವನ್ನು ಭಾರತಕ್ಕೆ ಬಿಡುಗಡೆ ಮಾಡಿರಬಹುದು ಎಂದು ಬಿಜೆಪಿ ನಾಯಕ ವಿನೀತ್ ಅಗರ್ವಾಲ್ ಶಾರ್ದಾ ಅನುಮಾನ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಅಥವಾ ಚೀನಾ ನಮಗೆ ಭಯಪಡುತ್ತವೆ. ಹಾಗಾಗಿ ಪಾಕಿಸ್ತಾನ ವಿಷಕಾರಿ ಅನಿಲವನ್ನು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ. ಇದನ್ನ ನಾವು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಹೇಳಿದರು. […]

ನೆರೆ 'ಹೊರೆ': ದೆಹಲಿ ಮಾಲಿನ್ಯಕ್ಕೆ ಚೀನಾ, ಪಾಕಿಸ್ತಾನವೇ ಕಾರಣವಂತೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 06, 2019 | 3:43 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಪಕ್ಕದ ನೆರೆ ಹೊರೆಯಲ್ಲಿ ಅತಿ ಹೆಚ್ಚು ಪ್ರಮಾಣದ ಮಾಲಿನ್ಯಕ್ಕೆ ಪಾಕಿಸ್ತಾನ ಮತ್ತು ಚೀನಾವನ್ನು ದೂಷಿಸಬೇಕು. ಈ ಎರಡು ನೆರೆಯ ರಾಷ್ಟ್ರಗಳು ಯಾವುದಾದರೂ ಒಂದು ವಿಷಕಾರಿ ಅನಿಲವನ್ನು ಭಾರತಕ್ಕೆ ಬಿಡುಗಡೆ ಮಾಡಿರಬಹುದು ಎಂದು ಬಿಜೆಪಿ ನಾಯಕ ವಿನೀತ್ ಅಗರ್ವಾಲ್ ಶಾರ್ದಾ ಅನುಮಾನ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಅಥವಾ ಚೀನಾ ನಮಗೆ ಭಯಪಡುತ್ತವೆ. ಹಾಗಾಗಿ ಪಾಕಿಸ್ತಾನ ವಿಷಕಾರಿ ಅನಿಲವನ್ನು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ. ಇದನ್ನ ನಾವು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅಧಿಕಾರ ವಹಿಸಿಕೊಂಡಾಗಿನಿಂದಲೂ ಪಾಕಿಸ್ತಾನ ನಿರಾಶೆಗೊಂಡಿದೆ ಮತ್ತು ಯಾವುದೇ ಯುದ್ಧದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗದ ಕಾರಣ ಭಾರತದ ವಿರುದ್ಧ ಎಲ್ಲಾ ರೀತಿಯ ತಂತ್ರಗಳನ್ನು ಮಾಡುತ್ತಿದೆ ಎಂದು ಶಾರದಾ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹರಿಯಾಣ ಮತ್ತು ಪಂಜಾಬ್‌ನಲ್ಲಿ ರೈತರು ಕೃಷಿ ತ್ಯಾಜ್ಯವನ್ನು ಸುಡುವುದು ಹಾಗೂ ಕೈಗಾರಿಕೆಗಳೇ ದೆಹಲಿಯಲ್ಲಿ ಅಪಾಯಕಾರಿ ಮಾಲಿನ್ಯದ ಮಟ್ಟಕ್ಕೆ ಕಾರಣ ಎಂದು ದೂಷಿಸಿದ್ದಾರೆ ಆದರೆ ಕೃಷಿ ನಮ್ಮ ದೇಶದ ಬೆನ್ನೆಲುಬು ಯಾವುದೇ ಕಾರಣಕ್ಕೂ ಕೃಷಿಯನ್ನು ದೂಷಿಸಬಾರದು ಎಂದು ಅರವಿಂದ್ ಕೇಜ್ರಿವಾಲ್ ಅವರನ್ನು ಟೀಕಿಸಿದರು.

ಮಹಾಭಾರತ ಮಹಾಕಾವ್ಯದಲ್ಲಿ ಬರುವ ಶ್ರೀಕೃಷ್ಣ ಮತ್ತು ಅರ್ಜುನನನ್ನು ಪಿಎಂ ನರೇಂದ್ರ ಮೋದಿ ಮತ್ತು ಅಮಿತ್ ಶಾ ಗೆ ಹೋಲಿಸಿದ್ದಾರೆ. “ಇದು ಕೃಷ್ಣ ಮತ್ತು ಅರ್ಜುನರ ಸಮಯ. ಕೃಷ್ಣನಂತೆ ಮೋದಿ ಮತ್ತು ಅರ್ಜುನನಾಗಿ ಅಮಿತ್ ಶಾ ಒಟ್ಟಿಗೆ ಇದನ್ನು ನೋಡಿಕೊಳ್ಳುತ್ತಾರೆ” ಇವರಿಬ್ಬರು ಸೇರಿದರೆ ಯಾವುದೇ ಸಮಸ್ಯೆಯನ್ನಾದರೂ ಪರಿಹರಿಸಬಲ್ಲರು ಎಂದು ವಿನೀತ್ ಅಗರ್ವಾಲ್ ಶಾರ್ದಾ ಹೇಳಿದರು.

Published On - 3:19 pm, Wed, 6 November 19

Follow Us
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ