AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ; ಬಿಎಸ್​ಎಫ್ ಯೋಧರು ಸೇರಿ ಐವರಿಗೆ ಗಾಯ

ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಭಾರತೀಯ ಪೋಸ್ಟ್‌ಗಳ ಮೇಲೆ ಪಾಕಿಸ್ತಾನಿ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಪಡೆಗಳು ಕೂಡ ಅದಕ್ಕೆ ಪ್ರತಿದಾಳಿ ನಡೆಸಿವೆ.

ಕಾಶ್ಮೀರ ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ; ಬಿಎಸ್​ಎಫ್ ಯೋಧರು ಸೇರಿ ಐವರಿಗೆ ಗಾಯ
ಭಾರತೀಯ ಸೇನೆImage Credit source: PTI
ಸುಷ್ಮಾ ಚಕ್ರೆ
|

Updated on:Oct 27, 2023 | 10:26 AM

Share

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ​ ಸೇನೆಯಿಂದ ಫೈರಿಂಗ್ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಬಿಎಸ್​ಎಫ್ ಯೋಧ, ನಾಲ್ವರು ನಾಗರಿಕರಿಗೆ ಗಾಯವಾಗಿದೆ. ಜಮ್ಮು- ಕಾಶ್ಮೀರ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಸೇನೆ ಗುಂಡಿನ ದಾಳಿ ನಡೆಸಿದೆ. ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ ನಡೆದಿದೆ.

ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಭಾರತೀಯ ಪೋಸ್ಟ್‌ಗಳ ಮೇಲೆ ಪಾಕಿಸ್ತಾನಿ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಪಡೆಗಳು ಕೂಡ ಅದಕ್ಕೆ ಪ್ರತಿದಾಳಿ ನಡೆಸಿವೆ ಎಂದು ಬಿಎಸ್‌ಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕುಪ್ವಾರಾ ಜಿಲ್ಲೆಯ ಎಲ್‌ಒಸಿಯಾದ್ಯಂತ ನುಸುಳಲು ಯತ್ನಿಸಿದ ಐವರು ಎಲ್‌ಇಟಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಇದನ್ನೂ ಓದಿ: ಹಮಾಸ್ ಉಗ್ರರು ಇಸ್ರೇಲ್​ನಲ್ಲಿ ಮನೆಗಳಿಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ವಿಡಿಯೋ ವೈರಲ್

ಕುಪ್ವಾರದ ಮಚಿಲ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯ ಕೆಲವೇ ಗಂಟೆಗಳ ನಂತರ ಅರ್ನಿಯಾ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘನೆಯಾಗಿದೆ. ಅರ್ನಿಯಾ ಮತ್ತು ಆರ್‌ಎಸ್‌ ಪುರ ಸೆಕ್ಟರ್‌ಗಳಲ್ಲಿ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಭಾರತೀಯ ಪೋಸ್ಟ್‌ಗಳ ಮೇಲೆ ಪಾಕಿಸ್ತಾನ ರೇಂಜರ್‌ಗಳು ರಾತ್ರಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರಿಂದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರು ಮತ್ತು ಒಬ್ಬರು ನಾಗರಿಕ ಗಾಯಗೊಂಡಿದ್ದಾರೆ. ಗುಂಡಿನ ದಾಳಿಯ ನಂತರ, ಆರ್‌ಎಸ್ ಪುರದ ಅರ್ನಿಯಾದಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ, 22 ಮಂದಿ ಸಾವು

ಕದನ ವಿರಾಮ ಉಲ್ಲಂಘನೆ ಮತ್ತು ಅರ್ನಿಯಾ ಪ್ರದೇಶದಲ್ಲಿನ ಅವರ ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿಗೆ ಪಾಕಿಸ್ತಾನ ರೇಂಜರ್‌ಗಳಿಗೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಜಮ್ಮುವಿನಲ್ಲಿರುವ ಬಿಎಸ್‌ಎಫ್ ಮಾಹಿತಿ ನೀಡಿದೆ. ಪಾಕಿಸ್ತಾನದ ಕಡೆಯಿಂದ ರಾತ್ರಿ 8 ಗಂಟೆ ಸುಮಾರಿಗೆ ಕದನ ವಿರಾಮ ಉಲ್ಲಂಘನೆ ಆರಂಭವಾಗಿದೆ ಎಂದು ಬಿಎಸ್ಎಫ್ ಮಾಹಿತಿ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:26 am, Fri, 27 October 23

Follow Us
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ