ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದ ದಾಳಿ ಆತಂಕ: ಪಾಕ್​ ಸೇನಾ ಮುಖ್ಯಸ್ಥನ ಕಾಲು ನಡುಗುತಿತ್ತು

ದೆಹಲಿ: ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ ಅವರನ್ನು ಬಿಡುಗಡೆ ಮಾಡುತ್ತಿರುವುದು ಶಾಂತಿಗಾಗಿ ಎಂದು ಹೇಳಿದ್ದ ಪಾಕಿಸ್ತಾನದ ನಿಜ ರೂಪ ಬಯಲಾಗಿದೆ. ಭಾರತದ ಆ ಒಂದು ಮಾತಿಗೆ ಹೆದರಿ ಪಾಪಿ ಪಾಕಿಸ್ತಾನ ಬಾಲ ಮುದುಡಿಕೊಂಡಿತ್ತು. ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದಿಂದ ದಾಳಿ ಆಗುವ ಆತಂಕಕ್ಕೆ ಪಾಕ್​ ಸೇನೆ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿತ್ತು. 2019ರ ಪಾಕ್​ ಸರ್ವಪಕ್ಷ ಸಭೆ ಬಗ್ಗೆ ಪಾಕಿಸ್ತಾನ ಮುಸ್ಲಿಂ ಲೀಗ್​-ಎನ್​ ನಾಯಕ ಅಯಾಜ್ ಸಾದಿಕ್​ […]

ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದ ದಾಳಿ ಆತಂಕ: ಪಾಕ್​ ಸೇನಾ ಮುಖ್ಯಸ್ಥನ ಕಾಲು ನಡುಗುತಿತ್ತು
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 29, 2020 | 8:00 PM

ದೆಹಲಿ: ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ ಅವರನ್ನು ಬಿಡುಗಡೆ ಮಾಡುತ್ತಿರುವುದು ಶಾಂತಿಗಾಗಿ ಎಂದು ಹೇಳಿದ್ದ ಪಾಕಿಸ್ತಾನದ ನಿಜ ರೂಪ ಬಯಲಾಗಿದೆ. ಭಾರತದ ಆ ಒಂದು ಮಾತಿಗೆ ಹೆದರಿ ಪಾಪಿ ಪಾಕಿಸ್ತಾನ ಬಾಲ ಮುದುಡಿಕೊಂಡಿತ್ತು.

ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದಿಂದ ದಾಳಿ ಆಗುವ ಆತಂಕಕ್ಕೆ ಪಾಕ್​ ಸೇನೆ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿತ್ತು. 2019ರ ಪಾಕ್​ ಸರ್ವಪಕ್ಷ ಸಭೆ ಬಗ್ಗೆ ಪಾಕಿಸ್ತಾನ ಮುಸ್ಲಿಂ ಲೀಗ್​-ಎನ್​ ನಾಯಕ ಅಯಾಜ್ ಸಾದಿಕ್​ ಮಾಹಿತಿ ಹಂಚಿಕೊಂಡಿದ್ದಾರೆ. ಅಂದು ನಡೆದ ಸಭೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್​ ಖುರೇಷಿ ಆತಂಕ ವ್ಯಕ್ತಪಡಿಸಿದ್ದರು.

ವಿಂಗ್ ಕಮಾಂಡರ್ ಅಭಿನಂದನ್​ ಅವರನ್ನು ಬಿಡುಗಡೆ ಮಾಡದಿದ್ರೆ ರಾತ್ರಿ 9 ಗಂಟೆಯೊಳಗೆ ಭಾರತ ದಾಳಿ ಮಾಡುತ್ತೆ ಎಂಬ ಆತಂಕ ಅವರಿಗಿತ್ತು. ಹೀಗಾಗಿ ಇಮ್ರಾನ್ ಖಾನ್ ಸರ್ಕಾರವು ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಧಮಾನ್​ ಅವರನ್ನು ಭಾರತಕ್ಕೆ ಮರಳಿ ಕಳಿಸಿತ್ತು ಎಂದಿದ್ದಾರೆ.

Published On - 8:44 am, Thu, 29 October 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us