AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​ ಪರಿಸ್ಥಿತಿ ಚರ್ಚಿಸಲು ಎನ್​ಎಸ್​ಎಗಳ ಸಭೆ ಕರೆದ ಭಾರತ; ದೆಹಲಿಗೆ ಭೇಟಿ ನೀಡಲಿರುವ ಪಾಕಿಸ್ತಾನದ ಭದ್ರತಾ ಸಲಹೆಗಾರ

2016ರಲ್ಲಿ ಪಾಕಿಸ್ತಾನದಲ್ಲಿ ನವಾಜ್​ ಶರೀಫ್​ ಪ್ರಧಾನಮಂತ್ರಿಯಾಗಿದ್ದಾಗ ಅವರ ವಿದೇಶಾಂಗ ವ್ಯವಹಾರಗಳ ಸಲಹೆಗಾರರಾಗಿದ್ದ ಸರ್ತಾಜ್​ ಆಝೀಜ್​ ಭಾರತಕ್ಕೆ ಆಗಮಿಸಿದ್ದರು.

ಅಫ್ಘಾನ್​ ಪರಿಸ್ಥಿತಿ ಚರ್ಚಿಸಲು ಎನ್​ಎಸ್​ಎಗಳ ಸಭೆ ಕರೆದ ಭಾರತ; ದೆಹಲಿಗೆ ಭೇಟಿ ನೀಡಲಿರುವ ಪಾಕಿಸ್ತಾನದ ಭದ್ರತಾ ಸಲಹೆಗಾರ
ಮೊಯೀದ್​ ಯೂಸುಫ್
TV9 Web
| Edited By: |

Updated on: Oct 17, 2021 | 12:46 PM

Share

ಅಫ್ಘಾನಿಸ್ತಾನದಲ್ಲಿ ಸದ್ಯ ಇರುವ ಪರಿಸ್ಥಿತಿಯ ಬಗ್ಗೆ ಚರ್ಚಿಸುವ ಸಲುವಾಗಿ ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರ(National security advisor )ರ ಮಟ್ಟದ ಸಭೆಯನ್ನು ನವೆಂಬರ್​​ನಲ್ಲಿ ನಡೆಸಲಿದೆ. ಈ ಸಭೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಅಧ್ಯಕ್ಷತೆ ವಹಿಸುವ ಸಾಧ್ಯತೆ ಇದ್ದು, ರಷ್ಯಾ, ಪಾಕಿಸ್ತಾನ, ಚೀನಾ, ಇರಾನ್​, ಉಜ್ಬೇಕಿಸ್ತಾನ್​, ತಜಿಕಿಸ್ತಾನ್​​ಗಳಿಗೆ ಆಹ್ವಾನ ನೀಡಲಿದೆ. ಈ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವುದಿಲ್ಲ. ಬದಲಿಗೆ ನಾಯಕರು ಭೌತಿಕವಾಗಿಯೇ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.   ಅಫ್ಘಾನಿಸ್ತಾನದಲ್ಲಿ ಸದ್ಯ ತಾಲಿಬಾನ್​ ಆಡಳಿತ ನಡೆಯುತ್ತಿದ್ದು, ಇನ್ನೂ ಆದೇಶದಲ್ಲಿ ಸ್ಥಿರತೆ ಮೂಡಿಲ್ಲ. ಪದೇಪದೆ ಅಫ್ಘಾನ್​​ನೊಳಗೇ ದಾಳಿ ನಡೆಯುತ್ತಿದೆ. ಮಸೀದಿಗಳ ಮೇಲೆ ಬಾಂಬ್​ ಹಾಕಲಾಗುತ್ತಿದೆ. ನೂರಾರು ಜನರು ಸಾಯುತ್ತಿದ್ದಾರೆ. ಇದೇ ಹೊತ್ತಲ್ಲಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ಭಾರತ ಈಗ ಕೆಲವು ರಾಷ್ಟ್ರಗಳಿಗೆ ಆಹ್ವಾನ ನೀಡಲಿದೆ.

ಈ ಮಧ್ಯೆ ಪಾಕಿಸ್ತಾನಕ್ಕೆ ಕಳೆದವಾರವೇ ಭಾರತದಿಂದ ಆಹ್ವಾನ ತಲುಪಿದೆ ಎಂದು ಮೂಲಗಳು ದೃಢಪಡಿಸಿವೆ. ಅಷ್ಟೇ ಅಲ್ಲ ಅಫ್ಘಾನ್​ ಪರಿಸ್ಥಿತಿ, ಅಲ್ಲಿನ ಬೆಳವಣಿಗೆ ಬಗ್ಗೆ ಚರ್ಚಿಸಲು ಭಾರತ ಕರೆದಿರುವ ಎನ್​ಎಸ್​ಎ ಮಟ್ಟದ ಸಭೆಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೊಯೀದ್​ ಯೂಸುಫ್​ ಇಲ್ಲಿಗೆ ಆಗಮಿಸಲಿದ್ದಾರೆ ಎಂದೂ ಹೇಳಲಾಗಿದೆ. ಹಾಗೊಮ್ಮೆ ಯೂಸುಫ್​ ಭಾರತಕ್ಕೆ ಬಂದರೆ ಅದು ಅವರ ಮೊದಲ ಭಾರತ ಭೇಟಿಯಾಗಲಿದೆ.  ಹಾಗೇ ಬರೋಬ್ಬರಿ 5ವರ್ಷಗಳ ನಂತರ ಪಾಕಿಸ್ತಾನದ ಉನ್ನತ ಅಧಿಕಾರಿಯೊಬ್ಬರು ಭಾರತಕ್ಕೆ ಬಂದಂತಾಗುತ್ತದೆ.  ಅಂದಹಾಗೆ ಈ ಸಭೆಗೆ ಭಾರತ ತಾಲಿಬಾನಿಗಳಿಗೆ ಆಹ್ವಾನ ನೀಡುವುದಿಲ್ಲ ಎಂದು ಹೇಳಲಾಗಿದೆ.

2016ರಲ್ಲಿ ಪಾಕಿಸ್ತಾನದಲ್ಲಿ ನವಾಜ್​ ಶರೀಫ್​ ಪ್ರಧಾನಮಂತ್ರಿಯಾಗಿದ್ದಾಗ ಅವರ ವಿದೇಶಾಂಗ ವ್ಯವಹಾರಗಳ ಸಲಹೆಗಾರರಾಗಿದ್ದ ಸರ್ತಾಜ್​ ಆಝೀಜ್​ ಭಾರತಕ್ಕೆ ಆಗಮಿಸಿದ್ದರು. ಅಮೃತ್​ಸರ್​​ನಲ್ಲಿ ನಡೆದ ಏಷ್ಯಾ ಮಟ್ಟದ ಸಮ್ಮೇಳನವೊಂದರಲ್ಲಿ ಅವರು ಪಾಲ್ಗೊಂಡಿದ್ದರು.  ಅದಾದ ಮೇಲೆ ಪಾಕ್​​ನಿಂದ ಉನ್ನತಮಟ್ಟದ ಅಧಿಕಾರಿಗಳಾಗಲಿ, ಸಚಿವರಾಗಲಿ ಯಾರೂ ಭಾರತಕ್ಕೆ ಬಂದಿರಲಿಲ್ಲ. ಇದೀಗ ಎನ್​ಎಸ್​ಎ ಯೂಸುಫ್​ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿದ್ದರೂ, ಅದು ದೃಢಪಡಬೇಕಿದೆ.

ಇದನ್ನೂ ಓದಿ: ಶ್ವಾಸಕೋಶದ ಆರೋಗ್ಯವನ್ನು ಸುಧಾರಿಸಲು ಈ ಯೋಗ ಭಂಗಿಗಳು ಸಹಾಯಕ

ಜಮ್ಮು ಮತ್ತು ಕಾಶ್ಮೀರದಲ್ಲಿ 48 ಗಂಟೆಗಳ ನಂತರ ಯೋಧರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್