AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನಗೊಳ್ಳಲಿದೆ: ಮಾಜಿ ಸೇನಾ ಮುಖ್ಯಸ್ಥ ಜನರಲ್

pakistan occupied kashmir: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್ ಸೋಮವಾರ ಹೇಳಿದ್ದಾರೆ. ಇದೀಗ ಈ ಸುದ್ದಿ ದೇಶದೊಳಗೆ ಭಾರೀ ಚರ್ಚೆ ಕಾರಣವಾಗಿದೆ. "ಪಿಒಕೆ ತನ್ನದೇ ಆದ ಮೇಲೆ ಭಾರತದೊಂದಿಗೆ ವಿಲೀನಗೊಳ್ಳುತ್ತದೆ. ಸ್ವಲ್ಪ ಸಮಯ ಕಾಯಿರಿ " ಹೇಳಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನಗೊಳ್ಳಲಿದೆ: ಮಾಜಿ ಸೇನಾ ಮುಖ್ಯಸ್ಥ ಜನರಲ್
ವಿಕೆ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on: Sep 12, 2023 | 10:55 AM

Share

ದೌಸಾ, ಸೆ.12: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್ (VK Singh) ಸೋಮವಾರ ಹೇಳಿದ್ದಾರೆ. ಇದೀಗ ಈ ಸುದ್ದಿ ದೇಶದೊಳಗೆ ಭಾರೀ ಚರ್ಚೆ ಕಾರಣವಾಗಿದೆ. ಪಿಒಕೆಯನ್ನು ಭಾರತದೊಂದಿಗೆ ವಿಲೀನಗೊಳಿಸಬೇಕು ಎಂಬ ನಿಮ್ಮ ಈ ಮಾತಿಗೆ, ಬಿಜೆಪಿಯ ನಿಲುವು ಏನು? ಜತೆಗೆ ಪಿಒಕೆಯಲ್ಲಿನ ಜನರ ಬೇಡಿಕೆಗಳೇನು? ಎಂಬ ಮಾಧ್ಯಮಗಳ ಪ್ರಶ್ನೆಗೆ ವಿಕೆ ಸಿಂಗ್​​ ಈ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

“ಪಿಒಕೆ ತನ್ನದೇ ಆದ ಮೇಲೆ ಭಾರತದೊಂದಿಗೆ ವಿಲೀನಗೊಳ್ಳುತ್ತದೆ. ಸ್ವಲ್ಪ ಸಮಯ ಕಾಯಿರಿ ” ಎಂದು ವಿಕೆ ಸಿಂಗ್ ಅವರು ರಾಜಸ್ಥಾನದ ದೌಸಾದಲ್ಲಿ ಸುದ್ದಿಗಾರರೊಂದಿಗೆ ಹೇಳಿದ್ದಾರೆ. ಅಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ. ಇನ್ನು ಚೀನಾ ಕಾಶ್ಮೀರ, ಅರುಣಾಚಲ ಪ್ರದೇಶ ಮತ್ತು ದಕ್ಷಿಣ ಚೀನಾ ಸಮುದ್ರ ಭಾಗದ ಕೆಲವು ವಿವಾದಿತ ಪ್ರದೇಶಗಳನ್ನು ಒಳಗೊಂಡಿರುವ ಅಕ್ಸಾಯ್ ಚಿನ್ ಪ್ರದೇಶಗಳನ್ನು ಚೀನಾ ತನ್ನ ಹೊಸ ಭೂ ನಕ್ಷೆಯಲ್ಲಿ ಗುರುತಿಸಿದೆ. ಈ ವಿಚಾರವಾಗಿ ವಿಕೆ ಸಿಂಗ್ ಅವರಿಂದ ಈ ಹೇಳಿಕೆ ಬಂದಿದೆ. ಚೀನಾದ ಈ ನಕ್ಷೆಗೆ ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್ ವಿರೋಧ ವ್ಯಕ್ತಪಡಿಸಿದ್ದು, ಚೀನಾ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪಾಕ್ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿಗೆ ಖಡಕ್ ಉತ್ತರ ನೀಡಿ ಬಾಯ್ಮುಚ್ಚಿಸಿದ ವಿದೇಶಾಂಗ ಸಚಿವ ಜೈಶಂಕರ್

ಚೀನಾ ತನ್ನದಲ್ಲದ ಪ್ರದೇಶಗಳನ್ನು ಹೊಸ ನಕ್ಷೆಯಲ್ಲಿ ಗುರುತಿಸಿದೆ. ಚೀನಾದ ಈ ಕೆಟ್ಟ ಯೋಚನೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಹೇಳಿದ್ದಾರೆ. ಭಾರತದ ಪ್ರದೇಶಗಳನ್ನು ತನ್ನದ್ದು ಎಂದು ಹೇಳಿಕೊಳ್ಳುತ್ತಿರುವ ಚೀನಾ ಯಾವತ್ತೂ ಬದಲಾಗುವುದಿಲ್ಲ. ನಮ್ಮ ಸರ್ಕಾರಕ್ಕೆ ಈ ಬಗ್ಗೆ ಸ್ಪಷ್ಟವಾದ ನಿಲುವು ಇದೆ. ಇದೆಲ್ಲ ನಮ್ಮ ಪ್ರದೇಶ, ನೀವು ನಕ್ಷೆಯಲ್ಲಿ ತೋರಿಸಿದ ತಕ್ಷಣ ಅದು ನಿಮ್ಮದಾಗುವುದಿಲ್ಲ ಎಂದು ಎಸ್​​ ಜೈಶಂಕರ್​​ ಹೇಳಿದ್ದಾರೆ.

ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಕೇಂದ್ರ ಸರ್ಕಾರ ಯಾವಾಗಲೂ ಸಮರ್ಥಿಸಿಕೊಂಡಿದೆ. ಇನ್ನು ಮೇ ತಿಂಗಳಲ್ಲಿ ಗೋವಾದಲ್ಲಿ ನಡೆದ ಸಿಇಒ ಶೃಂಗಸಭೆಯಲ್ಲಿ ವಿದೇಶಾಂಗ ಸಚಿವ ಎಸ್​​​ ಜೈಶಂಕರ್​​ ಅವರು ಪಾಕ್​​ ಸರ್ಕಾರ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಆಗಿನ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮುಂದೆ ತರಾಟೆಗೆ ತೆಗೆದುಕೊಂಡಿದ್ದರು. ಈ ಸಭೆಯಲ್ಲೂ ಪಿಒಕೆ ಭಾರತದ ನಿರ್ಧಾರ ಮತ್ತು ನಿಲುವು ಏನು ಎಂಬುದನ್ನು ಕೂಡ ಸ್ಪಷ್ಟವಾಗಿ ತಿಳಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ