AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನಗೊಳ್ಳಲಿದೆ: ಮಾಜಿ ಸೇನಾ ಮುಖ್ಯಸ್ಥ ಜನರಲ್

pakistan occupied kashmir: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್ ಸೋಮವಾರ ಹೇಳಿದ್ದಾರೆ. ಇದೀಗ ಈ ಸುದ್ದಿ ದೇಶದೊಳಗೆ ಭಾರೀ ಚರ್ಚೆ ಕಾರಣವಾಗಿದೆ. "ಪಿಒಕೆ ತನ್ನದೇ ಆದ ಮೇಲೆ ಭಾರತದೊಂದಿಗೆ ವಿಲೀನಗೊಳ್ಳುತ್ತದೆ. ಸ್ವಲ್ಪ ಸಮಯ ಕಾಯಿರಿ " ಹೇಳಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನಗೊಳ್ಳಲಿದೆ: ಮಾಜಿ ಸೇನಾ ಮುಖ್ಯಸ್ಥ ಜನರಲ್
ವಿಕೆ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on: Sep 12, 2023 | 10:55 AM

Share

ದೌಸಾ, ಸೆ.12: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್ (VK Singh) ಸೋಮವಾರ ಹೇಳಿದ್ದಾರೆ. ಇದೀಗ ಈ ಸುದ್ದಿ ದೇಶದೊಳಗೆ ಭಾರೀ ಚರ್ಚೆ ಕಾರಣವಾಗಿದೆ. ಪಿಒಕೆಯನ್ನು ಭಾರತದೊಂದಿಗೆ ವಿಲೀನಗೊಳಿಸಬೇಕು ಎಂಬ ನಿಮ್ಮ ಈ ಮಾತಿಗೆ, ಬಿಜೆಪಿಯ ನಿಲುವು ಏನು? ಜತೆಗೆ ಪಿಒಕೆಯಲ್ಲಿನ ಜನರ ಬೇಡಿಕೆಗಳೇನು? ಎಂಬ ಮಾಧ್ಯಮಗಳ ಪ್ರಶ್ನೆಗೆ ವಿಕೆ ಸಿಂಗ್​​ ಈ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

“ಪಿಒಕೆ ತನ್ನದೇ ಆದ ಮೇಲೆ ಭಾರತದೊಂದಿಗೆ ವಿಲೀನಗೊಳ್ಳುತ್ತದೆ. ಸ್ವಲ್ಪ ಸಮಯ ಕಾಯಿರಿ ” ಎಂದು ವಿಕೆ ಸಿಂಗ್ ಅವರು ರಾಜಸ್ಥಾನದ ದೌಸಾದಲ್ಲಿ ಸುದ್ದಿಗಾರರೊಂದಿಗೆ ಹೇಳಿದ್ದಾರೆ. ಅಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ. ಇನ್ನು ಚೀನಾ ಕಾಶ್ಮೀರ, ಅರುಣಾಚಲ ಪ್ರದೇಶ ಮತ್ತು ದಕ್ಷಿಣ ಚೀನಾ ಸಮುದ್ರ ಭಾಗದ ಕೆಲವು ವಿವಾದಿತ ಪ್ರದೇಶಗಳನ್ನು ಒಳಗೊಂಡಿರುವ ಅಕ್ಸಾಯ್ ಚಿನ್ ಪ್ರದೇಶಗಳನ್ನು ಚೀನಾ ತನ್ನ ಹೊಸ ಭೂ ನಕ್ಷೆಯಲ್ಲಿ ಗುರುತಿಸಿದೆ. ಈ ವಿಚಾರವಾಗಿ ವಿಕೆ ಸಿಂಗ್ ಅವರಿಂದ ಈ ಹೇಳಿಕೆ ಬಂದಿದೆ. ಚೀನಾದ ಈ ನಕ್ಷೆಗೆ ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್ ವಿರೋಧ ವ್ಯಕ್ತಪಡಿಸಿದ್ದು, ಚೀನಾ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪಾಕ್ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿಗೆ ಖಡಕ್ ಉತ್ತರ ನೀಡಿ ಬಾಯ್ಮುಚ್ಚಿಸಿದ ವಿದೇಶಾಂಗ ಸಚಿವ ಜೈಶಂಕರ್

ಚೀನಾ ತನ್ನದಲ್ಲದ ಪ್ರದೇಶಗಳನ್ನು ಹೊಸ ನಕ್ಷೆಯಲ್ಲಿ ಗುರುತಿಸಿದೆ. ಚೀನಾದ ಈ ಕೆಟ್ಟ ಯೋಚನೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಹೇಳಿದ್ದಾರೆ. ಭಾರತದ ಪ್ರದೇಶಗಳನ್ನು ತನ್ನದ್ದು ಎಂದು ಹೇಳಿಕೊಳ್ಳುತ್ತಿರುವ ಚೀನಾ ಯಾವತ್ತೂ ಬದಲಾಗುವುದಿಲ್ಲ. ನಮ್ಮ ಸರ್ಕಾರಕ್ಕೆ ಈ ಬಗ್ಗೆ ಸ್ಪಷ್ಟವಾದ ನಿಲುವು ಇದೆ. ಇದೆಲ್ಲ ನಮ್ಮ ಪ್ರದೇಶ, ನೀವು ನಕ್ಷೆಯಲ್ಲಿ ತೋರಿಸಿದ ತಕ್ಷಣ ಅದು ನಿಮ್ಮದಾಗುವುದಿಲ್ಲ ಎಂದು ಎಸ್​​ ಜೈಶಂಕರ್​​ ಹೇಳಿದ್ದಾರೆ.

ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಕೇಂದ್ರ ಸರ್ಕಾರ ಯಾವಾಗಲೂ ಸಮರ್ಥಿಸಿಕೊಂಡಿದೆ. ಇನ್ನು ಮೇ ತಿಂಗಳಲ್ಲಿ ಗೋವಾದಲ್ಲಿ ನಡೆದ ಸಿಇಒ ಶೃಂಗಸಭೆಯಲ್ಲಿ ವಿದೇಶಾಂಗ ಸಚಿವ ಎಸ್​​​ ಜೈಶಂಕರ್​​ ಅವರು ಪಾಕ್​​ ಸರ್ಕಾರ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಆಗಿನ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮುಂದೆ ತರಾಟೆಗೆ ತೆಗೆದುಕೊಂಡಿದ್ದರು. ಈ ಸಭೆಯಲ್ಲೂ ಪಿಒಕೆ ಭಾರತದ ನಿರ್ಧಾರ ಮತ್ತು ನಿಲುವು ಏನು ಎಂಬುದನ್ನು ಕೂಡ ಸ್ಪಷ್ಟವಾಗಿ ತಿಳಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ