
ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್ ಪಾಟೀಲ್ ಹೇಳಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ ಇಳಿಸುವ ಸಲುವಾಗಿ ಪ್ರಧಾನಿಯಾಗಿದ್ದಲ್ಲ. ಅವರ ಧ್ಯೇಯ ದೊಡ್ಡದಿದೆ ಎಂದು ಹೇಳಿದರು.