AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಸ್​​ ಒಲಿಂಪಿಯಾಡ್​​​ನಲ್ಲಿ ಭಾಗಿಯಾಗಲ್ಲ ಎಂದ ಪಾಕಿಸ್ತಾನ; ಪ್ರತಿಷ್ಠಿತ ಕಾರ್ಯಕ್ರಮವನ್ನು ಪಾಕ್ ರಾಜಕೀಯಗೊಳಿಸಿದೆ ಎಂದ ಭಾರತ

ಒಲಿಂಪಿಯಾಡ್ ಟಾರ್ಚ್ ರಿಲೇ ಜಮ್ಮು ಮತ್ತು ಕಾಶ್ಮೀರವನ್ನು ಹಾದು ಹೋಗುತ್ತಿದೆ ಎಂದು ಹೇಳಿ ಪಾಕಿಸ್ತಾನ ಚೆಸ್ ಒಲಿಂಪಿಯಾಡ್​​ನಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದೆ

ಚೆಸ್​​ ಒಲಿಂಪಿಯಾಡ್​​​ನಲ್ಲಿ ಭಾಗಿಯಾಗಲ್ಲ ಎಂದ ಪಾಕಿಸ್ತಾನ; ಪ್ರತಿಷ್ಠಿತ ಕಾರ್ಯಕ್ರಮವನ್ನು ಪಾಕ್ ರಾಜಕೀಯಗೊಳಿಸಿದೆ ಎಂದ ಭಾರತ
ಅರಿಂದಮ್ ಬಾಗ್ಚಿ
TV9 Web
| Edited By: |

Updated on:Jul 28, 2022 | 6:06 PM

Share

ದೆಹಲಿ: ತಮಿಳುನಾಡಿನಲ್ಲಿ ಗುರುವಾರ ಆರಂಭವಾಗಿರುವ 44ನೇ ಚೆಸ್ ಒಲಿಂಪಿಯಾಡ್​​ನಿಂದ (44th Chess Olympiad )ಪಾಕಿಸ್ತಾನ (Pakistan) ತಮ್ಮ ತಂಡವನ್ನು ಹಿಂತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಭಾರತ ಪಾಕಿಸ್ತಾನ ಇಂಥಾ ಪ್ರತಿಷ್ಠಿತ ಕಾರ್ಯಕ್ರಮವನ್ನು ರಾಜಕೀಯಗೊಳಿಸಿದ್ದು ತುಂಬಾ ದುರದೃಷ್ಟಕರ ಎಂದಿದ್ದಾರೆ. ಪಾಕಿಸ್ತಾನದ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ಪಾಕಿಸ್ತಾನ ದಿಢೀರ್ ನಿರ್ಧಾರ ತೆಗೆದುಕೊಂಡಿದೆ ಎಂದಿದ್ದಾರೆ. ಭಾರತಕ್ಕೆ ಪಾಕಿಸ್ತಾನ ತಂಡ ತಲುಪಿತ್ತು. ಅಷ್ಟೊತ್ತಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಕಾರ್ಯಕ್ರಮದ ಬಗ್ಗೆ ಹೇಳಿಕೆ ನೀಡಿ ಅದನ್ನು ರಾಜಕೀಯಗೊಳಿಸಿ ಅದರಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವುದು ದುರದೃಷ್ಟಕರ ಎಂದಿದ್ದಾರೆ.

ಒಲಿಂಪಿಯಾಡ್ ಟಾರ್ಚ್ ರಿಲೇ ಜಮ್ಮು ಮತ್ತು ಕಾಶ್ಮೀರವನ್ನು ಹಾದು ಹೋಗುತ್ತಿದೆ ಎಂದು ಹೇಳಿ ಪಾಕಿಸ್ತಾನ ಚೆಸ್ ಒಲಿಂಪಿಯಾಡ್​​ನಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಬಾಗ್ಚಿ, ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಭಾಗವಾಗಿತ್ತು, ಆಗಿದೆ ಮತ್ತು ಅದು ಅವಿಭಾಜ್ಯ ಅಂಗವಾಗಿಯೇ ಇರಲಿದೆ ಎಂದು ಹೇಳಿದ್ದಾರೆ.

Published On - 5:37 pm, Thu, 28 July 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!