AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಮರ್ಜೆನ್ಸಿ ಇದೆ ಅಂದ್ರೂ ತನ್ನ ವಾಯುಪ್ರದೇಶ ಬಳಸಲು ಇಂಡಿಗೋಗೆ ಅನುಮತಿ ಕೊಡದ ಪಾಕಿಸ್ತಾನ

ದೆಹಲಿ-ಶ್ರೀನಗರ ವಿಮಾನದ ಇಂಡಿಗೋ ವಿಮಾನ 6E2142 ಮೇ 21 ರಂದು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಭಯದಿಂದಲೇ ಭೂಸ್ಪರ್ಶ ಮಾಡಬೇಕಾಯಿತು. ಈ ಸಮಯದಲ್ಲಿ, ವಿಮಾನದ ಪೈಲಟ್ ಪ್ರಕ್ಷುಬ್ಧತೆಯನ್ನು ತಪ್ಪಿಸಲು ಸ್ವಲ್ಪ ಸಮಯದವರೆಗೆ ಪಾಕಿಸ್ತಾನದ ವಾಯುಪ್ರದೇಶವನ್ನು ಬಳಸಲು ಲಾಹೋರ್ ವಾಯು ಸಂಚಾರ ನಿಯಂತ್ರಣ (ATC) ಯನ್ನು ಅನುಮತಿ ಕೇಳಿದರು, ಆದರೆ ಅದನ್ನು ತಿರಸ್ಕರಿಸಲಾಗಿತ್ತು.ವಿಮಾನ ಅಮೃತಸರದ ಮೇಲೆ ಹಾರುತ್ತಿದ್ದಾಗ, ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಪ್ರತಿಕೂಲ ಸ್ಥಿತಿಯಲ್ಲಿರುವುದು ಪೈಲಟ್ ಗಮನಕ್ಕೆ ಬಂದಿತ್ತು.

ಎಮರ್ಜೆನ್ಸಿ ಇದೆ ಅಂದ್ರೂ ತನ್ನ ವಾಯುಪ್ರದೇಶ ಬಳಸಲು ಇಂಡಿಗೋಗೆ ಅನುಮತಿ ಕೊಡದ ಪಾಕಿಸ್ತಾನ
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on: May 23, 2025 | 8:53 AM

Share

ನವದೆಹಲಿ, ಮೇ 23: ದೆಹಲಿಯಿಂದ ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ(IndiGo) ವಿಮಾನವು ಬುಧವಾರ ಗಾಳಿಯಲ್ಲಿ ತೀವ್ರ ಪ್ರಕ್ಷುಬ್ಧತೆ ಎದುರಿಸಿತ್ತು. ಈ ಸಂದರ್ಭದಲ್ಲಿ ವಾಯು ಪ್ರದೇಶವನ್ನು ಬಳಸಲು ಪಾಕಿಸ್ತಾನವು ಅನುಮತಿ ನೀಡಲಿಲ್ಲ ಎನ್ನುವ ವಿಚಾರ ಬಹಿರಂಗಗೊಂಡಿದೆ. ವಿಮಾನಯಾನ ಸಂಸ್ಥೆಯ ಮಾಹಿತಿ ಪ್ರಕಾರ, ತೀವ್ರ ಪ್ರಕ್ಷುಬ್ಧತೆ ನಡುವೆಯೂ ಎಲ್ಲಾ 227 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು.

ಆದರೆ ಈ ಸಮಯದಲ್ಲಿ ಪಾಕಿಸ್ತಾನದ ನಾಚಿಕೆಗೇಡಿನ ಕೃತ್ಯವೂ ಬೆಳಕಿಗೆ ಬಂದಿದೆ. ತುರ್ತು ಪರಿಸ್ಥಿತಿಯಲ್ಲಿ ಸಿಲುಕಿದ್ದ ಪೈಲಟ್ ಪಾಕಿಸ್ತಾನದ ವಾಯುಪ್ರದೇಶವನ್ನು ಬಳಸಲು ಅನುಮತಿ ಕೇಳಿದ್ದರು, ಆದರೆ ಪಾಕಿಸ್ತಾನ ಅದನ್ನು ನಿರಾಕರಿಸಿತ್ತು.

6E 2142 ವಿಮಾನವು ಶ್ರೀನಗರದ ಬಳಿ ತೀವ್ರ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಎದುರಿಸಿತು ಅದಾದ ನಂತರ ಪೈಲಟ್ ಪ್ರಕ್ಷುಬ್ಧತೆಯನ್ನು ತಪ್ಪಿಸಲು ಪಾಕಿಸ್ತಾನದ ವಾಯುಪ್ರದೇಶವನ್ನು ಸ್ವಲ್ಪ ಸಮಯದವರೆಗೆ ಪ್ರವೇಶಿಸಲು ಲಾಹೋರ್ ವಾಯು ಸಂಚಾರ ನಿಯಂತ್ರಣ (ATC) ಯಿಂದ ಅನುಮತಿ ಕೋರಿದ್ದರು. ಆದರೆ, ಈ ವಿನಂತಿಯನ್ನು ತಿರಸ್ಕರಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ಓದಿ: ಆಲಿಕಲ್ಲು ಮಳೆಯಿಂದ ಇಂಡಿಗೋ ವಿಮಾನದ ಮುಂಭಾಗಕ್ಕೆ ಹಾನಿ; ಪ್ರಯಾಣಿಕರ ಕಿರುಚಾಟದ ಮಧ್ಯೆ ತುರ್ತು ಭೂಸ್ಪರ್ಶ

ವಿಮಾನವು ತನ್ನ ಮೂಲ ಹಾರಾಟದ ಹಾದಿಯಲ್ಲಿ ಸಾಗುತ್ತಿರುವಾಗ, ಶ್ರೀನಗರ ಬಳಿ ಪ್ರಕ್ಷುಬ್ಧತೆಗೆ ಸಿಲುಕಿ, ಪ್ರಯಾಣಿಕರು ಭಯಭೀತರಾದರು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ವೀಡಿಯೊಗಳಲ್ಲಿ, ವಿಮಾನವು ತೀವ್ರವಾಗಿ ಅಲುಗಾಡುತ್ತಿದ್ದಂತೆ ಪ್ರಯಾಣಿಕರು ಪ್ರಾರ್ಥಿಸುತ್ತಿರುವುದನ್ನು ಕಾಣಬಹುದು.

ವಿಮಾನದಲ್ಲಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಸಾಗರಿಕಾ ಘೋಷ್ ಸೇರಿ ಪಕ್ಷದ ಇತರೆ ನಾಲ್ವರು ನಾಯಕರು ಕೂಡ ಇದ್ದರು. ಸಾವಿನ ಸಮೀಪ ಹೋಗಿ ವಾಪಸ್ ಬಂದಂತಹ ಅನುಭವವಾಗಿತ್ತು. ಜನರು ಕಿರುಚುತ್ತಿದ್ದರು ಮತ್ತು ಪ್ರಾರ್ಥಿಸುತ್ತಿದ್ದರು. ಆ ಪರಿಸ್ಥಿತಿಯಿಂದ ನಮ್ಮನ್ನು ಹೊರತಂದ ಪೈಲಟ್‌ಗೆ ಧನ್ಯವಾದ, ನಾವು ಇಳಿದಾಗ, ವಿಮಾನದ ಮುಂಭಾಗ ಮುರಿದಿರುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.

ಇಂಡಿಗೋ ವಿಮಾನ 6E 2142, ಹಠಾತ್ ಆಲಿಕಲ್ಲು ಮಳೆಯ ಪರಿಣಾಮ ಸಮಸ್ಯೆ ಎದುರಿಸಿತು, ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ