ಎಮರ್ಜೆನ್ಸಿ ಇದೆ ಅಂದ್ರೂ ತನ್ನ ವಾಯುಪ್ರದೇಶ ಬಳಸಲು ಇಂಡಿಗೋಗೆ ಅನುಮತಿ ಕೊಡದ ಪಾಕಿಸ್ತಾನ

ದೆಹಲಿ-ಶ್ರೀನಗರ ವಿಮಾನದ ಇಂಡಿಗೋ ವಿಮಾನ 6E2142 ಮೇ 21 ರಂದು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಭಯದಿಂದಲೇ ಭೂಸ್ಪರ್ಶ ಮಾಡಬೇಕಾಯಿತು. ಈ ಸಮಯದಲ್ಲಿ, ವಿಮಾನದ ಪೈಲಟ್ ಪ್ರಕ್ಷುಬ್ಧತೆಯನ್ನು ತಪ್ಪಿಸಲು ಸ್ವಲ್ಪ ಸಮಯದವರೆಗೆ ಪಾಕಿಸ್ತಾನದ ವಾಯುಪ್ರದೇಶವನ್ನು ಬಳಸಲು ಲಾಹೋರ್ ವಾಯು ಸಂಚಾರ ನಿಯಂತ್ರಣ (ATC) ಯನ್ನು ಅನುಮತಿ ಕೇಳಿದರು, ಆದರೆ ಅದನ್ನು ತಿರಸ್ಕರಿಸಲಾಗಿತ್ತು.ವಿಮಾನ ಅಮೃತಸರದ ಮೇಲೆ ಹಾರುತ್ತಿದ್ದಾಗ, ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಪ್ರತಿಕೂಲ ಸ್ಥಿತಿಯಲ್ಲಿರುವುದು ಪೈಲಟ್ ಗಮನಕ್ಕೆ ಬಂದಿತ್ತು.

ಎಮರ್ಜೆನ್ಸಿ ಇದೆ ಅಂದ್ರೂ ತನ್ನ ವಾಯುಪ್ರದೇಶ ಬಳಸಲು ಇಂಡಿಗೋಗೆ ಅನುಮತಿ ಕೊಡದ ಪಾಕಿಸ್ತಾನ
ಇಂಡಿಗೋ ವಿಮಾನ

Updated on: May 23, 2025 | 8:53 AM

ನವದೆಹಲಿ, ಮೇ 23: ದೆಹಲಿಯಿಂದ ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ(IndiGo) ವಿಮಾನವು ಬುಧವಾರ ಗಾಳಿಯಲ್ಲಿ ತೀವ್ರ ಪ್ರಕ್ಷುಬ್ಧತೆ ಎದುರಿಸಿತ್ತು. ಈ ಸಂದರ್ಭದಲ್ಲಿ ವಾಯು ಪ್ರದೇಶವನ್ನು ಬಳಸಲು ಪಾಕಿಸ್ತಾನವು ಅನುಮತಿ ನೀಡಲಿಲ್ಲ ಎನ್ನುವ ವಿಚಾರ ಬಹಿರಂಗಗೊಂಡಿದೆ. ವಿಮಾನಯಾನ ಸಂಸ್ಥೆಯ ಮಾಹಿತಿ ಪ್ರಕಾರ, ತೀವ್ರ ಪ್ರಕ್ಷುಬ್ಧತೆ ನಡುವೆಯೂ ಎಲ್ಲಾ 227 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು.

ಆದರೆ ಈ ಸಮಯದಲ್ಲಿ ಪಾಕಿಸ್ತಾನದ ನಾಚಿಕೆಗೇಡಿನ ಕೃತ್ಯವೂ ಬೆಳಕಿಗೆ ಬಂದಿದೆ. ತುರ್ತು ಪರಿಸ್ಥಿತಿಯಲ್ಲಿ ಸಿಲುಕಿದ್ದ ಪೈಲಟ್ ಪಾಕಿಸ್ತಾನದ ವಾಯುಪ್ರದೇಶವನ್ನು ಬಳಸಲು ಅನುಮತಿ ಕೇಳಿದ್ದರು, ಆದರೆ ಪಾಕಿಸ್ತಾನ ಅದನ್ನು ನಿರಾಕರಿಸಿತ್ತು.

6E 2142 ವಿಮಾನವು ಶ್ರೀನಗರದ ಬಳಿ ತೀವ್ರ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಎದುರಿಸಿತು ಅದಾದ ನಂತರ ಪೈಲಟ್ ಪ್ರಕ್ಷುಬ್ಧತೆಯನ್ನು ತಪ್ಪಿಸಲು ಪಾಕಿಸ್ತಾನದ ವಾಯುಪ್ರದೇಶವನ್ನು ಸ್ವಲ್ಪ ಸಮಯದವರೆಗೆ ಪ್ರವೇಶಿಸಲು ಲಾಹೋರ್ ವಾಯು ಸಂಚಾರ ನಿಯಂತ್ರಣ (ATC) ಯಿಂದ ಅನುಮತಿ ಕೋರಿದ್ದರು. ಆದರೆ, ಈ ವಿನಂತಿಯನ್ನು ತಿರಸ್ಕರಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ಓದಿ: ಆಲಿಕಲ್ಲು ಮಳೆಯಿಂದ ಇಂಡಿಗೋ ವಿಮಾನದ ಮುಂಭಾಗಕ್ಕೆ ಹಾನಿ; ಪ್ರಯಾಣಿಕರ ಕಿರುಚಾಟದ ಮಧ್ಯೆ ತುರ್ತು ಭೂಸ್ಪರ್ಶ

ವಿಮಾನವು ತನ್ನ ಮೂಲ ಹಾರಾಟದ ಹಾದಿಯಲ್ಲಿ ಸಾಗುತ್ತಿರುವಾಗ, ಶ್ರೀನಗರ ಬಳಿ ಪ್ರಕ್ಷುಬ್ಧತೆಗೆ ಸಿಲುಕಿ, ಪ್ರಯಾಣಿಕರು ಭಯಭೀತರಾದರು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ವೀಡಿಯೊಗಳಲ್ಲಿ, ವಿಮಾನವು ತೀವ್ರವಾಗಿ ಅಲುಗಾಡುತ್ತಿದ್ದಂತೆ ಪ್ರಯಾಣಿಕರು ಪ್ರಾರ್ಥಿಸುತ್ತಿರುವುದನ್ನು ಕಾಣಬಹುದು.

ಇಂಡಿಗೋ ವಿಮಾನ 6E 2142, ಹಠಾತ್ ಆಲಿಕಲ್ಲು ಮಳೆಯ ಪರಿಣಾಮ ಸಮಸ್ಯೆ ಎದುರಿಸಿತು, ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us