AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಸ್ಮಗ್ಲಿಂಗ್​ ಮಾರ್ಗದಲ್ಲೇ ಸ್ಫೋಟಕಗಳ ಸಾಗಣೆ; ಪಾಕ್​​ ಉಗ್ರರ ಕುತಂತ್ರದ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಅಫ್ಘಾನಿಸ್ತಾನದಿಂದ ಹೆರಾಯಿನ್​ ಮತ್ತು ಅಫೀಮುಗಳಂತ ಡ್ರಗ್​ಗಳನ್ನು ಕಳ್ಳಸಾಗಣೆ ಮಾಡುವ ಮಾರ್ಗದಲ್ಲೇ, ಈ ಐಇಡಿಯಂಥ ಸ್ಫೋಟಕಗಳನ್ನೂ ಸಾಗಿಸುವ ಕೆಲಸವಾಗುತ್ತಿದೆ. ಇದಕ್ಕಾಗಿ ಪಾಕಿಸ್ತಾನಿ ಮೂಲದ ಉಗ್ರಸಂಘಟನೆಗಳು ಡ್ರೋನ್​, ಹಡಗುಗಳನ್ನು ಬಳಸಿಕೊಳ್ಳುತ್ತಿವೆ

ಡ್ರಗ್ಸ್​ ಸ್ಮಗ್ಲಿಂಗ್​ ಮಾರ್ಗದಲ್ಲೇ ಸ್ಫೋಟಕಗಳ ಸಾಗಣೆ; ಪಾಕ್​​ ಉಗ್ರರ ಕುತಂತ್ರದ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Jan 17, 2022 | 4:15 PM

Share

ಕಳೆದ ಶುಕ್ರವಾರ ದೆಹಲಿಯ ಘಾಜಿಪುರ್​​ನಲ್ಲಿ  ಆರ್​ಡಿಎಕ್ಸ್​​ನಿಂದ ಪ್ಯಾಕ್​ ಮಾಡಲಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸ್​ ಅಧಿಕಾರಿಗಳು ತನಿಖೆಯನ್ನೂ ನಡೆಸುತ್ತಿದ್ದಾರೆ. ಈ ಮಧ್ಯೆ ಗುಪ್ತಚರ ಇಲಾಖೆ ಮಾಹಿತಿಯೊಂದನ್ನು ನೀಡಿದ್ದು, ಇಂಥ ಐಇಡಿಗಳನ್ನು ಪಾಕಿಸ್ತಾನಿ ಸಂಘಟನೆಗಳು ಭೂ ಮತ್ತು ಸಮುದ್ರ ಮಾರ್ಗಗಳನ್ನು ಬಳಸಿಕೊಳ್ಳುತ್ತಿವೆ. ಅದರಲ್ಲೂ ಮಾದಕ ದ್ರವ್ಯಗಳು (Drugs) ಸಾಗಣೆಯಾಗುವ ಮಾರ್ಗದಲ್ಲಿಯೇ ಇವುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳಿಸಲಾಗುತ್ತಿದೆ ಎಂದು ಹೇಳಿದೆ. 

ಘಾಜಿಪುರದಲ್ಲಿ ಪತ್ತೆಯಾದ ಐಇಡಿಯಲ್ಲಿ ರಿಮೋಟ್​ ನಿಯಂತ್ರಿತ ಟೈಮರ್ ಇತ್ತು. ಅದರಲ್ಲಿ ಐಇಡಿ ಸಜ್ಜಾದ ಒಂದು ತಾಸು ಎಂಟು ನಿಮಿಷದ ನಂತರ ಸ್ಫೋಟಿಸುವಂತೆ ಫಿಕ್ಸ್ ಮಾಡಿಡಲಾಗಿತ್ತು. ಹೀಗೆ ಭಾರತಕ್ಕೆ ಅಪಾರ ಪ್ರಮಾಣದಲ್ಲಿ ಬಾಂಬ್​, ಐಇಡಿ, ಗ್ರೆನೇಡ್​ಗಳನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ 5-6 ಕೆಜಿಗಳಷ್ಟು ತೂಕದ ಸುಮಾರು 20 ಐಇಡಿಗಳು, 100 ಗ್ರೆನೇಡ್​ಗಳನ್ನು ಪಂಜಾಬ್​ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನದಿಂದ ಹೆರಾಯಿನ್​ ಮತ್ತು ಅಫೀಮುಗಳಂತ ಡ್ರಗ್​ಗಳನ್ನು ಕಳ್ಳಸಾಗಣೆ ಮಾಡುವ ಮಾರ್ಗದಲ್ಲೇ, ಈ ಐಇಡಿಯಂಥ ಸ್ಫೋಟಕಗಳನ್ನೂ ಸಾಗಿಸುವ ಕೆಲಸವಾಗುತ್ತಿದೆ. ಇದಕ್ಕಾಗಿ ಪಾಕಿಸ್ತಾನಿ ಮೂಲದ ಉಗ್ರಸಂಘಟನೆಗಳು ಡ್ರೋನ್​, ಹಡಗುಗಳನ್ನು ಬಳಸಿಕೊಳ್ಳುತ್ತಿವೆ ಎಂದು ಭದ್ರತಾ ಏಜೆನ್ಸಿಗಳು ತಿಳಿಸಿವೆ. ಘಾಜಿಪುರದಲ್ಲಿ ಐಇಡಿ ಸ್ಫೋಟಗೊಳ್ಳುವುದನ್ನು ದೆಹಲಿ ಪೊಲೀಸರು ಸೂಕ್ತ ಸಮಯದಲ್ಲಿ ತಪ್ಪಿಸದೆ ಇದ್ದರೆ, ಅದು ಹಲವು ಅಮಾಯಕರನ್ನು ಖಂಡಿತವಾಗಿಯೂ ಕೊಲ್ಲುತ್ತಿತ್ತು. ಸ್ಫೋಟಕವನ್ನು ಸ್ಟೀಲ್ ಟಿಫಿನ್ ಬಾಕ್ಸ್​ನಲ್ಲಿ ಹಾಕಿ, ಸೈಕಲ್ ಬೇರಿಂಗ್ ಮತ್ತು ನೇಲ್​ಗಳನ್ನು ಸೇರಿಸಿಡಲಾಗಿತ್ತು. ಇದು ಸ್ಫೋಟವಾದಾಗ ಇನ್ನಷ್ಟು ತೀವ್ರತೆ ಹೆಚ್ಚಿಸುತ್ತದೆ.

ಇದನ್ನೂ ಓದಿ:ಟ್ಯಾಂಕರ್‌ಗಳಲ್ಲಿ ಬೇಬಿ ಟ್ಯಾಂಕ್ ಬಳಸಿ ಪೆಟ್ರೋಲ್ ಕಳ್ಳತನ; ಸುಮಾರು 50 ಲೀಟರ್ ಪೆಟ್ರೋಲ್ ಕಳವು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?