AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಸ್ಮಗ್ಲಿಂಗ್​ ಮಾರ್ಗದಲ್ಲೇ ಸ್ಫೋಟಕಗಳ ಸಾಗಣೆ; ಪಾಕ್​​ ಉಗ್ರರ ಕುತಂತ್ರದ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಅಫ್ಘಾನಿಸ್ತಾನದಿಂದ ಹೆರಾಯಿನ್​ ಮತ್ತು ಅಫೀಮುಗಳಂತ ಡ್ರಗ್​ಗಳನ್ನು ಕಳ್ಳಸಾಗಣೆ ಮಾಡುವ ಮಾರ್ಗದಲ್ಲೇ, ಈ ಐಇಡಿಯಂಥ ಸ್ಫೋಟಕಗಳನ್ನೂ ಸಾಗಿಸುವ ಕೆಲಸವಾಗುತ್ತಿದೆ. ಇದಕ್ಕಾಗಿ ಪಾಕಿಸ್ತಾನಿ ಮೂಲದ ಉಗ್ರಸಂಘಟನೆಗಳು ಡ್ರೋನ್​, ಹಡಗುಗಳನ್ನು ಬಳಸಿಕೊಳ್ಳುತ್ತಿವೆ

ಡ್ರಗ್ಸ್​ ಸ್ಮಗ್ಲಿಂಗ್​ ಮಾರ್ಗದಲ್ಲೇ ಸ್ಫೋಟಕಗಳ ಸಾಗಣೆ; ಪಾಕ್​​ ಉಗ್ರರ ಕುತಂತ್ರದ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 17, 2022 | 4:15 PM

Share

ಕಳೆದ ಶುಕ್ರವಾರ ದೆಹಲಿಯ ಘಾಜಿಪುರ್​​ನಲ್ಲಿ  ಆರ್​ಡಿಎಕ್ಸ್​​ನಿಂದ ಪ್ಯಾಕ್​ ಮಾಡಲಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸ್​ ಅಧಿಕಾರಿಗಳು ತನಿಖೆಯನ್ನೂ ನಡೆಸುತ್ತಿದ್ದಾರೆ. ಈ ಮಧ್ಯೆ ಗುಪ್ತಚರ ಇಲಾಖೆ ಮಾಹಿತಿಯೊಂದನ್ನು ನೀಡಿದ್ದು, ಇಂಥ ಐಇಡಿಗಳನ್ನು ಪಾಕಿಸ್ತಾನಿ ಸಂಘಟನೆಗಳು ಭೂ ಮತ್ತು ಸಮುದ್ರ ಮಾರ್ಗಗಳನ್ನು ಬಳಸಿಕೊಳ್ಳುತ್ತಿವೆ. ಅದರಲ್ಲೂ ಮಾದಕ ದ್ರವ್ಯಗಳು (Drugs) ಸಾಗಣೆಯಾಗುವ ಮಾರ್ಗದಲ್ಲಿಯೇ ಇವುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳಿಸಲಾಗುತ್ತಿದೆ ಎಂದು ಹೇಳಿದೆ. 

ಘಾಜಿಪುರದಲ್ಲಿ ಪತ್ತೆಯಾದ ಐಇಡಿಯಲ್ಲಿ ರಿಮೋಟ್​ ನಿಯಂತ್ರಿತ ಟೈಮರ್ ಇತ್ತು. ಅದರಲ್ಲಿ ಐಇಡಿ ಸಜ್ಜಾದ ಒಂದು ತಾಸು ಎಂಟು ನಿಮಿಷದ ನಂತರ ಸ್ಫೋಟಿಸುವಂತೆ ಫಿಕ್ಸ್ ಮಾಡಿಡಲಾಗಿತ್ತು. ಹೀಗೆ ಭಾರತಕ್ಕೆ ಅಪಾರ ಪ್ರಮಾಣದಲ್ಲಿ ಬಾಂಬ್​, ಐಇಡಿ, ಗ್ರೆನೇಡ್​ಗಳನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ 5-6 ಕೆಜಿಗಳಷ್ಟು ತೂಕದ ಸುಮಾರು 20 ಐಇಡಿಗಳು, 100 ಗ್ರೆನೇಡ್​ಗಳನ್ನು ಪಂಜಾಬ್​ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನದಿಂದ ಹೆರಾಯಿನ್​ ಮತ್ತು ಅಫೀಮುಗಳಂತ ಡ್ರಗ್​ಗಳನ್ನು ಕಳ್ಳಸಾಗಣೆ ಮಾಡುವ ಮಾರ್ಗದಲ್ಲೇ, ಈ ಐಇಡಿಯಂಥ ಸ್ಫೋಟಕಗಳನ್ನೂ ಸಾಗಿಸುವ ಕೆಲಸವಾಗುತ್ತಿದೆ. ಇದಕ್ಕಾಗಿ ಪಾಕಿಸ್ತಾನಿ ಮೂಲದ ಉಗ್ರಸಂಘಟನೆಗಳು ಡ್ರೋನ್​, ಹಡಗುಗಳನ್ನು ಬಳಸಿಕೊಳ್ಳುತ್ತಿವೆ ಎಂದು ಭದ್ರತಾ ಏಜೆನ್ಸಿಗಳು ತಿಳಿಸಿವೆ. ಘಾಜಿಪುರದಲ್ಲಿ ಐಇಡಿ ಸ್ಫೋಟಗೊಳ್ಳುವುದನ್ನು ದೆಹಲಿ ಪೊಲೀಸರು ಸೂಕ್ತ ಸಮಯದಲ್ಲಿ ತಪ್ಪಿಸದೆ ಇದ್ದರೆ, ಅದು ಹಲವು ಅಮಾಯಕರನ್ನು ಖಂಡಿತವಾಗಿಯೂ ಕೊಲ್ಲುತ್ತಿತ್ತು. ಸ್ಫೋಟಕವನ್ನು ಸ್ಟೀಲ್ ಟಿಫಿನ್ ಬಾಕ್ಸ್​ನಲ್ಲಿ ಹಾಕಿ, ಸೈಕಲ್ ಬೇರಿಂಗ್ ಮತ್ತು ನೇಲ್​ಗಳನ್ನು ಸೇರಿಸಿಡಲಾಗಿತ್ತು. ಇದು ಸ್ಫೋಟವಾದಾಗ ಇನ್ನಷ್ಟು ತೀವ್ರತೆ ಹೆಚ್ಚಿಸುತ್ತದೆ.

ಇದನ್ನೂ ಓದಿ:ಟ್ಯಾಂಕರ್‌ಗಳಲ್ಲಿ ಬೇಬಿ ಟ್ಯಾಂಕ್ ಬಳಸಿ ಪೆಟ್ರೋಲ್ ಕಳ್ಳತನ; ಸುಮಾರು 50 ಲೀಟರ್ ಪೆಟ್ರೋಲ್ ಕಳವು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ