AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1971ರ ಯುದ್ಧ ನೆನಪಿಸಿಕೊಳ್ಳಿ; ಕೊಲ್ಕತ್ತಾ ಮೇಲೆ ದಾಳಿಯ ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

ಕೊಲ್ಕತ್ತಾದ ಮೇಲೆ ದಾಳಿ ನಡೆಸಲಾಗುವುದು ಎಂಬ ಪಾಕಿಸ್ತಾನದ ಸಚಿವ ಖವಾಜಾ ಆಸಿಫ್​ ಬೆದರಿಕೆಗೆ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿರುಗೇಟು ನೀಡಿದ್ದಾರೆ. ಪಶ್ಚಿಮ ಬಂಗಾಳದ ಕೊಲ್ಕತ್ತಾ ಮೇಲೆ ದಾಳಿ ಮಾಡುವ ಪಾಕಿಸ್ತಾನದ ರಕ್ಷಣಾ ಸಚಿವರ ಬೆದರಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ 55 ವರ್ಷಗಳ ಹಿಂದೆ ಏನಾಗಿತ್ತು ಎಂಬುದನ್ನು ನೆನಪಿಸಿದ್ದಾರೆ. ಪಾಕಿಸ್ತಾನವು ಭಾರತದ ಪೂರ್ವ ಮಹಾನಗರವಾದ ಕೊಲ್ಕತ್ತಾದ ಮೇಲೆ ದಾಳಿ ನಡೆಸುತ್ತದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಬೆದರಿಕೆ ಹಾಕಿದ್ದರು.

1971ರ ಯುದ್ಧ ನೆನಪಿಸಿಕೊಳ್ಳಿ; ಕೊಲ್ಕತ್ತಾ ಮೇಲೆ ದಾಳಿಯ ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ
Rajnath Singh Image Credit source: PTI
ಸುಷ್ಮಾ ಚಕ್ರೆ
|

Updated on: Apr 07, 2026 | 5:31 PM

Share

ನವದೆಹಲಿ, ಏಪ್ರಿಲ್ 7: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾರತದಿಂದ ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಎದುರಾದರೆ ಕೊಲ್ಕತ್ತಾವನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಆ ಹೇಳಿಕೆಗೆ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಪ್ರತಿಕ್ರಿಯೆ ನೀಡಿದ್ದು, ನೀವೇನಾದರೂ ಭಾರತದ ಮೇಲೆ ದಾಳಿ ನಡೆಸಿದರೆ ಏನಾಗುತ್ತದೆ ಎಂಬುದನ್ನು ಇನ್ನೊಮ್ಮೆ ಪ್ರಯತ್ನಿಸಿ ನೋಡಿ. 1971ರಲ್ಲಿ ಏನಾಗಿತ್ತೆಂಬುದನ್ನು ನೆನಪಿಸಿಕೊಳ್ಳಿ ಎಂದಿದ್ದಾರೆ.

ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, 1971ರ ಯುದ್ಧದಲ್ಲಿ ಪಾಕಿಸ್ತಾನವನ್ನು ಎರಡು ಭಾಗಗಳಾಗಿ ವಿಭಜಿಸಿದ ಪರಿಣಾಮಗಳನ್ನು ನೆನಪಿಸಿಕೊಳ್ಳಿ. ಕೊಲ್ಕತ್ತಾದ ಮೇಲೆ ದಾಳಿ ನಡೆಸಲು ಬಂದರೆ ಪಾಕಿಸ್ತಾನ ಎಷ್ಟು ಭಾಗವಾಗುತ್ತದೋ ದೇವರಿಗೇ ಗೊತ್ತು ಎಂದು ಎಚ್ಚರಿಕೆ ನೀಡಿದ್ದಾರೆ. 1971ರ ಭಾರತ-ಪಾಕಿಸ್ತಾನ ಯುದ್ಧವು ಬಾಂಗ್ಲಾದೇಶದ ರಚನೆಗೆ ಕಾರಣವಾದ ದೇಶಗಳ ನಡುವಿನ ಪ್ರಮುಖ ಮಿಲಿಟರಿ ಸಂಘರ್ಷವಾಗಿತ್ತು.

ಇದನ್ನೂ ಓದಿ: 16 ವರ್ಷಗಳಿಂದ ಭಾರತದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಪಾಕಿಸ್ತಾನದ ಎಲ್​ಇಟಿ ಉಗ್ರ ಸೆರೆ

“ಪಾಕಿಸ್ತಾನದ ರಕ್ಷಣಾ ಸಚಿವರು ಈ ರೀತಿಯ ಪ್ರಚೋದನಕಾರಿ ಹೇಳಿಕೆಯನ್ನು ನೀಡಬಾರದಿತ್ತು. 55 ವರ್ಷಗಳ ಹಿಂದೆ ಪಾಕಿಸ್ತಾನವನ್ನು 2 ಭಾಗಗಳಾಗಿ ವಿಂಗಡಿಸಿದಾಗ ಪಾಕಿಸ್ತಾನ ಅದರ ಪರಿಣಾಮಗಳನ್ನು ಅನುಭವಿಸಿತ್ತು. ಅವರು ಬಂಗಾಳದ ಮೇಲೆ ಕಣ್ಣಿಡಲು ಪ್ರಯತ್ನಿಸಿದರೆ ಈ ಬಾರಿ ಪಾಕಿಸ್ತಾನ ಎಷ್ಟು ಭಾಗಗಳಾಗಿ ವಿಂಗಡಿಸಲ್ಪಡುತ್ತದೆಯೋ ದೇವರಿಗೇ ಗೊತ್ತು” ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!
ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ
ಅಮೆರಿಕದ ಪನಾಮ ಸೇತುವೆ ಮೇಲೆ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ
ಅಮೆರಿಕದ ಪನಾಮ ಸೇತುವೆ ಮೇಲೆ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ