AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್​​ಜಿ ಮೂಲಕ ನೋಯ್ಡಾ ವ್ಯಕ್ತಿ ಜತೆ ಸ್ನೇಹ; ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನದ ಮಹಿಳೆ

ಸುಮಾರು 20 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ಪಾಕಿಸ್ತಾನಿ ಮಹಿಳೆ ಮತ್ತು ಸ್ಥಳೀಯ ಪುರುಷ ಆನ್‌ಲೈನ್ ಗೇಮ್ ಪಬ್​ಜಿ ಮೂಲಕ ಸಂಪರ್ಕ ಹೊಂದಿದ್ದರು. ಇದು ಅವರ ನಡುವಿನ ಸ್ನೇಹಕ್ಕೆ ಕಾರಣವಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪಬ್​​ಜಿ ಮೂಲಕ ನೋಯ್ಡಾ ವ್ಯಕ್ತಿ ಜತೆ ಸ್ನೇಹ; ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನದ ಮಹಿಳೆ
ಪಬ್​ಜಿ ಗೇಮ್ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Jul 03, 2023 | 9:23 PM

Share

ನೋಯ್ಡಾ: ಗ್ರೇಟರ್ ನೋಯ್ಡಾದಲ್ಲಿ ಅಕ್ರಮವಾಗಿ ತಂಗಿದ್ದ ಪಾಕಿಸ್ತಾನಿ ಮಹಿಳೆ ಮತ್ತು ಆಕೆಯ ನಾಲ್ಕು ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ. ಆನ್​ಲೈನ್ ಗೇಮ್ ಪಬ್​ಜಿ (PUBG) ಆಡುವಾಗ ನೋಯ್ಡಾದ ವ್ಯಕ್ತಿಯೊಬ್ಬರನ್ನು ಪರಿಚಯವಾಗಿ ಆ ಮಹಿಳೆ ಭಾರತಕ್ಕೆ ಬಂದಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಟ್ಟಿರುವ ಗ್ರೇಟರ್ ನೋಯ್ಡಾ ನಿವಾಸಿಯಾಗಿರುವ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ವ್ಯಕ್ತಿ ತಮ್ಮ ಬಾಡಿಗೆ ವಸತಿಗೃಹದಲ್ಲಿ ಪಾಕಿಸ್ತಾನದ ಮಹಿಳೆ ಹಾಗೂ ಆಕೆಯ ಮಕ್ಕಳನ್ನು ಇರಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನಿ ಮಹಿಳೆ ಮತ್ತು ಸ್ಥಳೀಯ ಪುರುಷನನ್ನು ಬಂಧಿಸಲಾಗಿದೆ. ಮಹಿಳೆಯ ನಾಲ್ವರು ಮಕ್ಕಳೂ ಸಹ ಪೊಲೀಸ್ ವಶದಲ್ಲಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ (ಗ್ರೇಟರ್ ನೋಯ್ಡಾ) ಸಾದ್ ಮಿಯಾ ಖಾನ್ ‘ಪಿಟಿಐ’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸುಮಾರು 20 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ಪಾಕಿಸ್ತಾನಿ ಮಹಿಳೆ ಮತ್ತು ಸ್ಥಳೀಯ ಪುರುಷ ಆನ್‌ಲೈನ್ ಗೇಮ್ ಪಬ್​ಜಿ ಮೂಲಕ ಸಂಪರ್ಕ ಹೊಂದಿದ್ದರು. ಇದು ಅವರ ನಡುವಿನ ಸ್ನೇಹಕ್ಕೆ ಕಾರಣವಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇಬ್ಬರನ್ನೂ ಪ್ರಶ್ನಿಸಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ವಿಚಾರಣೆ ಮುಗಿದ ನಂತರ ಹೆಚ್ಚಿನ ವಿವರಗಳು ಮತ್ತು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಖಾನ್ ಹೇಳಿದ್ದಾರೆ.

ಇದನ್ನೂ ಓದಿ: Supreme Court: ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸುಪ್ರೀಂನಲ್ಲಿ ಜುಲೈ 11ರಂದು ವಿಚಾರಣೆ

ಸ್ಥಳೀಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಹಿಳೆ ಕಳೆದ ತಿಂಗಳು ನೇಪಾಳದ ಮೂಲಕ ತನ್ನ ಮಕ್ಕಳೊಂದಿಗೆ ಭಾರತಕ್ಕೆ ಪ್ರವೇಶಿಸಿದ್ದಳು. ಬಳಿಕ ಉತ್ತರ ಪ್ರದೇಶಕ್ಕೆ ಬಂದು ಮತ್ತು ಬಸ್ ಮೂಲಕ ಗ್ರೇಟರ್ ನೋಯ್ಡಾ ತಲುಪಿದ್ದಳು.

ಮಹಿಳೆ ಮತ್ತು ಆಕೆಯ ಮಕ್ಕಳು ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಯ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ