AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್​​ಜಿ ಮೂಲಕ ನೋಯ್ಡಾ ವ್ಯಕ್ತಿ ಜತೆ ಸ್ನೇಹ; ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನದ ಮಹಿಳೆ

ಸುಮಾರು 20 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ಪಾಕಿಸ್ತಾನಿ ಮಹಿಳೆ ಮತ್ತು ಸ್ಥಳೀಯ ಪುರುಷ ಆನ್‌ಲೈನ್ ಗೇಮ್ ಪಬ್​ಜಿ ಮೂಲಕ ಸಂಪರ್ಕ ಹೊಂದಿದ್ದರು. ಇದು ಅವರ ನಡುವಿನ ಸ್ನೇಹಕ್ಕೆ ಕಾರಣವಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪಬ್​​ಜಿ ಮೂಲಕ ನೋಯ್ಡಾ ವ್ಯಕ್ತಿ ಜತೆ ಸ್ನೇಹ; ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನದ ಮಹಿಳೆ
ಪಬ್​ಜಿ ಗೇಮ್ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Jul 03, 2023 | 9:23 PM

ನೋಯ್ಡಾ: ಗ್ರೇಟರ್ ನೋಯ್ಡಾದಲ್ಲಿ ಅಕ್ರಮವಾಗಿ ತಂಗಿದ್ದ ಪಾಕಿಸ್ತಾನಿ ಮಹಿಳೆ ಮತ್ತು ಆಕೆಯ ನಾಲ್ಕು ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ. ಆನ್​ಲೈನ್ ಗೇಮ್ ಪಬ್​ಜಿ (PUBG) ಆಡುವಾಗ ನೋಯ್ಡಾದ ವ್ಯಕ್ತಿಯೊಬ್ಬರನ್ನು ಪರಿಚಯವಾಗಿ ಆ ಮಹಿಳೆ ಭಾರತಕ್ಕೆ ಬಂದಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಟ್ಟಿರುವ ಗ್ರೇಟರ್ ನೋಯ್ಡಾ ನಿವಾಸಿಯಾಗಿರುವ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ವ್ಯಕ್ತಿ ತಮ್ಮ ಬಾಡಿಗೆ ವಸತಿಗೃಹದಲ್ಲಿ ಪಾಕಿಸ್ತಾನದ ಮಹಿಳೆ ಹಾಗೂ ಆಕೆಯ ಮಕ್ಕಳನ್ನು ಇರಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನಿ ಮಹಿಳೆ ಮತ್ತು ಸ್ಥಳೀಯ ಪುರುಷನನ್ನು ಬಂಧಿಸಲಾಗಿದೆ. ಮಹಿಳೆಯ ನಾಲ್ವರು ಮಕ್ಕಳೂ ಸಹ ಪೊಲೀಸ್ ವಶದಲ್ಲಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ (ಗ್ರೇಟರ್ ನೋಯ್ಡಾ) ಸಾದ್ ಮಿಯಾ ಖಾನ್ ‘ಪಿಟಿಐ’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸುಮಾರು 20 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ಪಾಕಿಸ್ತಾನಿ ಮಹಿಳೆ ಮತ್ತು ಸ್ಥಳೀಯ ಪುರುಷ ಆನ್‌ಲೈನ್ ಗೇಮ್ ಪಬ್​ಜಿ ಮೂಲಕ ಸಂಪರ್ಕ ಹೊಂದಿದ್ದರು. ಇದು ಅವರ ನಡುವಿನ ಸ್ನೇಹಕ್ಕೆ ಕಾರಣವಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇಬ್ಬರನ್ನೂ ಪ್ರಶ್ನಿಸಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ವಿಚಾರಣೆ ಮುಗಿದ ನಂತರ ಹೆಚ್ಚಿನ ವಿವರಗಳು ಮತ್ತು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಖಾನ್ ಹೇಳಿದ್ದಾರೆ.

ಇದನ್ನೂ ಓದಿ: Supreme Court: ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸುಪ್ರೀಂನಲ್ಲಿ ಜುಲೈ 11ರಂದು ವಿಚಾರಣೆ

ಸ್ಥಳೀಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಹಿಳೆ ಕಳೆದ ತಿಂಗಳು ನೇಪಾಳದ ಮೂಲಕ ತನ್ನ ಮಕ್ಕಳೊಂದಿಗೆ ಭಾರತಕ್ಕೆ ಪ್ರವೇಶಿಸಿದ್ದಳು. ಬಳಿಕ ಉತ್ತರ ಪ್ರದೇಶಕ್ಕೆ ಬಂದು ಮತ್ತು ಬಸ್ ಮೂಲಕ ಗ್ರೇಟರ್ ನೋಯ್ಡಾ ತಲುಪಿದ್ದಳು.

ಮಹಿಳೆ ಮತ್ತು ಆಕೆಯ ಮಕ್ಕಳು ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಯ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು