AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu&Kashmir: ಗಡಿಯಲ್ಲಿ ಪಾಕ್​​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ಬಲೂನ್ ಪತ್ತೆ

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ಥಾನ​​ ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ನಿಗೂಢ ಬಲೂನ್ ಪತ್ತೆಯಾಗಿದೆ.

Jammu&Kashmir: ಗಡಿಯಲ್ಲಿ ಪಾಕ್​​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ಬಲೂನ್ ಪತ್ತೆ
ವಿಮಾನ ಆಕಾರದ ನಿಗೂಢ ಬಲೂನ್​ ಪತ್ತೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 10, 2023 | 11:47 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir) ಗಡಿಯಲ್ಲಿ ಪಾಕಿಸ್ಥಾನ​​ (Pakistan) ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಲೋಗೋ ಇರುವ ವಿಮಾನ ಆಕಾರದ ನಿಗೂಢ ಬಲೂನ್ (Balloon) ಪತ್ತೆಯಾಗಿದೆ. ಕಥುವಾ ಜಿಲ್ಲೆ ಹೀರಾನಗರದ ಬಳಿ ಬಿದ್ದಿರುವ ಕಪ್ಪು-ಬಿಳಿ ಬಣ್ಣದ ನಿಗೂಢ ಬಲೂನ್​​ ಅನ್ನು ಬಿಎಸ್​ಎಫ್ ಯೋಧರು ವಶಪಡಿಸಿಕೊಂಡಿದ್ದಾರೆ. ಬಲೂನ್ ಮೂಲವನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ ಕೂಡ ಇದೇ ರೀತಿಯಾಗಿ 2023ರ ಫೆಬ್ರವರಿಯಲ್ಲಿ ಪಾಕಿಸ್ಥಾನ​​ ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಲೋಗೋ ವಿಮಾನ ಆಕಾರದ ಹಸಿರು ಮತ್ತು ಬಿಳಿ ಬಲೂನ್ ಶಿಮ್ಲಾದ ಸೇಬಿನ ತೋಟದಲ್ಲಿ ಪತ್ತೆಯಾಗಿತ್ತು. ಈ ಮೂಲಕ ಇದೀಗ ಮತ್ತೆ ಎರಡನೇ ಬಾರಿಗೆ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಮೇ 20 ರಂದು ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್​ಅನ್ನು ಸೇನೆ ಹೊಡೆದುರುಳಿಸಿತ್ತು. ಈ ವೇಳೆ ಶಂಕಿತ ಮಾದಕವಸ್ತುಗಳನ್ನು ಹೊಂದಿರುವ ಚೀಲವನ್ನು ವಶಪಡಿಸಿಕೊಂಡಿರುವುದಾಗಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ತಿಳಿಸಿದ್ದರು. ಇದರ ಹಿಂದಿನ ದಿನ, ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಮೂರು ಪಾಕಿಸ್ತಾನಿ ಡ್ರೋನ್‌ಗಳನ್ನು ಬಿಎಸ್​ಎಫ್​​ ಹೊಡೆದುರುಳಿಸಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 am, Sat, 10 June 23

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!