ಇಷ್ಟಪಟ್ಟವನೊಂದಿಗೆ ಮದುವೆಯಾಗಲು ಭಾರತಕ್ಕೆ ಬರಲಿದ್ದಾರೆ ಪಾಕ್​ ಯುವತಿ

ಭಾರತದ ಯುವಕ ಹಾಗೂ ಪಾಕಿಸ್ತಾನಿ ಯುವತಿ ನಡುವೆ ಪ್ರೀತಿಯ ಮೊಳಕೆ ಚಿಗುರೊಡೆದಿದೆ. ಹಾಗೆಯೇ ಯುವತಿಯು 45 ದಿನಗಳ ವೀಸಾ ಪಡೆದು ಯುವಕನನ್ನು ಮದುವೆಯಾಗಲು ಭಾರತಕ್ಕೆ ಬರಲಿದ್ದಾರೆ. ಅಟ್ಟಾರಿ-ವಾಘಾ ಗಡಿ ಮೂಲಕ ದೇಶಕ್ಕೆ ಬರುತ್ತಿದ್ದು, ಭಾರತ ಸರ್ಕಾರ ಆಕೆಗೆ 45 ದಿನಗಳ ವೀಸಾ ನೀಡಿದೆ.

ಇಷ್ಟಪಟ್ಟವನೊಂದಿಗೆ ಮದುವೆಯಾಗಲು ಭಾರತಕ್ಕೆ ಬರಲಿದ್ದಾರೆ ಪಾಕ್​ ಯುವತಿ
ಜವ್ರಿಯಾImage Credit source: News 9
Follow us
|

Updated on: Dec 05, 2023 | 12:34 PM

ಭಾರತದ ಯುವಕ ಹಾಗೂ ಪಾಕಿಸ್ತಾನಿ ಯುವತಿ ನಡುವೆ ಪ್ರೀತಿಯ ಮೊಳಕೆ ಚಿಗುರೊಡೆದಿದೆ. ಹಾಗೆಯೇ ಯುವತಿಯು 45 ದಿನಗಳ ವೀಸಾ ಪಡೆದು ಯುವಕನನ್ನು ಮದುವೆಯಾಗಲು ಭಾರತಕ್ಕೆ ಬರಲಿದ್ದಾರೆ. ಅಟ್ಟಾರಿ-ವಾಘಾ ಗಡಿ ಮೂಲಕ ದೇಶಕ್ಕೆ ಬರುತ್ತಿದ್ದು, ಭಾರತ ಸರ್ಕಾರ ಆಕೆಗೆ 45 ದಿನಗಳ ವೀಸಾ ನೀಡಿದೆ.

ಜವ್ರಿಯಾ ಕೋಲ್ಕತ್ತಾ ಮೂಲದ ಸಮೀರ್ ಖಾನ್ ಅವರನ್ನು ವರಿಸಲಿದ್ದಾರೆ. ವರದಿಗಳ ಪ್ರಕಾರ, ಇಬ್ಬರು ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಹಿಳೆ ತನ್ನ ತಂದೆಯೊಂದಿಗೆ ಭಾರತಕ್ಕೆ ಬರಲಿದ್ದಾರೆ. ಕರಾಚಿ ನಿವಾಸಿ, ಅಜ್ಮತ್ ಇಸ್ಮಾಯಿಲ್ ಖಾನ್ ಮತ್ತು ಅವರ ಮಗಳನ್ನು ಸಮೀರ್ ಖಾನ್ ಮತ್ತು ಅವರ ತಂದೆ ಅಹ್ಮದ್ ಕಮಲ್ ಖಾನ್ ಯೂಸುಫ್ಜೈ ಅವರು ದೇಶಕ್ಕೆ ಸ್ವಾಗತಿಸಲಿದ್ದಾರೆ. ಅಮೃತಸರದ ಅಟ್ಟಾರಿ ಗಡಿಯಲ್ಲಿ ಅವರು ತಮ್ಮ ಅತಿಥಿಗಳನ್ನು ಭೇಟಿಯಾಗಲಿದ್ದಾರೆ.

ಸಮೀರ್ ಖಾನ್ ಮತ್ತು ಅವರ ತಂದೆ ಪ್ರಸ್ತುತ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಖಾಡಿಯನ್ ಗ್ರಾಮದಲ್ಲಿ ಸಂಬಂಧಿಕರೊಂದಿಗೆ ಇದ್ದಾರೆ. ತಮ್ಮ ಇಬ್ಬರು ಅತಿಥಿಗಳು ಪಾಕಿಸ್ತಾನದಿಂದ ಬರುತ್ತಾರೆ ಎಂದು ಅವರು ಕುತೂಹಲದಿಂದ ಕಾಯುತ್ತಿದ್ದಾರೆ.

ಭಾರತ ಸರ್ಕಾರವು ಜವಾರಿಯಾ ಖಾನಮ್ ಮತ್ತು ಆಕೆಯ ತಂದೆಗೆ ವೀಸಾ ನೀಡುತ್ತಿರಲಿಲ್ಲ. ಆಗ ಪಂಜಾಬ್‌ನ ಖಾಡಿಯನ್ ಗ್ರಾಮದ ಸಾಮಾಜಿಕ ಕಾರ್ಯಕರ್ತ ಮಕ್ಬೂಲ್ ಅಹ್ಮದ್ ಖಾದಿಯಾನ್ ಅವರು ದೇಶಕ್ಕೆ ವೀಸಾ ಪಡೆಯಲು ಸಹಾಯ ಮಾಡಿದರು. ಅವರ ವೀಸಾ 45 ದಿನಗಳವರೆಗೆ ಮಾನ್ಯವಾಗಿರುತ್ತದೆ.

ಮತ್ತಷ್ಟು ಓದಿ: ಪಾಕಿಸ್ತಾನಕ್ಕೆ ಹೋಗಿ ಫೇಸ್​ಬುಕ್​ ಸ್ನೇಹಿತನನ್ನು ಮದುವೆಯಾಗಿದ್ದ ಅಂಜು ಭಾರತಕ್ಕೆ ವಾಪಸ್

ಮಹಿಳೆ ಅಮೃತಸರಕ್ಕೆ ಬಂದ ಕೂಡಲೇ ನಗರದ ವಿಮಾನ ನಿಲ್ದಾಣಕ್ಕೆ ತೆರಳುತ್ತಾರೆ. ಇಲ್ಲಿಂದ ಕೋಲ್ಕತ್ತಾಗೆ ಹಾರಲು ನಿರ್ಧರಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ  ಜವ್ರಿಯಾ ಮತ್ತು ಸಮೀರ್ ವಿವಾಹವಾಗಲಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ತನ್ನ ಮದುವೆಯ ನಂತರ, ಮಹಿಳೆ ತನ್ನ ವೀಸಾವನ್ನು ವಿಸ್ತರಿಸಲು ಭಾರತ ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.

ಸೀಮಾ ಎಂಬುವವರು ಭಾರತದ ಸಚಿನ್ ಮೀನಾ ಅವರೊಂದಿಗೆ ಪ್ರೀತಿಯಲ್ಲಿ ಬಿದ್ದು, ಮದುವೆ ಮಾಡಿಕೊಳ್ಳುವ ಸಲುವಾಗಿ ತನ್ನ ಮಕ್ಕಳನ್ನೂ ಕಡೆದುಕೊಂಡು ಭಾರತಕ್ಕೆ ಬಂದಿದ್ದರು. ಅಂಜು ಎಂಬುವವರು ಪಾಕಿಸ್ತಾನಿ ಸ್ನೇಹಿತನ್ನು ಮದುವೆಯಾಗಲು ಪತಿ ಹಾಗೂ ಮಕ್ಕಳನ್ನು ಬಿಟ್ಟು ಪಾಕಿಸ್ತಾನಕ್ಕೆ ತೆರಳಿದ್ದ ಘಟನೆಯೂ ಇತ್ತೀಚೆಗಷ್ಟೇ ವರದಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​