AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್​ನಲ್ಲಿ ಪಾಕಿಸ್ತಾನಿ ಐಎಸ್​ಐ ಏಜೆಂಟ್​ ಬಂಧನ

ಮೀರತ್​ನಲ್ಲಿ ಪಾಕಿಸ್ತಾನಿ ಐಎಸ್​ಐ ಏಜೆಂಟ್​ನಲ್ಲಿ ಬಂಧಿಸಲಾಗಿದೆ. ಭಯೋತ್ಪಾದನಾ ನಿಗ್ರಹ ದಳವು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಗೂಢಚಾರಿಕೆ ನಡೆಸುತ್ತಿರುವ ಬಗ್ಗೆ ಮೂಲಗಳಿಂದ ಸುಳಿವು ಪಡೆದಿದೆ. ಭಾರತೀಯ ರಾಯಭಾರ ಕಚೇರಿ, ರಕ್ಷಣಾ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಪ್ರಮುಖ ಮತ್ತು ಗೌಪ್ಯ ಮಾಹಿತಿಯನ್ನು ಐಎಸ್‌ಐ ಹ್ಯಾಂಡ್ಲರ್‌ಗಳಿಗೆ ರವಾನಿಸಿದ್ದಾರೆ ಎಂಬ ಆರೋಪವೂ ಅವರ ಮೇಲಿದೆ.

ಮೀರತ್​ನಲ್ಲಿ ಪಾಕಿಸ್ತಾನಿ ಐಎಸ್​ಐ ಏಜೆಂಟ್​ ಬಂಧನ
Image Credit source: India Today
ನಯನಾ ರಾಜೀವ್
|

Updated on: Feb 04, 2024 | 12:29 PM

Share

ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಯುಪಿ ಎಟಿಎಸ್) ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ನಿಯೋಜನೆಗೊಂಡಿದ್ದ ಪಾಕಿಸ್ತಾನಿ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಏಜೆಂಟ್‌ನನ್ನು ಬಂಧಿಸಿದೆ. ಸತ್ಯೇಂದ್ರ ಸಿವಾಲ್ ಅವರನ್ನು 2021 ರಿಂದ ರಾಯಭಾರ ಕಚೇರಿಯಲ್ಲಿ ನಿಯೋಜಿಸಲಾಗಿತ್ತು. ಅವರು ಅಲ್ಲಿ ಭಾರತ ಆಧಾರಿತ ಭದ್ರತಾ ಸಹಾಯಕರಾಗಿ (IBSA) ಕೆಲಸ ಮಾಡಿದ್ದರು.

ಭಯೋತ್ಪಾದನಾ ನಿಗ್ರಹ ದಳವು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಗೂಢಚಾರಿಕೆ ನಡೆಸುತ್ತಿರುವ ಬಗ್ಗೆ ಮೂಲಗಳಿಂದ ಸುಳಿವು ಪಡೆದಿದೆ.

ವಿಚಾರಣೆಯ ಸಮಯದಲ್ಲಿ, ಸತ್ಯೇಂದ್ರ ಸಿವಾಲ್ ಅವರು ಭಾರತೀಯ ಸೇನೆ ಮತ್ತು ಅದರ ದೈನಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಹೊರತೆಗೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಹಣದ ಆಮಿಷ ಒಡ್ಡುತ್ತಿದ್ದರು ಎಂಬುದನ್ನು ಬಾಯ್ಬಿಟ್ಟಿದ್ದಾರೆ.

ಮತ್ತಷ್ಟು ಓದಿ: ಮಂಗಳೂರು: ನಿಗೂಢ ಕೆಲಸಕ್ಕಾಗಿ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡ ಸೆರೆ

ಭಾರತೀಯ ರಾಯಭಾರ ಕಚೇರಿ, ರಕ್ಷಣಾ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಪ್ರಮುಖ ಮತ್ತು ಗೌಪ್ಯ ಮಾಹಿತಿಯನ್ನು ಐಎಸ್‌ಐ ಹ್ಯಾಂಡ್ಲರ್‌ಗಳಿಗೆ ರವಾನಿಸಿದ್ದಾರೆ ಎಂಬ ಆರೋಪವೂ ಅವರ ಮೇಲಿದೆ.

ಮಾಹಿತಿಯ ಮೇರೆಗೆ ಯುಪಿ ಎಟಿಎಸ್ ಸಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಿತು, ಅವರು ಆರಂಭದಲ್ಲಿ ಅತೃಪ್ತಿಕರ ಉತ್ತರಗಳನ್ನು ನೀಡಿದರು. ಆದಾಗ್ಯೂ, ನಂತರ ಅವರು ಬೇಹುಗಾರಿಕೆಯನ್ನು ಒಪ್ಪಿಕೊಂಡರು ಮತ್ತು ಮೀರತ್‌ನಲ್ಲಿ ಬಂಧಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್