AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹಿಜಾಬ್​ ವಿವಾದ: ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಭಾರತದ ಗುಪ್ತಚರ ಸಂಸ್ಥೆಗಳು

ಭಾರತದಲ್ಲಿರುವ ಕೆಲವರು ದೇಶ ವಿರೋಧಿಗಳು ಸಿಖ್​ ಫಾರ್ ಜಸ್ಟೀಸ್​ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುರನ್ನು ಸೇರಿಕೊಂಡು ಇಲ್ಲಿ ಹಿಜಾಬ್​ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಬಹುದು ಎಂದೂ ಗುಪ್ತಚರ ಸಂಸ್ಥೆಗಳು ಹೇಳಿವೆ.

ಕರ್ನಾಟಕ ಹಿಜಾಬ್​ ವಿವಾದ: ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಭಾರತದ ಗುಪ್ತಚರ ಸಂಸ್ಥೆಗಳು
ಹಿಜಾಬ್​ ಧರಿಸಿದ ಯುವತಿಯರು (ಪಿಟಿಐ ಚಿತ್ರ)
TV9 Web
| Edited By: |

Updated on:Feb 12, 2022 | 11:48 AM

Share

ಕರ್ನಾಟಕದಲ್ಲಿ ಎದ್ದಿರುವ ಹಿಜಾಬ್​ ವಿವಾದಕ್ಕೆ (Hijab Row) ಪಾಕಿಸ್ತಾನದ ಸಚಿವರಿಬ್ಬರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ರಾಷ್ಟ್ರ ಮಟ್ಟದಲ್ಲೂ ಅನೇಕರು ಈ ಬಗ್ಗೆ ಮಾತನಾಡುತ್ತಿದ್ದಾರೆ. ಹೀಗಿರುವಾಗ ಗುಪ್ತಚರ ಸಂಸ್ಥೆಗಳು ಶಾಕಿಂಗ್​ ಮಾಹಿತಿಯೊಂದನ್ನು ನೀಡಿವೆ. ಭಾರತದ ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್​ ವಿವಾದವನ್ನು ಇನ್ನಷ್ಟು ಹೆಚ್ಚಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​ಐ ಪ್ರಯತ್ನ ಮಾಡುತ್ತಿದೆ. ಅದೂ ಕೂಡ ನಿಷೇಧಿತ ಖಲಿಸ್ತಾನಿ ಸಂಘಟನೆಯಾದ ಸಿಖ್​ ಫಾರ್​ ಜಸ್ಟೀಸ್​ ಮೂಲಕ ಜಿಜಾಬ್ ವಿವಾದಕ್ಕೆ ಉತ್ತೇಜನ ನೀಡಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ಮಾಹಿತಿ ನೀಡಿವೆ ಎಂಬುದು ಮೂಲಗಳಿಂದ ತಿಳಿದಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಭಾರತದಲ್ಲಿರುವ ಕೆಲವರು ದೇಶ ವಿರೋಧಿಗಳು ಸಿಖ್​ ಫಾರ್ ಜಸ್ಟೀಸ್​ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುರನ್ನು ಸೇರಿಕೊಂಡು ಇಲ್ಲಿ ಹಿಜಾಬ್​ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಬಹುದು. ಈ ಮೂಲಕ ಇಲ್ಲಿನ ಪರ-ವಿರೋಧ ವಿವಾದವನ್ನು ಇನ್ನಷ್ಟು ಹೆಚ್ಚಿಸಬಹುದು ಎಂದೂ ದೇಶದ ಗುಪ್ತಚರ ಇಲಾಖೆಗಳು ಎಚ್ಚರಿಕೆ ನೀಡಿವೆ. ಭಾರತದ ರಾಜಸ್ಥಾನ, ದೆಹಲಿ, ಉತ್ತರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಉರ್ದುಸ್ತಾನ್​ ಪರಿಕಲ್ಪನೆಗೆ ಉತ್ತೇಜನ ನೀಡಲು, ಈ ಸಿಖ್ ಫಾರ್ ಜಸ್ಟೀಸ್ ಸಂಘಟನೆ ಹಿಜಾಬ್​ ಜನಾಭಿಪ್ರಾಯ ಚಳವಳಿ ಪ್ರಾರಂಭಿಸಲು ಮುಸ್ಲಿಮರಿಗೆ ಕರೆ ನೀಡಿದೆ ಎಂದೂ ಹೇಳಲಾಗಿದೆ. ಅಷ್ಟೇ ಅಲ್ಲ, ಎಸ್​ಎಫ್​ಜೆ ಮುಖ್ಯಸ್ಥ ಈಗಾಗಲೇ ವಿಡಿಯೋ ಸಂದೇಶದ ಮೂಲಕ ಭಾರತೀಯ ಮುಸ್ಲಿಮರನ್ನು ಪ್ರಚೋದಿಸಿದ್ದಾನೆ ಎಂದೂ ತಿಳಿಸಿಲಾಗಿದೆ.

ಭಾರತದಲ್ಲಿ ಉರ್ದುಸ್ತಾನ್ ರಚಿಸಲು ಎಸ್​ಎಫ್​ಜೆ ಎಲ್ಲ ರೀತಿಯ ಸಹಾಯ ಮಾಡುತ್ತದೆ. ಹಿಜಾಬ್​ ವಿವಾದಕ್ಕೆ ಸಂಬಂಧಪಟ್ಟಂತೆ ಜನಾಭಿಪ್ರಾಯ ಸಂಗ್ರಹಣೆ ಮಾಡಲು, ಜನರನ್ನು ಹೆಚ್ಚೆಚ್ಚು ಸಂಘಟಿಸಲು ಧನಸಹಾಯ ಮಾಡುತ್ತದೆ ಎಂದು ಸಂಘಟನೆಯ ಮುಖ್ಯಸ್ಥರು ಭಾರತದ ಮುಸ್ಲಿಮರಿಗೆ ಅದರಲ್ಲೂ ಈ ಹಿಜಾಬ್​ ಪರ ಹೋರಾಟ ನಡೆಸುತ್ತಿರುವವರಿಗೆ ಭರವಸೆ ನೀಡಿದ್ದಾರೆ. ಹಿಜಾಬ್​ಗೆ ಸಂಬಂಧಪಟ್ಟಂತೆ ಜನಾಭಿಪ್ರಾಯ ಸಂಗ್ರಹಣೆ ಮಾಡಲು ಆನ್​ಲೈನ್​ ನೋಂದಣಿ ವೇದಿಕೆಗಳೂ ಶುರುವಾಗಿದ್ದು, ಅದರ ಸ್ಕ್ರೀನ್​ಶಾಟ್​ ಫೋಟೋಗಳು ಸಿಕ್ಕಿದ್ದಾಗಿಯೂ ಭಾರತೀಯ ಗುಪ್ತಚರ ಇಲಾಖೆಗಳು ಹೇಳಿದ್ದಾಗಿ ರಾಷ್ಟ್ರೀಯ ಮಾಧ್ಯಮ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಹಿಜಾಬ್ V/S ಕೇಸರಿ ಶಾಲು; ಉಡುಪಿ ಶಾಸಕ ರಘುಪತಿ ಭಟ್​ಗೆ ವಿದೇಶಗಳಿಂದ ಜೀವ ಬೆದರಿಕೆ ಕರೆಗಳು

Published On - 11:41 am, Sat, 12 February 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ