AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹಿಜಾಬ್​ ವಿವಾದ: ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಭಾರತದ ಗುಪ್ತಚರ ಸಂಸ್ಥೆಗಳು

ಭಾರತದಲ್ಲಿರುವ ಕೆಲವರು ದೇಶ ವಿರೋಧಿಗಳು ಸಿಖ್​ ಫಾರ್ ಜಸ್ಟೀಸ್​ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುರನ್ನು ಸೇರಿಕೊಂಡು ಇಲ್ಲಿ ಹಿಜಾಬ್​ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಬಹುದು ಎಂದೂ ಗುಪ್ತಚರ ಸಂಸ್ಥೆಗಳು ಹೇಳಿವೆ.

ಕರ್ನಾಟಕ ಹಿಜಾಬ್​ ವಿವಾದ: ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಭಾರತದ ಗುಪ್ತಚರ ಸಂಸ್ಥೆಗಳು
ಹಿಜಾಬ್​ ಧರಿಸಿದ ಯುವತಿಯರು (ಪಿಟಿಐ ಚಿತ್ರ)
TV9 Web
| Edited By: |

Updated on:Feb 12, 2022 | 11:48 AM

Share

ಕರ್ನಾಟಕದಲ್ಲಿ ಎದ್ದಿರುವ ಹಿಜಾಬ್​ ವಿವಾದಕ್ಕೆ (Hijab Row) ಪಾಕಿಸ್ತಾನದ ಸಚಿವರಿಬ್ಬರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ರಾಷ್ಟ್ರ ಮಟ್ಟದಲ್ಲೂ ಅನೇಕರು ಈ ಬಗ್ಗೆ ಮಾತನಾಡುತ್ತಿದ್ದಾರೆ. ಹೀಗಿರುವಾಗ ಗುಪ್ತಚರ ಸಂಸ್ಥೆಗಳು ಶಾಕಿಂಗ್​ ಮಾಹಿತಿಯೊಂದನ್ನು ನೀಡಿವೆ. ಭಾರತದ ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್​ ವಿವಾದವನ್ನು ಇನ್ನಷ್ಟು ಹೆಚ್ಚಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​ಐ ಪ್ರಯತ್ನ ಮಾಡುತ್ತಿದೆ. ಅದೂ ಕೂಡ ನಿಷೇಧಿತ ಖಲಿಸ್ತಾನಿ ಸಂಘಟನೆಯಾದ ಸಿಖ್​ ಫಾರ್​ ಜಸ್ಟೀಸ್​ ಮೂಲಕ ಜಿಜಾಬ್ ವಿವಾದಕ್ಕೆ ಉತ್ತೇಜನ ನೀಡಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ಮಾಹಿತಿ ನೀಡಿವೆ ಎಂಬುದು ಮೂಲಗಳಿಂದ ತಿಳಿದಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಭಾರತದಲ್ಲಿರುವ ಕೆಲವರು ದೇಶ ವಿರೋಧಿಗಳು ಸಿಖ್​ ಫಾರ್ ಜಸ್ಟೀಸ್​ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುರನ್ನು ಸೇರಿಕೊಂಡು ಇಲ್ಲಿ ಹಿಜಾಬ್​ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಬಹುದು. ಈ ಮೂಲಕ ಇಲ್ಲಿನ ಪರ-ವಿರೋಧ ವಿವಾದವನ್ನು ಇನ್ನಷ್ಟು ಹೆಚ್ಚಿಸಬಹುದು ಎಂದೂ ದೇಶದ ಗುಪ್ತಚರ ಇಲಾಖೆಗಳು ಎಚ್ಚರಿಕೆ ನೀಡಿವೆ. ಭಾರತದ ರಾಜಸ್ಥಾನ, ದೆಹಲಿ, ಉತ್ತರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಉರ್ದುಸ್ತಾನ್​ ಪರಿಕಲ್ಪನೆಗೆ ಉತ್ತೇಜನ ನೀಡಲು, ಈ ಸಿಖ್ ಫಾರ್ ಜಸ್ಟೀಸ್ ಸಂಘಟನೆ ಹಿಜಾಬ್​ ಜನಾಭಿಪ್ರಾಯ ಚಳವಳಿ ಪ್ರಾರಂಭಿಸಲು ಮುಸ್ಲಿಮರಿಗೆ ಕರೆ ನೀಡಿದೆ ಎಂದೂ ಹೇಳಲಾಗಿದೆ. ಅಷ್ಟೇ ಅಲ್ಲ, ಎಸ್​ಎಫ್​ಜೆ ಮುಖ್ಯಸ್ಥ ಈಗಾಗಲೇ ವಿಡಿಯೋ ಸಂದೇಶದ ಮೂಲಕ ಭಾರತೀಯ ಮುಸ್ಲಿಮರನ್ನು ಪ್ರಚೋದಿಸಿದ್ದಾನೆ ಎಂದೂ ತಿಳಿಸಿಲಾಗಿದೆ.

ಭಾರತದಲ್ಲಿ ಉರ್ದುಸ್ತಾನ್ ರಚಿಸಲು ಎಸ್​ಎಫ್​ಜೆ ಎಲ್ಲ ರೀತಿಯ ಸಹಾಯ ಮಾಡುತ್ತದೆ. ಹಿಜಾಬ್​ ವಿವಾದಕ್ಕೆ ಸಂಬಂಧಪಟ್ಟಂತೆ ಜನಾಭಿಪ್ರಾಯ ಸಂಗ್ರಹಣೆ ಮಾಡಲು, ಜನರನ್ನು ಹೆಚ್ಚೆಚ್ಚು ಸಂಘಟಿಸಲು ಧನಸಹಾಯ ಮಾಡುತ್ತದೆ ಎಂದು ಸಂಘಟನೆಯ ಮುಖ್ಯಸ್ಥರು ಭಾರತದ ಮುಸ್ಲಿಮರಿಗೆ ಅದರಲ್ಲೂ ಈ ಹಿಜಾಬ್​ ಪರ ಹೋರಾಟ ನಡೆಸುತ್ತಿರುವವರಿಗೆ ಭರವಸೆ ನೀಡಿದ್ದಾರೆ. ಹಿಜಾಬ್​ಗೆ ಸಂಬಂಧಪಟ್ಟಂತೆ ಜನಾಭಿಪ್ರಾಯ ಸಂಗ್ರಹಣೆ ಮಾಡಲು ಆನ್​ಲೈನ್​ ನೋಂದಣಿ ವೇದಿಕೆಗಳೂ ಶುರುವಾಗಿದ್ದು, ಅದರ ಸ್ಕ್ರೀನ್​ಶಾಟ್​ ಫೋಟೋಗಳು ಸಿಕ್ಕಿದ್ದಾಗಿಯೂ ಭಾರತೀಯ ಗುಪ್ತಚರ ಇಲಾಖೆಗಳು ಹೇಳಿದ್ದಾಗಿ ರಾಷ್ಟ್ರೀಯ ಮಾಧ್ಯಮ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಹಿಜಾಬ್ V/S ಕೇಸರಿ ಶಾಲು; ಉಡುಪಿ ಶಾಸಕ ರಘುಪತಿ ಭಟ್​ಗೆ ವಿದೇಶಗಳಿಂದ ಜೀವ ಬೆದರಿಕೆ ಕರೆಗಳು

Published On - 11:41 am, Sat, 12 February 22

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ