AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹಿಜಾಬ್​ ವಿವಾದ: ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಭಾರತದ ಗುಪ್ತಚರ ಸಂಸ್ಥೆಗಳು

ಭಾರತದಲ್ಲಿರುವ ಕೆಲವರು ದೇಶ ವಿರೋಧಿಗಳು ಸಿಖ್​ ಫಾರ್ ಜಸ್ಟೀಸ್​ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುರನ್ನು ಸೇರಿಕೊಂಡು ಇಲ್ಲಿ ಹಿಜಾಬ್​ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಬಹುದು ಎಂದೂ ಗುಪ್ತಚರ ಸಂಸ್ಥೆಗಳು ಹೇಳಿವೆ.

ಕರ್ನಾಟಕ ಹಿಜಾಬ್​ ವಿವಾದ: ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಭಾರತದ ಗುಪ್ತಚರ ಸಂಸ್ಥೆಗಳು
ಹಿಜಾಬ್​ ಧರಿಸಿದ ಯುವತಿಯರು (ಪಿಟಿಐ ಚಿತ್ರ)
TV9 Web
| Edited By: |

Updated on:Feb 12, 2022 | 11:48 AM

Share

ಕರ್ನಾಟಕದಲ್ಲಿ ಎದ್ದಿರುವ ಹಿಜಾಬ್​ ವಿವಾದಕ್ಕೆ (Hijab Row) ಪಾಕಿಸ್ತಾನದ ಸಚಿವರಿಬ್ಬರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ರಾಷ್ಟ್ರ ಮಟ್ಟದಲ್ಲೂ ಅನೇಕರು ಈ ಬಗ್ಗೆ ಮಾತನಾಡುತ್ತಿದ್ದಾರೆ. ಹೀಗಿರುವಾಗ ಗುಪ್ತಚರ ಸಂಸ್ಥೆಗಳು ಶಾಕಿಂಗ್​ ಮಾಹಿತಿಯೊಂದನ್ನು ನೀಡಿವೆ. ಭಾರತದ ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್​ ವಿವಾದವನ್ನು ಇನ್ನಷ್ಟು ಹೆಚ್ಚಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​ಐ ಪ್ರಯತ್ನ ಮಾಡುತ್ತಿದೆ. ಅದೂ ಕೂಡ ನಿಷೇಧಿತ ಖಲಿಸ್ತಾನಿ ಸಂಘಟನೆಯಾದ ಸಿಖ್​ ಫಾರ್​ ಜಸ್ಟೀಸ್​ ಮೂಲಕ ಜಿಜಾಬ್ ವಿವಾದಕ್ಕೆ ಉತ್ತೇಜನ ನೀಡಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ಮಾಹಿತಿ ನೀಡಿವೆ ಎಂಬುದು ಮೂಲಗಳಿಂದ ತಿಳಿದಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಭಾರತದಲ್ಲಿರುವ ಕೆಲವರು ದೇಶ ವಿರೋಧಿಗಳು ಸಿಖ್​ ಫಾರ್ ಜಸ್ಟೀಸ್​ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುರನ್ನು ಸೇರಿಕೊಂಡು ಇಲ್ಲಿ ಹಿಜಾಬ್​ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಬಹುದು. ಈ ಮೂಲಕ ಇಲ್ಲಿನ ಪರ-ವಿರೋಧ ವಿವಾದವನ್ನು ಇನ್ನಷ್ಟು ಹೆಚ್ಚಿಸಬಹುದು ಎಂದೂ ದೇಶದ ಗುಪ್ತಚರ ಇಲಾಖೆಗಳು ಎಚ್ಚರಿಕೆ ನೀಡಿವೆ. ಭಾರತದ ರಾಜಸ್ಥಾನ, ದೆಹಲಿ, ಉತ್ತರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಉರ್ದುಸ್ತಾನ್​ ಪರಿಕಲ್ಪನೆಗೆ ಉತ್ತೇಜನ ನೀಡಲು, ಈ ಸಿಖ್ ಫಾರ್ ಜಸ್ಟೀಸ್ ಸಂಘಟನೆ ಹಿಜಾಬ್​ ಜನಾಭಿಪ್ರಾಯ ಚಳವಳಿ ಪ್ರಾರಂಭಿಸಲು ಮುಸ್ಲಿಮರಿಗೆ ಕರೆ ನೀಡಿದೆ ಎಂದೂ ಹೇಳಲಾಗಿದೆ. ಅಷ್ಟೇ ಅಲ್ಲ, ಎಸ್​ಎಫ್​ಜೆ ಮುಖ್ಯಸ್ಥ ಈಗಾಗಲೇ ವಿಡಿಯೋ ಸಂದೇಶದ ಮೂಲಕ ಭಾರತೀಯ ಮುಸ್ಲಿಮರನ್ನು ಪ್ರಚೋದಿಸಿದ್ದಾನೆ ಎಂದೂ ತಿಳಿಸಿಲಾಗಿದೆ.

ಭಾರತದಲ್ಲಿ ಉರ್ದುಸ್ತಾನ್ ರಚಿಸಲು ಎಸ್​ಎಫ್​ಜೆ ಎಲ್ಲ ರೀತಿಯ ಸಹಾಯ ಮಾಡುತ್ತದೆ. ಹಿಜಾಬ್​ ವಿವಾದಕ್ಕೆ ಸಂಬಂಧಪಟ್ಟಂತೆ ಜನಾಭಿಪ್ರಾಯ ಸಂಗ್ರಹಣೆ ಮಾಡಲು, ಜನರನ್ನು ಹೆಚ್ಚೆಚ್ಚು ಸಂಘಟಿಸಲು ಧನಸಹಾಯ ಮಾಡುತ್ತದೆ ಎಂದು ಸಂಘಟನೆಯ ಮುಖ್ಯಸ್ಥರು ಭಾರತದ ಮುಸ್ಲಿಮರಿಗೆ ಅದರಲ್ಲೂ ಈ ಹಿಜಾಬ್​ ಪರ ಹೋರಾಟ ನಡೆಸುತ್ತಿರುವವರಿಗೆ ಭರವಸೆ ನೀಡಿದ್ದಾರೆ. ಹಿಜಾಬ್​ಗೆ ಸಂಬಂಧಪಟ್ಟಂತೆ ಜನಾಭಿಪ್ರಾಯ ಸಂಗ್ರಹಣೆ ಮಾಡಲು ಆನ್​ಲೈನ್​ ನೋಂದಣಿ ವೇದಿಕೆಗಳೂ ಶುರುವಾಗಿದ್ದು, ಅದರ ಸ್ಕ್ರೀನ್​ಶಾಟ್​ ಫೋಟೋಗಳು ಸಿಕ್ಕಿದ್ದಾಗಿಯೂ ಭಾರತೀಯ ಗುಪ್ತಚರ ಇಲಾಖೆಗಳು ಹೇಳಿದ್ದಾಗಿ ರಾಷ್ಟ್ರೀಯ ಮಾಧ್ಯಮ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಹಿಜಾಬ್ V/S ಕೇಸರಿ ಶಾಲು; ಉಡುಪಿ ಶಾಸಕ ರಘುಪತಿ ಭಟ್​ಗೆ ವಿದೇಶಗಳಿಂದ ಜೀವ ಬೆದರಿಕೆ ಕರೆಗಳು

Published On - 11:41 am, Sat, 12 February 22

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ