AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ಚಳವಳಿ ನೆಪದಲ್ಲಿ ಪಾಕ್​ ಸಚಿವನಿಂದ ಭಾರತ ಸರ್ಕಾರದ ಟೀಕೆ

ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಹುಸೇನ್, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ‘ಹೃದಯಹೀನ’ ಎಂದು ಜರಿದಿದ್ದಾರೆ.

Delhi Chalo ಚಳವಳಿ ನೆಪದಲ್ಲಿ ಪಾಕ್​ ಸಚಿವನಿಂದ ಭಾರತ ಸರ್ಕಾರದ ಟೀಕೆ
ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಚೌಧ್ರಿ ಫವಾದ್ ಹುಸೇನ್
guruganesh bhat
|

Updated on:Dec 07, 2020 | 4:27 PM

Share

ಸದಾಕಾಲ ಭಾರತದ ಜೊತೆ ಕಿರಿಕ್​ ಮಾಡುತ್ತಲೇ ಇರುವ ಪಾಕ್​ ಈಗ ದೆಹಲಿ ಚಲೋದ ವಿಷಯದಲ್ಲಿ ಮೂಗು ತೂರಿಸಿದೆ. ದೇಶದ ಆಂತರಿಕ ವಿಚಾರಗಳಲ್ಲಿ ಬೇರೆ ಯಾವುದೇ ದೇಶ ಮೂಗು ತೂರಿಸುವುದನ್ನು ಭಾರತ ಸಹಿಸುವುದಿಲ್ಲ. ಈ ಹಿಂದೆ ರೈತರ ಪ್ರತಿಭಟನೆ ಪ್ರಸ್ತಾಪಿಸಿದ್ದ ಕೆನಡಾ ಪ್ರಧಾನಿಗೂ ಭಾರತ ಖಡಕ್ ಪ್ರತಿಕ್ರಿಯೆಯನ್ನೇ ನೀಡಿತ್ತು.

ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಹುಸೇನ್, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ‘ಹೃದಯಹೀನ’ ಎಂದು ಜರಿದಿದ್ದಾರೆ. ಪಂಜಾಬ್ ರೈತರ ಬಗ್ಗೆ ನರೇಂದ್ರ ಮೋದಿ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿಯಿಲ್ಲ ಎಂದಿರುವ ಫವಾದ್ ಹುಸೇನ್, ಭಾರತ ಸರ್ಕಾರವು ರೈತರ ನಡುವೆ ಕಂದಕ ಸೃಷ್ಟಿಸುತ್ತಿದೆ. ನರೇಂದ್ರ ಮೋದಿಯವರ ದೌರ್ಜನ್ಯ ವಿರೋಧಿಸುವವರನ್ನು ಪಾಕಿಸ್ತಾನ್ ಏಜೆಂಟ್ ಎಂದು ಕರೆಯಲಾಗುತ್ತಿದೆ ಎಂದಿದ್ದಾರೆ.

‘ಗಡಿಯ ಆಚೆಗಿರುವ ಪಂಜಾಬಿನ ಸಹೋದರರೇ’ ಎಂದು ಪಂಜಾಬ್ ರೈತರನ್ನು ಸಂಬೋಧಿಸಿರುವ ಅವರು, ಬಹುಶಃ ‘ಗುಜರಾತ್ ಹಿಂದುತ್ವ’ ಸರ್ಕಾರವನ್ನು ಪ್ರಭಾವಿಸಿರಬಹುದು. ಹೀಗಾಗಿ, 12ನೇ ದಿನಕ್ಕೆ ಮುಂದುವರೆದರೂ ಪಂಜಾಬ್ ರೈತರ ಕೂಗು ದೆಹಲಿಗೆ ಕೇಳುತ್ತಿಲ್ಲ. ನರೇಂದ್ರ ಮೋದಿ ನಿರ್ಧಾರಗಳು ಇಡೀ ಪ್ರದೇಶವನ್ನೇ ತೊಂದರೆಗೀಡು ಮಾಡುತ್ತಿವೆ ಎಂದು ಟೀಕಿಸಿದ್ದಾರೆ. ಅಲ್ಲದೇ, ಅನ್ಯಾಯ ಎಲ್ಲೇ ಆಗುತ್ತಿದ್ದರೂ ಪ್ರತಿಭಟಿಸಬೇಕು. ಎಲ್ಲಾ ಭಾರತೀಯರು ಪಂಜಾಬ್ ರೈತರ ಪರ ನಿಲ್ಲಬೇಕು ಎಂದು ಫವಾದ್ ಸಲಹೆ ಮಾಡಿದ್ದಾರೆ.

Published On - 3:25 pm, Mon, 7 December 20

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ