AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂಪುರ್ ಶರ್ಮಾ ಹತ್ಯೆ ಮಾಡಲು ಗಡಿ ದಾಟಿ ಬಂದ ಪಾಕ್ ವ್ಯಕ್ತಿಯ ಬಂಧನ

ಜುಲೈ 16ರಂದು ರಾತ್ರಿ ಸರಿಸುಮಾರು 11 ಗಂಟೆ ಹೊತ್ತಿಗೆ ಹಿಂದೂಮಲ್ಕೋಟ್ ಗಡಿ ಔಟ್ ಪೋಸ್ಟ್ ಬಳಿ ಈ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಬಿಎಸ್ಎಫ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನೂಪುರ್ ಶರ್ಮಾ ಹತ್ಯೆ ಮಾಡಲು ಗಡಿ ದಾಟಿ ಬಂದ ಪಾಕ್ ವ್ಯಕ್ತಿಯ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 19, 2022 | 3:30 PM

Share

ದೆಹಲಿ: ಬಿಜೆಪಿಯ(BJP) ಮಾಜಿ ವಕ್ತಾರೆ ನೂಪುರ್ ಶರ್ಮಾ (Nupur Sharma)  ಅವರನ್ನು ಹತ್ಯೆ ಮಾಡುವುದಕ್ಕಾಗಿ ಪಾಕಿಸ್ತಾನದಿಂದ (Pakistan) ಅಂತಾರಾಷ್ಟ್ರೀಯ ಗಡಿ ದಾಟಿ ಭಾರತಕ್ಕೆ ಬಂದ ವ್ಯಕ್ತಿಯನ್ನು ರಾಜಸ್ಥಾನದ ಶ್ರೀ ಗಂಗಾ ನಗರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಗುಪ್ತಚರ ಇಲಾಖೆ ಮತ್ತು ಇತರ ಗುಪ್ತಚರ ಸಂಸ್ಥೆಗಳು ಜಂಟಿಯಾಗಿ ಪಾಕ್ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿವೆ. ಜುಲೈ 16ರಂದು ರಾತ್ರಿ ಸರಿಸುಮಾರು 11 ಗಂಟೆ ಹೊತ್ತಿಗೆ ಹಿಂದೂಮಲ್ಕೋಟ್ ಗಡಿ ಔಟ್ ಪೋಸ್ಟ್ ಬಳಿ ಈ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಬಿಎಸ್ಎಫ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸಂಶಯಾಸ್ಪದವಾಗಿ ತೋರಿದ್ದರಿಂದ ಪಟ್ರೋಲಿಂಗ್ ಟೀಂ ಆತನನ್ನು ತಕ್ಷಣವೇ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು. ಆತನ ಬಳಿಯಿಂದ 11 ಇಂಚು ಉದ್ದದ ಕತ್ತಿ, ಧಾರ್ಮಿಕ ಪುಸ್ತಕ, ಬಟ್ಟೆ, ಆಹಾರ ಮತ್ತು ಮರಳಿನ ಚೀಲ ಪತ್ತೆಯಾಗಿದೆ. ರಿಜ್ವಾನ್ ಅಶ್ರಫ್ ಎಂಬ ಹೆಸರಿನ ಈತ ಪಾಕಿಸ್ತಾನದ ಉತ್ತರ ಪಂಜಾಬ್​​ನ ಮಂಡಿ ಬಹಾವುದ್ದೀನ್ ನಗರದ ನಿವಾಸಿಯಾಗಿದ್ದಾನೆ.

ಆತನನ್ನು ವಿಚಾರಣೆಗೊಳಪಡಿಸಿದಾಗ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರನ್ನು ಹತ್ಯೆ ಮಾಡಲು ತಾನು ಗಡಿದಾಟಿ ಬಂದಿದ್ದೇನೆ ಎಂದು ಹೇಳಿದ್ದಾರೆ. ತಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಮುನ್ನ ಆತ ಅಜ್ಮೇರ್ ದರ್ಗಾ ಭೇಟಿ ನೀಡಿಲು ಬಯಸಿದ್ದನಂತೆ.

ಹೆಚ್ಚಿನ ವಿಚಾರಣೆಗಾಗಿ ಆತನನ್ನು ಸ್ಥಳೀಯ ಪೊಲೀಸರಿಗೊಪ್ಪಿಸಲಾಗಿದೆ. ಆತನನ್ನು ಮೆಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು 8 ದಿನಗಳ ಪೊಲೀಸ್ ಕಸ್ಟಡಿಯಲ್ಲಿರಿಸಲಾಗುವುದು.ಈ ಬಗ್ಗೆ ಸಂಬಂಧಪಟ್ಟ ಗುಪ್ತಚರ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಗುಪ್ತಚರ ಇಲಾಖೆ, ರಾ ಮತ್ತು ಮಿಲಿಟರಿ ಗುಪ್ತಚರ ಸಂಸ್ಥೆಗಳು ಆತನನ್ನು ವಿಚಾರಣೆಗೊಳಪಡಿಸಿವೆ.

ಇದನ್ನೂ ಓದಿ
Image
ನೂಪುರ್​​ ಶರ್ಮಾ ಬೆಂಬಲಿಸಿ ವಾಟ್ಸ್ಆಪ್ ಪೋಸ್ಟ್​​ ಹಾಕಿದ್ದಕ್ಕೆ ಇರಿತಕ್ಕೊಳಗಾಗಿರುವುದಾಗಿ ಆರೋಪಿಸಿದ ಬಿಹಾರದ ಯುವಕ
Image
ಬೆಂಗಳೂರು: ಪಾಕಿಸ್ತಾನಕ್ಕೆ ಭಾರತದ ಫೋಟೋ ನೀಡಿದ ಆರೋಪ; ಜೀತೆಂದರ್ ಸಿಂಗ್ ಜಾಮೀನು ಅರ್ಜಿ ವಜಾ
Image
NEET 2022: ಹಿಜಾಬ್ ಧರಿಸಿದ್ದಕ್ಕೆ ನೀಟ್ ಪರೀಕ್ಷೆ ವೇಳೆ ಹಲವೆಡೆ ತೊಂದರೆ ಅನುಭವಿಸಿದ ಮುಸ್ಲಿಂ ಯುವತಿಯರು

ಪ್ರವಾದಿ ಮೊಹಮ್ಮದ್ ವಿರುದ್ದ ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ದೇಶದಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆದುದ್ದಲ್ಲದೆ ಗಲ್ಫ್ ರಾಷ್ಟ್ರಗಳಿಂದಲೂ ಆಕ್ರೋಶ ವ್ಯಕ್ತವಾಗಿತ್ತು.

Published On - 3:13 pm, Tue, 19 July 22

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ