AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seema Haider: ಉತ್ತಮ ಪ್ರಜೆಯಾಗುತ್ತೇನೆ, ದೇಶಕ್ಕೆ ಎಂದೂ ದ್ರೋಹ ಮಾಡುವುದಿಲ್ಲ, ಭಾರತದ ಪೌರತ್ವ ನೀಡುವಂತೆ ರಾಷ್ಟ್ರಪತಿಗೆ ಸೀಮಾ ಮನವಿ

ಪಾಕಿಸ್ತಾನದ ಸೀಮಾ ಹೈದರ್(Seema Haider) ಹಾಗೂ ಭಾರತದ ಸಚಿನ್ ಮೀನಾ(Sachin Meena) ಅವರ ಪ್ರೇಮಕಥೆ ಇತ್ತೀಚಿನ ದಿನಗಳಲ್ಲಿ ಭಾರಿ ಚರ್ಚೆಯಲ್ಲಿದೆ

Seema Haider: ಉತ್ತಮ ಪ್ರಜೆಯಾಗುತ್ತೇನೆ, ದೇಶಕ್ಕೆ ಎಂದೂ ದ್ರೋಹ ಮಾಡುವುದಿಲ್ಲ, ಭಾರತದ ಪೌರತ್ವ ನೀಡುವಂತೆ ರಾಷ್ಟ್ರಪತಿಗೆ ಸೀಮಾ ಮನವಿ
ಸೀಮಾ ಹೈದರ್
ನಯನಾ ರಾಜೀವ್
|

Updated on:Jul 23, 2023 | 1:14 PM

Share

ಪಾಕಿಸ್ತಾನದ ಸೀಮಾ ಹೈದರ್(Seema Haider) ಹಾಗೂ ಭಾರತದ ಸಚಿನ್ ಮೀನಾ(Sachin Meena) ಅವರ ಪ್ರೇಮಕಥೆ ಇತ್ತೀಚಿನ ದಿನಗಳಲ್ಲಿ ಭಾರಿ ಚರ್ಚೆಯಲ್ಲಿದೆ. ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಸೀಮಾ ಮತ್ತು ಸಚಿನ್ ಅವರನ್ನು ಯುಪಿ ಎಸ್‌ಟಿಎಫ್ ಇತ್ತೀಚೆಗೆ ವಿಚಾರಣೆಗೆ ಒಳಪಡಿಸಿತು, ನಂತರ ಅವರಿಬ್ಬರೂ ಅಸ್ವಸ್ಥರಾಗಿದ್ದರು ಎಂದು ವರದಿಯಾಗಿದೆ. ಇದಕ್ಕೂ ಮುನ್ನ ಶುಕ್ರವಾರ, ಸೀಮಾ ಹೈದರ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದರು ಮತ್ತು  ನೋಯ್ಡಾದಲ್ಲಿ ತನ್ನ 4 ಮಕ್ಕಳು ಮತ್ತು ಸಚಿನ್ ಮೀನಾ ಅವರೊಂದಿಗೆ ವಾಸಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು.

ನೋಯ್ಡಾದಲ್ಲಿ ವಾಸಿಸುತ್ತಿರುವ ಸಚಿನ್ ಮೀನಾ (22) ಎಂಬಾತನನ್ನು ತಾನು ಪ್ರೀತಿಸುತ್ತಿದ್ದು, ತನ್ನ ನಾಲ್ವರು ಮಕ್ಕಳೊಂದಿಗೆ ಆತನೊಂದಿಗೆ ಇರಲು ಭಾರತಕ್ಕೆ ಬಂದಿದ್ದೇನೆ ಎಂದು ಹೈದರ್ ಅರ್ಜಿಯಲ್ಲಿ ತಿಳಿಸಿದ್ದಾರೆ.

ನೇಪಾಳದ ಕಠ್ಮಂಡುವಿನ ಪಶುಪತಿನಾಥ ದೇವಾಲಯದಲ್ಲಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮೀನಾ ಅವರನ್ನು ಹಿಂದೂ ಸಂಪ್ರದಾಯದಂತೆ ವಿವಾಹವಾಗಿರುವುದಾಗಿ ಸೀಮಾ ಹೇಳಿಕೊಂಡಿದ್ದಾರೆ.

ಮತ್ತಷ್ಟು ಓದಿ: ಪಬ್ ಜಿ ಲವ್ ಸ್ಟೋರಿ; ಬಂಧನದ ಭೀತಿಯಿಂದ ಪಾಕ್ ಮಹಿಳೆ ಪಲಾಯನ ಮಾಡಲು ಪ್ರಯತ್ನಿಸಿದ್ದರು: ಪೊಲೀಸ್

ಶನಿವಾರದಂದು ಒಂದು ವೀಡಿಯೊ ಹರಿದಾಡಿದ್ದು, ಇದರಲ್ಲಿ ಸೀಮಾ ಹೈದರ್ ಅನಾರೋಗ್ಯ ಮತ್ತು ಗ್ಲೂಕೋಸ್ ಡ್ರಿಪ್ನಲ್ಲಿರುವುದು ಸ್ಪಷ್ಟವಾಗಿ ಕಾಣಿಸಿದೆ. ಜನರು ನನ್ನ ಬಗ್ಗೆ ಏಕೆ ತಪ್ಪಾಗಿ ಮಾತನಾಡುತ್ತಿದ್ದಾರೆ ಎಂಬುದು ನೋವುಂಟುಮಾಡುತ್ತದೆ.  ಒಮ್ಮೆಯೂ ನನ್ನ ಬಗ್ಗೆ ಯಾರೂ ಚೆನ್ನಾಗಿ ಮಾತನಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ನಾನು ಮತ್ತು ನನ್ನ ನಾಲ್ಕು ಮಕ್ಕಳು ಭಾರತಕ್ಕೆ ಎಂದೂ ಭಾರವಾಗಿರುವುದಿಲ್ಲ, ನಾನು ಪೌರತ್ವ ಪಡೆದರೆ, ಭಾರತದ ಒಳ್ಳೆಯ ಪ್ರಜೆಯಾಗಿ ಬದುಕುತ್ತೇನೆ, ಎಂದಿಗೂ ದ್ರೋಹ ಮಾಡುವುದಿಲ್ಲ ಎಂದು ಸೀಮಾ ಹೇಳಿದ್ದಾರೆ.

ಪಬ್ಜಿ ಆಟವು ಸೀಮಾ ಹಾಗೂ ಸಚಿನ್ ನಡುವೆ ಪ್ರೀತಿ ಹುಟ್ಟುವಂತೆ ಮಾಡಿತ್ತು, ಸಚಿನ್​ಗಾಗಿ ಸೀಮಾ ಪಾಕಿಸ್ತಾನವನ್ನು ಬಿಟ್ಟು ಬಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:51 am, Sun, 23 July 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ