ಸಚಿನ್ ಮಗುವಿಗೆ ತಾಯಿಯಾಗಲಿದ್ದಾರೆ ಪಾಕಿಸ್ತಾನದ ಸೀಮಾ ಹೈದರ್

ಪ್ರಿಯಕರನನ್ನು ಅರಸಿ ಮಕ್ಕಳ ಜತೆಗೆ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್(Seema Haider), ಸಚಿನ್ ಮೀನಾ ಅವರ ಮಗುವಿಗೆ ತಾಯಿಯಾಗಲಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸೀಮಾ ಮತ್ತು ಸಚಿನ್ ಈ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ ಸೀಮಾಗೆ ಇದು ಐದನೇ ಮಗು. ಇದಕ್ಕೂ ಮೊದಲು, ಅವರು ತಮ್ಮ ಮೊದಲ ಪತಿಯಿಂದ ನಾಲ್ಕು ಮಕ್ಕಳನ್ನು ಹೊಂದಿದ್ದರು. ಈ ಮಕ್ಕಳು ಕೂಡ ಸೀಮಾ ಜೊತೆ ಭಾರತಕ್ಕೆ ಬಂದು ಗ್ರೇಟರ್ ನೋಯ್ಡಾದಲ್ಲಿರುವ ಸಚಿನ್ ಮನೆಯಲ್ಲಿ ನೆಲೆಸಿದ್ದಾರೆ.

ಸಚಿನ್ ಮಗುವಿಗೆ ತಾಯಿಯಾಗಲಿದ್ದಾರೆ ಪಾಕಿಸ್ತಾನದ ಸೀಮಾ ಹೈದರ್
ಸೀಮಾ ಹೈದರ್Image Credit source: India Today
Follow us
|

Updated on: Jan 02, 2024 | 7:58 AM

ಪ್ರಿಯಕರನನ್ನು ಅರಸಿ ಮಕ್ಕಳ ಜತೆಗೆ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್(Seema Haider), ಸಚಿನ್ ಮೀನಾ ಅವರ ಮಗುವಿಗೆ ತಾಯಿಯಾಗಲಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸೀಮಾ ಮತ್ತು ಸಚಿನ್ ಈ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ ಸೀಮಾಗೆ ಇದು ಐದನೇ ಮಗು. ಇದಕ್ಕೂ ಮೊದಲು, ಅವರು ತಮ್ಮ ಮೊದಲ ಪತಿಯಿಂದ ನಾಲ್ಕು ಮಕ್ಕಳನ್ನು ಹೊಂದಿದ್ದರು. ಈ ಮಕ್ಕಳು ಕೂಡ ಸೀಮಾ ಜೊತೆ ಭಾರತಕ್ಕೆ ಬಂದು ಗ್ರೇಟರ್ ನೋಯ್ಡಾದಲ್ಲಿರುವ ಸಚಿನ್ ಮನೆಯಲ್ಲಿ ನೆಲೆಸಿದ್ದಾರೆ.

ಪಾಕಿಸ್ತಾನದ ನಿವಾಸಿ ಸೀಮಾ ಹೈದರ್ ಮತ್ತು ಯುಪಿ ನಿವಾಸಿ ಸಚಿನ್ ಮೀನಾ ಅವರ ಪ್ರೇಮಕಥೆ ಕಳೆದ ವರ್ಷ ಹೆಚ್ಚು ಚರ್ಚೆಯಲ್ಲಿತ್ತು. ಇಬ್ಬರೂ ಆನ್‌ಲೈನ್ PUBG ಗೇಮ್ ಆಡುವಾಗ ಪರಿಚಯವಾಯಿತು. ಇದಾದ ನಂತರ ಅವರ ಸ್ನೇಹ ಪ್ರೀತಿಗೆ ತಿರುಗಿತ್ತು. ಇಬ್ಬರೂ ನೇಪಾಳದಲ್ಲಿ ಮತ್ತೆ ಭೇಟಿಯಾದರು. ಸೀಮಾ ಮತ್ತು ಸಚಿನ್ ಇಬ್ಬರೂ ನೇಪಾಳದಲ್ಲಿ ಮದುವೆಯಾಗಿದ್ದರು ಎಂದು ಹೇಳಲಾಗಿದೆ.

ಇದಾದ ನಂತರ ಕಳೆದ ವರ್ಷ ಸೀಮಾ ತನ್ನ ನಾಲ್ವರು ಮಕ್ಕಳೊಂದಿಗೆ ಪಾಕಿಸ್ತಾನದಿಂದ ಪಲಾಯನ ಮಾಡಿ ಗ್ರೇಟರ್ ನೋಯ್ಡಾದಲ್ಲಿರುವ ಸಚಿನ್ ಮನೆಗೆ ಅಕ್ರಮವಾಗಿ ಬಂದಿದ್ದರು.

ಮತ್ತಷ್ಟು ಓದಿ: Seema Haider: ಉತ್ತಮ ಪ್ರಜೆಯಾಗುತ್ತೇನೆ, ದೇಶಕ್ಕೆ ಎಂದೂ ದ್ರೋಹ ಮಾಡುವುದಿಲ್ಲ, ಭಾರತದ ಪೌರತ್ವ ನೀಡುವಂತೆ ರಾಷ್ಟ್ರಪತಿಗೆ ಸೀಮಾ ಮನವಿ

ಪೊಲೀಸರು ಇಬ್ಬರನ್ನೂ ವಶಕ್ಕೆ ತೆಗೆದುಕೊಂಡಿದ್ದರು. ಆದರೆ, ನಂತರ ಅವರಿಗೆ ಜಾಮೀನು ಮಂಜೂರಾಗಿತ್ತು. ಈ ವಿಷಯ ಉಭಯ ದೇಶಗಳ ನಡುವೆ ಚರ್ಚೆಗೆ ಗ್ರಾಸವಾಗಿತ್ತು.

ಸಾಮಾನ್ಯ ಜನರಿಂದ ಹಿಡಿದು ರಾಜಕಾರಣಿಗಳವರೆಗೆ ಎಲ್ಲರೂ ಈ ವಿಷಯದಲ್ಲಿ ಆಸಕ್ತಿ ವಹಿಸಿದರು. ಸೀಮಾ ಹೈದರ್ ಸಚಿನ್ ಮನೆಯಲ್ಲಿ ವಾಸವಾಗಿದ್ದಾಗಿನಿಂದಲೂ ಅವರು ಕರ್ವಾ ಚೌತ್ ಉಪವಾಸ ಮತ್ತು ಇತರ ಹಿಂದೂ ಹಬ್ಬಗಳನ್ನು ಆಚರಿಸುವ ಮೂಲಕ ಸುದ್ದಿಯಲ್ಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ