AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್ ಮಸಾಲಾ ಪ್ಯಾಕೆಟ್‌ ಮೇಲೆ ಚಿಲ್ಲರೆ ಮಾರಾಟ ಬೆಲೆ ನಮೂದಿಸುವುದು ಕಡ್ಡಾಯ

ಪಾನ್ ಮಸಾಲಾ ಪ್ಯಾಕೆಟ್‌ಗಳ ಮೇಲೆ ಚಿಲ್ಲರೆ ಮಾರಾಟ ಬೆಲೆಯನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಇನ್ಮುಂದೆ ಪಾನ್ ಮಸಾಲಾ ಪ್ಯಾಕ್‌ಗಳ ಮೇಲೆ RSP ಹಾಕುವುದು ಕಡ್ಡಾಯವಾಗಿದೆ. ಕಡ್ಡಾಯವಾಗಿ ಚಿಲ್ಲರೆ ಮಾರಾಟ ಬೆಲೆ ಹಾಕುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 2026ರ ಫೆಬ್ರವರಿ 1ರಿಂದ ಕೇಂದ್ರ ಸರ್ಕಾರದ ಹೊಸ ಆದೇಶ ಅನ್ವಯವಾಗಲಿದೆ. ಗ್ರಾಹಕರಿಗೆ ಪಾರದರ್ಶಕತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಎಲ್ಲಾ ಗಾತ್ರದ ಪಾನ್ ಮಸಾಲಾ ಪ್ಯಾಕ್‌ ಮೇಲೂ ಚಿಲ್ಲರೆ ಮಾರಾಟ ಬೆಲೆ ಹಾಕುವುದು ಕಡ್ಡಾಯವಾಗಿದೆ. ಕಾನೂನು ಮಾಪನಶಾಸ್ತ್ರ ತಿದ್ದುಪಡಿ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಪಾನ್ ಮಸಾಲಾ ಪ್ಯಾಕೆಟ್‌ ಮೇಲೆ ಚಿಲ್ಲರೆ ಮಾರಾಟ ಬೆಲೆ ನಮೂದಿಸುವುದು ಕಡ್ಡಾಯ
Pan Masala
ಸುಷ್ಮಾ ಚಕ್ರೆ
|

Updated on: Dec 03, 2025 | 8:59 PM

Share

ನವದೆಹಲಿ, ಡಿಸೆಂಬರ್ 3: ಇನ್ನುಮುಂದೆ ಪಾನ್ ಮಸಾಲಾ (Pan Masala) ಪ್ಯಾಕೆಟ್​​ಗಳ ಮೇಲೆ ಚಿಲ್ಲರೆ ಬೆಲೆಯನ್ನು ನಮೂದಿಸುವುದು ಕಡ್ಡಾಯವಾಗಿದೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿರುವ ಗ್ರಾಹಕ ವ್ಯವಹಾರಗಳ ಇಲಾಖೆಯು ಫೆಬ್ರವರಿ 1, 2026ರಿಂದ ಜಾರಿಗೆ ಬರುವಂತೆ ಎಲ್ಲಾ ಪಾನ್ ಮಸಾಲಾ ಪ್ಯಾಕ್‌ಗಳಲ್ಲಿ ಚಿಲ್ಲರೆ ಮಾರಾಟ ಬೆಲೆಯನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿದೆ.

ತಿದ್ದುಪಡಿ ಮಾಡಿದ ನಿಯಮಗಳು ಫೆಬ್ರವರಿ 1, 2026ರಿಂದ ಜಾರಿಗೆ ಬರಲಿದ್ದು, ಆ ದಿನಾಂಕದಿಂದ ಎಲ್ಲಾ ಪಾನ್ ಮಸಾಲಾ ತಯಾರಕರು, ಪ್ಯಾಕರ್‌ಗಳು ಮತ್ತು ಆಮದುದಾರರು ಈ ನಿಯಮವನ್ನು ಪಾಲಿಸಲೇಬೇಕು. ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ಕಾರ್ಯದರ್ಶಿ ಅನುಪಮ್ ಮಿಶ್ರಾ ಅವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ನಕಲಿ ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಳವಳ

ಸಚಿವಾಲಯದ ಪ್ರಕಾರ, ಹಿಂದೆ ವಿನಾಯಿತಿ ಪಡೆದಿದ್ದ 10 ಗ್ರಾಂ ಅಥವಾ ಅದಕ್ಕಿಂತ ಕಡಿಮೆ ತೂಕದ ಸಣ್ಣ ಪಾನ್ ಮಸಾಲಾ ಪ್ಯಾಕ್‌ಗಳು ಕೂಡ ಈಗ ತಮ್ಮ ಲೇಬಲ್‌ಗಳಲ್ಲಿ ಚಿಲ್ಲರೆ ಮಾರಾಟ ಬೆಲೆಯನ್ನು ಮುದ್ರಿಸಬೇಕು. ಸಚಿವಾಲಯದ ಪ್ರಕಾರ, ಎಲ್ಲಾ ಪ್ಯಾಕೇಜ್‌ಗಳ ಮೇಲೆ ಚಿಲ್ಲರೆ ಮಾರಾಟ ಬೆಲೆಯನ್ನು ಕಡ್ಡಾಯಗೊಳಿಸುವ ಮೂಲಕ, ಈ ತಿದ್ದುಪಡಿಯು ಪಾನ್ ಮಸಾಲಾದ ಮೇಲೆ ಚಿಲ್ಲರೆ ಮಾರಾಟ ಬೆಲೆ ಆಧಾರಿತ ಜಿಎಸ್‌ಟಿ ತೆರಿಗೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುಕೂಲವಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!