Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ

800 ವ್ಯಕ್ತಿಗಳ ಮೇಲೆ ವೈದ್ಯಕೀಯ ಪ್ರಯೋಗ ನಡೆಸಲಾಗಿದೆ. ಈ ವೇಳೆ ಹಾಲು, ಹಸುವಿನ ಗಂಜಲ, ಸಗಣಿ, ಮೊಸರು ಮತ್ತು ತುಪ್ಪ ಬಳಸಿ ಸಿದ್ಧಪಡಿಸುವಲ್ಲಿ ಪಂಚಗವ್ಯ ಶೇ.96 ಪರಿಣಾಮಕಾರಿಯಾಗಿದೆ ಎಂದು ವಲ್ಲಭಭಾಯ್ ತಿಳಿಸಿದ್ದಾರೆ. 

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Jan 06, 2021 | 2:25 PM

ನವದೆಹಲಿ: ಕೊರೊನಾ ವೈರಸ್​ ಹರಡುವಿಕೆ ನಿಧಾನವಾಗಿ ಕಮ್ಮಿ ಆಗುತ್ತಿರುವ ಬೆನ್ನಲ್ಲೇ ಈ ಮಾರಕ ವೈರಸ್​ಗೆ ಲಸಿಕೆ ಕಂಡು ಹಿಡಿಯಲಾಗಿದೆ. ಈ ಮಧ್ಯೆ, ಪಂಚಗವ್ಯ ಬಳಕೆಯಿಂದ ತೀಕ್ಷ್ಣವಲ್ಲದ ಕೊರೊನಾ ಕಡಿಮೆ ಆಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ (ಆರ್​ಕೆಎ) ಹೇಳಿದೆ.

ದೇಸಿ ಹಸುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆನ್​ಲೈನ್​​ ಪರೀಕ್ಷೆ ನಡೆಸಲು ಮುಂದಾಗಿದೆ. ಇಂದು ಈ ಬಗ್ಗೆ ಘೋಷಣೆ ಮಾಡಿದೆ. ಹಸುವಿನ ಹಾಲು ಮತ್ತು ಅದರ ಉತ್ಪನ್ನಗಳ ಜೊತೆಗೆ ಹಸುವಿನ ಮೂತ್ರ ಮತ್ತು ಸಗಣಿ ತೀಕ್ಷ್ಣವಲ್ಲದ ಕೋವಿಡ್ -19 ಚಿಕಿತ್ಸೆಗೆ ಸಹಕಾರಿಯಾಗಲಿದೆ.  ಇದು ಶೇಕಡಾ 96 ಪರಿಣಾಮಕಾರಿ ಆಗಿದೆ  ಎಂದು ರಾಷ್ಟ್ರೀಯ ಕಾಮಧೇನು ಆಯೋಗ (ಆರ್​ಕೆಎ) ಮುಖ್ಯಸ್ಥ ವಲ್ಲಭಭಾಯ್ ಕಥಿರಿಯಾ ಹೇಳಿದ್ದಾರೆ.

ಹಾಲು, ಹಸುವಿನ ಗಂಜಲ, ಸಗಣಿ, ಮೊಸರು ಮತ್ತು ತುಪ್ಪ ಬಳಸಿ ಸಿದ್ಧಪಡಿಸುವಲ್ಲಿ ಪಂಚಗವ್ಯ ಕೊರೊನಾ ಮೇಲೆ ಶೇ. 96 ಪರಿಣಾಮಕಾರಿಯಾಗಿದೆ. 800 ವ್ಯಕ್ತಿಗಳ ಮೇಲೆ ವೈದ್ಯಕೀಯ ಪ್ರಯೋಗ ನಡೆಸಲಾಗಿತ್ತು ಎಂದು ವಲ್ಲಭಭಾಯ್ ತಿಳಿಸಿದ್ದಾರೆ.

ಜೂನ್​ 2020 ಅಕ್ಟೋಬರ್​ 2020ರವರೆಗೆ ಈ ಬಗ್ಗೆ ಅಧ್ಯಯನ ನಡೆಸಲಾಗಿದೆ. ಜರ್ನಲ್​ನಲ್ಲಿ ಶೀಘ್ರವೇ ಈ ಬಗ್ಗೆ ಪಬ್ಲಿಶ್​ ಮಾಡಲಾಗುವುದು. ಹಸು ವಿಜ್ಞಾನ ಅರಿವು ಪರೀಕ್ಷೆ ಫೆಬ್ರವರಿ 25ರಂದು ನಡೆಯಲಿದೆ. ಇಂಗ್ಲಿಷ್​ ಹಾಗೂ 12 ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ಮಾಡಲಾಗುತ್ತಿದೆ ಎಂದು ವಲ್ಲಭಭಾಯ್ ಮಾಹಿತಿ ನೀಡಿದ್ದಾರೆ.

ಪಶು ಸಂಗೋಪನಾ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಕಾಮಧೇನು ಆಯೋಗ ಬರುತ್ತದೆ. ಇದು ಪಶುಗಳ ರಕ್ಷಣೆ ಜವಾಬ್ದಾರಿಯನ್ನು ಹೊಂದಿದೆ.

ಹಾಸನ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ.. 10 ಶಾಲೆ ಲಾಕ್​ಡೌನ್​: ಪೋಷಕರಲ್ಲಿ ಹೆಚ್ಚಿದ ಆತಂಕ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ