AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pandora Papers: ಕೇಂದ್ರೀಯ ನೇರ ತೆರಿಗೆ ಮಂಡಳಿ ನೇತೃತ್ವದಲ್ಲಿ ತನಿಖೆ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ

ಪಂಡೋರಾ ಪೇಪರ್ಸ್​ ಬಹಿರಂಗಪಡಿಸಿರುವ ವ್ಯಕ್ತಿಗಳ ಹಣಕಾಸು ವ್ಯವಹಾರದ ಬಗ್ಗೆ ತನಿಖಾಧಿಕಾರಿಗಳು ಗಮನ ಕೇಂದ್ರೀಕರಿಸಲಿದ್ದಾರೆ.

Pandora Papers: ಕೇಂದ್ರೀಯ ನೇರ ತೆರಿಗೆ ಮಂಡಳಿ ನೇತೃತ್ವದಲ್ಲಿ ತನಿಖೆ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ
ಪಂಡೋರಾ ಪೇಪರ್ಸ್
TV9 Web
| Edited By: |

Updated on: Oct 04, 2021 | 8:56 PM

Share

ದೆಹಲಿ: ಬಹುಚರ್ಚಿತ ಪಂಡೋರಾ ಪೇಪರ್ಸ್​ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ನೇರ ತೆರಿಗೆ ಮಂಡಳಿ (Central Board of Direct Taxes – CBDT) ಮುಖ್ಯಸ್ಥರ ನೇತೃತ್ವದಲ್ಲಿ ಬಹು ಇಲಾಖೆಯ ತಂಡದಿಂದ ತನಿಖೆ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಪಂಡೋರಾ ಪೇಪರ್ಸ್​ ಬಹಿರಂಗಪಡಿಸಿರುವ ವ್ಯಕ್ತಿಗಳ ಹಣಕಾಸು ವ್ಯವಹಾರದ ಬಗ್ಗೆ ತನಿಖಾಧಿಕಾರಿಗಳು ಗಮನ ಕೇಂದ್ರೀಕರಿಸಲಿದ್ದಾರೆ.

ಖ್ಯಾತ ಕ್ರಿಕೆಟ್ ಆಟಗಾರ ಸಚಿನ್ ತೆಂಡುಲ್ಕರ್​ ವಿದೇಶದಲ್ಲಿ ಕಂಪನಿ ತೆರೆದು ಹಣ ವಾಪಸ್ ಪಡೆದಿರುವ ಬಗ್ಗೆ, ಉದ್ಯಮಿ ಅನಿಲ್ ಅಂಬಾನಿ ವಿದೇಶಗಳಲ್ಲಿ 1.3 ಶತಕೋಟಿ ರೂಪಾಯಿಯಷ್ಟು ಹಣ ಹೂಡಿಕೆ ಮಾಡಿದ್ದಾರೆ ಎಂದು ಪ್ಯಾಂಡೋರಾ ಪೇಪರ್ಸ್​ ಹೇಳಿದೆ. ಬಯೊಟೆಕ್ ಉದ್ಯಮಿ ಕಿರಣ್ ಮಜುಂದಾರ್ ಷಾ ಅವರ ಪತಿ ಜಾನ್ ಷಾ ಸಹ ವಿದೇಶಗಳಲ್ಲಿ ರಹಸ್ಯ ಹೂಡಿಕೆ ಮಾಡಿದ್ದಾರೆ. ನಟ ಜಾಕಿ ಶ್ರಾಫ್​ ತನ್ನ ಅತ್ತೆ ಮತ್ತು ಮಕ್ಕಳ ಹೆಸರಿನಲ್ಲಿ ಹಣ ಹೂಡಿಕೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಎಲ್ಲ ಅಂಶಗಳಿಗೆ ಸಂಬಂಧಿಸಿದಂತೆ ಸಿಬಿಡಿಟಿ ಇದೀಗ ತನಿಖೆ ನಡೆಸಲಿದೆ.

ಏನಿದು ಪಂಡೋರಾ ಪೇಪರ್ಸ್ ತನಿಖಾ ಪತ್ರಕರ್ತರ ಅಂತಾರಾಷ್ಟ್ರೀಯ ಒಕ್ಕೂಟ (International Council of Investigative Journalism – ICIJ) ಭಾನುವಾರ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ವಿವಿಧ ದೇಶಗಳ ಮುಖ್ಯಸ್ಥರು, ಕೈಗಾರಿಕೋದ್ಯಮಿಗಳು, ಸೆಲೆಬ್ರಿಟಿಗಳು ಮತ್ತು ಕ್ರೀಡಾಪಟುಗಳ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ರಹಸ್ಯ ದಾಖಲೆಗಳು ಸೋರಿಕೆ ಆಗಿವೆ.

‘ಪಂಡೋರಾ ಪೇಪರ್ಸ್‌’ (Pandora Papers) ಎಂದು ಕರೆಯಲಾಗುತ್ತಿರುವ ಈ ದಾಖಲೆಗಳಲ್ಲಿ ಪ್ರಮುಖ ವ್ಯಕ್ತಿಗಳಿಗೆ ಸಂಬಂಧಿಸಿದ ರಹಸ್ಯ ವಿವರಗಳು ಇರುವುದಾಗಿ ವರದಿಯಾಗಿದೆ. ಈ ತನಿಖೆಯು ಪ್ರಪಂಚದಾದ್ಯಂತದ 14 ವಿವಿಧ ಹಣಕಾಸು ಸೇವಾ ಕಂಪನಿಗಳಿಂದ ಸುಮಾರು 1.2 ಕೋಟಿ ದಾಖಲೆಗಳನ್ನು ಪರಿಶೀಲಿಸಲಾಗಿದೆ.

(Pandora Papers Govt of India Decides to Investigate from CBDT let Multi Agency Team)

ಇದನ್ನೂ ಓದಿ: Pandora Papers ಗಣ್ಯ ವ್ಯಕ್ತಿಗಳ ಹಣಕಾಸು ವ್ಯವಹಾರದ ರಹಸ್ಯ ದಾಖಲೆ ಸೋರಿಕೆ; ಏನಿದು ಪಂಡೋರಾ ಪೇಪರ್ಸ್? ಇದನ್ನೂ ಓದಿ: Pandora Papers – ಪಂಡೋರಾ ಪೇಪರ್ಸ್: 300 ಭಾರತೀಯರು, ಜಗತ್ತಿನ ಗಣ್ಯರು, ಸೆಲೆಬ್ರಿಟಿಗಳು, ಕೈಗಾರಿಕೋದ್ಯಮಿಗಳ ಹೂಡಿಕೆ ದಾಖಲೆಗಳು ಸೋರಿಕೆ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ