AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೇಪರ್ ಲೀಕ್ ಸರ್ಕಾರ’; ಯುಜಿಸಿ-ನೆಟ್ ಪರೀಕ್ಷೆಗಳ ರದ್ದತಿಗೆ ಕಾಂಗ್ರೆಸ್ ಪ್ರತಿಕ್ರಿಯೆ

ನೀಟ್ ಪರೀಕ್ಷೆಯ ಬಗ್ಗೆ ತೀವ್ರ ಆರೋಪಗಳು ವ್ಯಕ್ತವಾದ ಬೆನ್ನಲ್ಲೇ ಮಂಗಳವಾರ ನಡೆದ ಯುಜಿಸಿ-ನೆಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್​ಟಿಎ) ರದ್ದುಗೊಳಿಸಿದೆ. ಜೂನ್ 18ರಂದು ನೆಟ್ ಪರೀಕ್ಷೆ ನಡೆದಿತ್ತು. ಅದಾದ ಒಂದೇ ದಿನದಲ್ಲಿ ಈ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

'ಪೇಪರ್ ಲೀಕ್ ಸರ್ಕಾರ'; ಯುಜಿಸಿ-ನೆಟ್ ಪರೀಕ್ಷೆಗಳ ರದ್ದತಿಗೆ ಕಾಂಗ್ರೆಸ್ ಪ್ರತಿಕ್ರಿಯೆ
ಮಲ್ಲಿಕಾರ್ಜುನ ಖರ್ಗೆ
Follow us
ಸುಷ್ಮಾ ಚಕ್ರೆ
|

Updated on: Jun 20, 2024 | 3:15 PM

ನವದೆಹಲಿ: ಯುಜಿಸಿ-ನೆಟ್ ಪರೀಕ್ಷೆಗಳ (UGC-NET Exams) ರದ್ದತಿಗೆ ಸಂಬಂಧಿಸಿದಂತೆ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್​ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ. ಮೋದಿ ಸರ್ಕಾರವನ್ನು “ಪೇಪರ್ ಸೋರಿಕೆ ಸರ್ಕಾರ” ಎಂದು ಟೀಕಿಸಿದೆ. ಶಿಕ್ಷಣ ಸಚಿವರು ಈಗ ಇದರ ಜವಾಬ್ದಾರಿ ತೆಗೆದುಕೊಳ್ಳುತ್ತಾರೆಯೇ? ಎಂದು ಕಾಂಗ್ರೆಸ್ ಪಕ್ಷ (Congress Party) ಪ್ರಶ್ನಿಸಿದೆ. ಕೇಂದ್ರ ಸರ್ಕಾರ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

“ಮಂಗಳವಾರ ದೇಶದ ವಿವಿಧ ನಗರಗಳಲ್ಲಿ ಯುಜಿಸಿ-ನೆಟ್ ಪರೀಕ್ಷೆ ನಡೆಸಲಾಗಿತ್ತು. ಅದಾದ ಒಂದೇ ದಿನಕ್ಕೆ ಪೇಪರ್ ಸೋರಿಕೆ ಶಂಕೆಯಿಂದ ಆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಮೊದಲು ನೀಟ್ ಪೇಪರ್ ಸೋರಿಕೆಯಾಗಿತ್ತು ಮತ್ತು ಇದೀಗ ಯುಜಿಸಿ-ನೆಟ್ ಪೇಪರ್ ಸೋರಿಕೆಯಾಗಿದೆ. ಮೋದಿ ಸರ್ಕಾರ ‘ಪೇಪರ್ ಲೀಕ್ ಸರ್ಕಾರ’ವಾಗಿದೆ” ಎಂದು ಕಾಂಗ್ರೆಸ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್​ನಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು “ನೀಟ್ ಪರೀಕ್ಷಾ ಪೇ ಚರ್ಚಾ” ಯಾವಾಗ ನಡೆಸುತ್ತಾರೆ ಎಂದು ಅವರು ಪ್ರಧಾನಿಯನ್ನು ಗುರಿಯಾಗಿಸಿಕೊಂಡು ಕೇಳಿದ್ದಾರೆ.

ಇದನ್ನೂ ಓದಿ: NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಶಿಕ್ಷಣ ಸಚಿವಾಲಯ

ಎಕ್ಸ್‌ನಲ್ಲಿ ಹಿಂದಿಯಲ್ಲಿ ಬರೆದಿರುವ ಪೋಸ್ಟ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ, “ನರೇಂದ್ರ ಮೋದಿಯವರೇ, ನೀವು ಪರೀಕ್ಷೆಗಳ ಬಗ್ಗೆ ಸಾಕಷ್ಟು ಚರ್ಚಿಸುತ್ತೀರಿ. ಆದರೆ ನೀವು ಯಾವಾಗ ‘ನೀಟ್ ಪರೀಕ್ಷಾ ಪೇ ಚರ್ಚಾ’ ನಡೆಸುತ್ತೀರಿ? ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಉತ್ಸಾಹಕ್ಕೆ ತಣ್ಣೀರೆರಚಿದ್ದೀರಿ” ಅವರು ಹೇಳಿದ್ದಾರೆ.

“ಇದು ಮೋದಿ ಸರ್ಕಾರದ ದುರಹಂಕಾರದ ಸೋಲು. ಇದರಿಂದಾಗಿ ಅವರು ನಮ್ಮ ಯುವಕರ ಭವಿಷ್ಯವನ್ನು ತುಳಿಯುವ ಹೇಯ ಪ್ರಯತ್ನವನ್ನು ಮಾಡಿದ್ದಾರೆ” ಎಂದು ಖರ್ಗೆ ಟೀಕಿಸಿದ್ದಾರೆ.

“ನೀಟ್ ಪರೀಕ್ಷೆಯನ್ನು ಯಾವಾಗ ರದ್ದುಗೊಳಿಸಲಾಗುತ್ತದೆ?” ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ನೀಟ್ ಪರೀಕ್ಷೆಯಲ್ಲೂ ನಿಮ್ಮ ಸರ್ಕಾರದ ರಿಗ್ಗಿಂಗ್ ಮತ್ತು ಪೇಪರ್ ಸೋರಿಕೆಯನ್ನು ತಡೆಯುವ ಜವಾಬ್ದಾರಿಯನ್ನು ಮೋದಿಯವರು ವಹಿಸಿಕೊಳ್ಳಿ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: NEET-UG 2024: ನೀಟ್ ಪರೀಕ್ಷೆಯಲ್ಲಿ ಅಕ್ರಮ; ಎನ್‌ಟಿಎ, ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಶಿಕ್ಷಣ ಸಚಿವಾಲಯವು ಯುಜಿಸಿ-ನೆಟ್ ರದ್ದುಗೊಳಿಸಿ ಆದೇಶಿಸಿದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಸರ್ಕಾರವನ್ನು ಗುರಿಯಾಗಿಸಿ ಟೀಕಿಸಿದ್ದಾರೆ ಮತ್ತು ಹೊಣೆಗಾರಿಕೆಯನ್ನು ಸರಿಪಡಿಸುವಂತೆ ಕೇಳಿದ್ದಾರೆ. ಬಿಜೆಪಿ ಸರ್ಕಾರದ “ಭ್ರಷ್ಟಾಚಾರ ಮತ್ತು ಸಡಿಲತೆ” ಯುವಕರಿಗೆ ಹಾನಿಕಾರಕವಾಗಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

“ನೀಟ್ ಪರೀಕ್ಷೆಯಲ್ಲಿ ಹಗರಣದ ಸುದ್ದಿಯ ನಂತರ, ಇದೀಗ ಜೂನ್ 18ರಂದು ನಡೆದ ನೆಟ್ ಪರೀಕ್ಷೆಯನ್ನು ಅಕ್ರಮಗಳ ಭೀತಿಯಿಂದ ರದ್ದುಗೊಳಿಸಲಾಗಿದೆ. ಈಗ ಅದನ್ನೆಲ್ಲ ಸರಿಪಡಿಸಲಾಗುತ್ತದೆಯೇ? ಶಿಕ್ಷಣ ಸಚಿವರು ಈ ಲೋಪಕ್ಕೆ ಹೊಣೆಗಾರರಾಗುತ್ತಾರೆಯೇ?” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ