AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘100 ಕೋಟಿ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂಬ ಪತ್ರ ಬರೆದದ್ದು ನಾನೇ‘; ಖಚಿತಪಡಿಸಿದ ಪರಮ್​ವೀರ್ ಸಿಂಗ್

Param Bir Singh Letter: ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್​ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಪರಮ್​ವೀರ್ ಸಿಂಗ್ ಸ್ವತಃ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದಾರೆ.

‘100 ಕೋಟಿ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂಬ ಪತ್ರ ಬರೆದದ್ದು ನಾನೇ‘; ಖಚಿತಪಡಿಸಿದ ಪರಮ್​ವೀರ್ ಸಿಂಗ್
ಪರಮ್​ಬೀರ್ ಸಿಂಗ್
guruganesh bhat
|

Updated on:Mar 21, 2021 | 11:08 AM

Share

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪತ್ರ ಬರೆದಿದ್ದಾಗಿ ಪರಮ್​ವೀರ್ ಸಿಂಗ್ ಖಚಿತಪಡಿಸಿದ್ದಾರೆ. ಅನಿಲ್ ದೇಶ್​ಮುಖ್ ಮುಂಬೈನ ಬಾರ್ ಮತ್ತು ರೆಸ್ಟೊರೆಂಟ್​ಗಳಿಂದ 100 ಕೋಟಿ ಹಣವನ್ನು ವಸೂಲು ಮಾಡಬೇಕೆಂದು ಸಸ್ಪೆಂಡ್ ಆಗಿರುವ ಪೊಲಿಸ್ ಅಧಿಕಾರಿ ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು ಎಂದು ಪರಮ್​ವೀರ್ ಸಿಂಗ್ ಪತ್ರದಲ್ಲಿ ಉಲ್ಲೇಖಿಸಿದ್ದರು. ನಂತರ ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್​ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಇಂದು (ಮಾರ್ಚ್ 21) ಬೆಳಗ್ಗೆ ಪರಮ್​ವೀರ್ ಸಿಂಗ್ ಸ್ವತಃ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಚೇರಿಗೆ ಸಹಿ ಮಾಡಿದ ಪತ್ರವನ್ನು ಕಳಿಸಿದ್ದಾಗಿ ಅವರು ತಿಳಿಸಿದ್ದಾರೆ.  

ಶಿವಸೇನೆಯ ಉದ್ಧವ್ ಠಾಕ್ರೆ  ಮಹಾರಾಷ್ಟ್ರದ ಮುಖ್ಯಮಂತ್ರಿಯಾದರೂ ಮೈತ್ರಿಕೂಟದ ಎನ್​ಸಿಪಿ ಪಕ್ಷದ ಅನಿಲ್ ದೇಶ್​ಮುಖ್ ಗೃಹ ಸಚಿವರಾಗಿದ್ದಾರೆ.  ಸರ್ಕಾರದ ಚುಕ್ಕಾಣಿಯಲ್ಲಿ ಕುಳಿತಿರುವ ಇಬ್ಬರ ನಡುವೆ ಅಭಿಪ್ರಾಯ ಬೇಧ, ಸಣ್ಣಪುಟ್ಟ ವೈಮನಸ್ಸು ಉದ್ಭವಿಸಿದ ಉದಾಹರಣೆಗಳಿವೆ. ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಪರಮ್​ವೀರ್ ಸಿಂಗ್ ಮಾಡಿರುವ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸುವ ಆರೋಪ ಮಹಾರಾಷ್ಟ್ರ ಸರ್ಕಾರಕ್ಕೆ ಕುತ್ತು ತರುವ ಶಕ್ತಿ ಹೊಂದಿದೆ. ಪರಮ್​ವೀರ್ ಸಿಂಗ್ ಗೃಹ ಸಚಿವರ ಮೇಲೇ ಆರೋಪ ಮಾಡಿರುವುದು ಶಿವಸೇನೆ-ಎನ್​ಸಿಪಿಯ ದೋಸ್ತಿ ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ.

ಪತ್ರದ ಸಂಪೂರ್ಣ ವಿವರ ಓದಲು ಇಲ್ಲಿ ಕ್ಲಿಕ್ ಮಾಡಿ: ಪರಮ್​ವೀರ್ ಸಿಂಗ್ ಉದ್ಧವ್ ಠಾಕ್ರೆಗೆ ಬರೆದ ಪತ್ರ

ಗೃಹ ಸಚಿವ ಅನಿಲ್ ದೇಶ್​ಮುಖ್ ಅವರ ಮೇಲೆ ಇನ್ನೂ ಗಂಭೀರ ಆರೋಪ ಮಾಡಿದ್ದಾರೆ. ಮುಂಬೈನ ಖಾಸಗಿ ಹೊಟೇಲ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂಸದ ಮೋಹನ್ ದೇಲ್ಕರ್ ಸಾವಿಗೂ ಅನಿಲ್ ದೇಶ್​ಮುಖ್ ಹೆಸರು ಥಳುಕುಹಾಕಿಕೊಂಡಿದೆ. ‘ಹಿರಿಯ ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ’ ಎಂದು ಆತ್ಮಹತ್ಯಾ ಪತ್ರ ಬರೆದಿದ್ದ ಸಂಸದ ಮೋಹನ್ ದೇಲ್ಕರ್ ಬರೆದುಕೊಂಡಿದ್ದರಂತೆ. ಆದರೆ ಮೋಹನ್ ದೇಲ್ಕರ್ ಅವರ ಸಾವನ್ನು ಆತ್ಮಹತ್ಯೆ ಎಂದೇ ಪ್ರಕರಣ ದಾಖಲಿಸುವಂತೆ ಗೃಹ ಸಚಿವ ಅನಿಲ್ ದೇಶ್​ಮುಖ್ ಒತ್ತಡ ಹೇರಿದ್ದರು ಎಂದು ಪರಮ್​ವೀರ್  ಸಿಂಗ್ ಆರೋಪಿಸಿದ್ದಾರೆ.

ಅನಿಲ ದೇಶ್​ಮುಖ್​ಗೆ ನನ್ನ ಮೇಲೆ ಅತ್ಯಂತ ಸಿಟ್ಟಿತ್ತು. ಮೋಹನ್ ದೇಲ್ಕರ್ ಸಾವನ್ನು SIT ಗೆ ನಿಡುವುದಾಗಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ದೇಶ್​ಮುಖ್ ತಿಳಿಸಿದ್ದರು ಎಂದು ಪರಮ್​ವೀರ್  ಸಿಂಗ್ ಪತ್ರದಲ್ಲಿ ದೂರಿದ್ದಾರೆ.

ಗೃಹ ಸಚಿವರ ರಾಜೀನಾಮೆಗೆ ಆಗ್ರಹ ಈ ಸಂಬಂಧ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕರೂ ಆಗಿರುವ ದೇವೇಂದ್ರ ಫಡ್ನವಿಸ್, ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಈ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಮುಖ್ಯಮಂತ್ರಿಗೆ ಅರಿವಿತ್ತು ಎಂದೂ ಪತ್ರದಲ್ಲಿ ಹೇಳಲಾಗಿದೆ. ಹಾಗಾಗ್ಯೂ ಯಾಕೆ ಅವರು ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಳಿದ್ದಾರೆ.

ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್ ಆದರೆ, ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್​ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ.

ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.

ಪತ್ರದ ಸಂಪೂರ್ಣ ವಿವರ ಓದಲು ಇಲ್ಲಿ ಕ್ಲಿಕ್ ಮಾಡಿ: ಪರಮ್​ವೀರ್ ಸಿಂಗ್ ಉದ್ಧವ್ ಠಾಕ್ರೆಗೆ ಬರೆದ ಪತ್ರ

ಇದನ್ನೂ ಓದಿ: Mukesh Ambani | ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು​ ಪತ್ತೆ

ಮುಕೇಶ್ ಅಂಬಾನಿ ಮನೆ ಮುಂದೆ ಜಿಲೆಟಿನ್ ಪತ್ತೆ ಪ್ರಕರಣ ; ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸಸ್ಪೆಂಡ್

ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 11:01 am, Sun, 21 March 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!