AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ದೇಶ್​ಮುಖ್ ವಿರುದ್ಧ ಪರಮ್​ವೀರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಾಂಬೆ ಹೈಕೋರ್ಟ್​ನಲ್ಲಿ ಮಾರ್ಚ್ 31ಕ್ಕೆ ವಿಚಾರಣೆ

ಪರಮ್​ವೀರ್ ಸಿಂಗ್ ಬಾಂಬೆ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಾರ್ಚ್ 25ರಂದು ದಾಖಲಿಸಿದ್ದರು. ಪೊಲೀಸ್ ಇಲಾಖೆಯ ಪೊಲೀಸರ ವರ್ಗಾವಣೆ ವಿಚಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಾಗಿಯೂ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಅನಿಲ್ ದೇಶ್​ಮುಖ್ ವಿರುದ್ಧ ಪರಮ್​ವೀರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಾಂಬೆ ಹೈಕೋರ್ಟ್​ನಲ್ಲಿ ಮಾರ್ಚ್ 31ಕ್ಕೆ ವಿಚಾರಣೆ
ಪರಮ್​ವೀರ್ ಸಿಂಗ್ ಹಾಗೂ ಬಾಂಬೆ ಹೈಕೋರ್ಟ್
TV9 Web
| Edited By: |

Updated on:Apr 05, 2022 | 1:02 PM

Share

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಮಾಜಿ ಮುಂಬೈ ಪೊಲೀಸ್ ಮುಖ್ಯಸ್ಥ ಪರಮ್​ವೀರ್ ಸಿಂಗ್ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಾಳೆ (ಮಾರ್ಚ್ 31) ನಡೆಸುವುದಾಗಿ ಬಾಂಬೆ ಹೈಕೋರ್ಟ್ ಇಂದು ತಿಳಿಸಿದೆ. ಅನಿಲ್ ದೇಶ್​ಮುಖ್, ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಪ್ರತಿ ತಿಂಗಳು ಬಾರ್ ಹಾಗೂ ರೆಸ್ಟೋರೆಂಟ್​ಗಳಿಂದ ₹ 100 ಕೋಟಿ ದಂಡ ಸಂಗ್ರಹಿಸಲು ತಿಳಿಸಿದ್ದರು. ಈ ಕಾರಣಕ್ಕಾಗಿ ಅನಿಲ್ ದೇಶ್​ಮುಖ್ ವಿರುದ್ಧ ಪರಮ್​ವೀರ್ ಸಿಂಗ್ ಪಿಐಎಲ್ ದಾಖಲಿಸಿದ್ದರು.

ಪರಮ್​ವೀರ್ ಸಿಂಗ್ ಬಾಂಬೆ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಾರ್ಚ್ 25ರಂದು ದಾಖಲಿಸಿದ್ದರು. ಪೊಲೀಸ್ ಇಲಾಖೆಯ ಪೊಲೀಸರ ವರ್ಗಾವಣೆ ವಿಚಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಾಗಿಯೂ ಅವರು ತಮ್ಮ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಮುಂಬೈನ ಹಿಂದಿನ ಪೊಲೀಸ್ ಕಮಿಷನರ್ ಪರಮ್​ವೀರ್​ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿತ್ತು. ಬಾಂಬೆ ಹೈಕೋರ್ಟ್​ನಲ್ಲಿಯೇ ಅರ್ಜಿ ಹಾಕಿಕೊಳ್ಳಿ ಎಂದು ಸೂಚಿಸಿತ್ತು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪರಮ್​ವೀರ್​ ಸಿಂಗ್​ ಬಾಂಬೆ ಹೈಕೋರ್ಟ್​ಗೆ ಅರ್ಜಿ ಹಾಕಿದ್ದರು. ತಮ್ಮ ಅರ್ಜಿಯಲ್ಲಿ ಮಹಾರಾಷ್ಟ್ರದ ಹಾಲಿ ಗೃಹ ಸಚಿವ ಅನಿಲ್ ದೇಶ್​ಮುಖ್​ ವಿರುದ್ಧ ಗಂಭೀರ ಆರೋಪ ಮಾಡಿದ್ದ ಪರಮ್​ವೀರ್​ಸಿಂಗ್, ಗೃಹ ಸಚಿವರಾಗಿ ದೇಶ್​ಮುಖ್​ ಅವರು ಲಂಚ ಸ್ವೀಕರಿಸಿ ಪ್ರತಿ ತಿಂಗಳು ರೂ 100 ಕೋಟಿ ಕಪ್ಪ ತಂದು ಕೊಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಆಣತಿ ನೀಡಿದ್ದಾರೆ. ಇದನ್ನು ತನಿಖೆಗಾಗಿ ಕೂಡಲೇ ಸಿಬಿಐಗೆ ಒಪ್ಪಿಸಬೇಕು ಎಂದು ತಮ್ಮ ಕೇಳಿದ್ದರು.

ಸುಪ್ರೀಂಕೋರ್ಟ್ ಏನು ಹೇಳಿತು? ಈ ಹಂತದಲ್ಲಿ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಯಾವ ರಾಜ್ಯಗಳಿಗೂ ಪೊಲೀಸ್ ಸುಧಾರಣೆ ತರಲು ಇಷ್ಟ ಇಲ್ಲ. ಯಾಕೆಂದರೆ, ಒಂದೊಮ್ಮೆ ಈ ರೀತಿ ಸುಧಾರಣೆ ತಂದರೆ, ಅವರ ಕೈಲಿ ಅಧಿಕಾರ ಇರುವುದೇ ಇಲ್ಲ ಎಂದು ಹೇಳಿದರು. ಮೊದಲು ಒಳ್ಳೆ ಸಂಬಂಧ ಹೊಂದಿದ್ದವರು ಈಗ ಜಗಳಕ್ಕಿಳಿದಿದ್ದಾರೆ. ಇದರಿಂದ ಎಲ್ಲ ಹೊರಬರುತ್ತಿದೆ. ಈ ಹಂತದಲ್ಲಿ ನಾವು ಈ ಪ್ರಕರಣದ ವಿಚಾರಣೆ ಆರಂಭಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಯಾವಾಗ ನ್ಯಾಯಾಲಯ ತಾನು ಈ ಹಂತದಲ್ಲಿ ಇದನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿತೋ ಆಗ ರೋಹಟ​ಗಿ, ತಮ್ಮ ಕೋರಿಕೆಯನ್ನು ಮುಂದಿಟ್ಟರು. ದೇಶ್​ಮುಖ್​ ಈಗಲೂ ಮಂತ್ರಿಯಾಗಿ ಇದ್ದಾರೆ.  ಹಾಗಾಗಿ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ. ಆದ್ದರಿಂದ ಬಾಂಬೆ ಹೈಕೋರ್ಟ್​ ನಾಳೆಯೇ ಇದನ್ನು ವಿಚಾರಣೆಗೆ ತೆಗೆದುಕೊಳ್ಳಲು ನಿರ್ದೇಶನ ನೀಡಿ ಎಂದು ಕೋರಿಕೊಂಡರು. ಅದನ್ನು ಒಪ್ಪಿದ ನ್ಯಾಯಪೀಠ ನಾಳೆಯೇ ಇದನ್ನು ವಿಚಾರಣೆಗೆ ತೆಗೆದುಕೊಳ್ಳುವಂತೆ ಬಾಂಬೆ ಹೈಕೋರ್ಟ್​ಗೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

ಇದನ್ನೂ ಓದಿ: ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 10:46 pm, Tue, 30 March 21

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು