AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಮೇಶ್ವರನ್ ಅಯ್ಯರ್ ನೀತಿ ಆಯೋಗದ ಸಿಇಒ, ಐಬಿ ಮುಖ್ಯಸ್ಥರಾಗಿ ತಪನ್ ಕುಮಾರ್ ದೇಕಾ ನೇಮಕ

ಹಿರಿಯ ಐಪಿಎಸ್ ಅಧಿಕಾರಿ ತಪನ್ ಕುಮಾರ್ ದೇಕಾ ಅವರನ್ನು ಶುಕ್ರವಾರ ಇಂಟೆಲಿಜೆನ್ಸ್ ಬ್ಯೂರೋ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಈ ಹಿಂದೆ  ಮುಖ್ಯಸ್ಥರಾಗಿದ್ದ ಅರವಿಂದ್ ಕುಮಾರ್ ಅವರ ಅಧಿಕಾರಾವಧಿ ಜೂನ್ 30 ರಂದು ಕೊನೆಗೊಳ್ಳುತ್ತದೆ.

ಪರಮೇಶ್ವರನ್ ಅಯ್ಯರ್ ನೀತಿ ಆಯೋಗದ ಸಿಇಒ, ಐಬಿ ಮುಖ್ಯಸ್ಥರಾಗಿ ತಪನ್ ಕುಮಾರ್ ದೇಕಾ ನೇಮಕ
ಪರಮೇಶ್ವರನ್ ಅಯ್ಯರ್- ತಪನ್ ಕುಮಾರ್ ದೇಕಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jun 24, 2022 | 6:56 PM

Share

ದೆಹಲಿ: ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ (Amitabh Kant) ಅವರು ಆರು ವರ್ಷಗಳ ಸುದೀರ್ಘ ಅವಧಿಯ ನಂತರ ಸಂಸ್ಥೆಯ ಮುಖ್ಯಸ್ಥರಾಗಿ ಜೂನ್ ಅಂತ್ಯದಲ್ಲಿ ಸರ್ಕಾರಿ ಚಿಂತಕರ ಚಾವಡಿಯನ್ನು ತೊರೆಯಲಿದ್ದಾರೆ. ಅವರ ಬದಲಿಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಮಾಜಿ ಕಾರ್ಯದರ್ಶಿ ಮತ್ತು ಸರ್ಕಾರದ ಸ್ವಚ್ಛ ಭಾರತ್ ಮಿಷನ್‌ನ (Swachh Bharat Mission)ಹಿಂದಿನ ಶಕ್ತಿಯಾಗಿರುವ ಪರಮೇಶ್ವರನ್ ಅಯ್ಯರ್ (Parameswaran Iyer) ಅವರನ್ನು ನೇಮಕ ಮಾಡಲಾಗುತ್ತದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಅಧಿಸೂಚನೆಯ ಪ್ರಕಾರ ಅಯ್ಯರ್ ಅವರ ಆರಂಭಿಕ ಅಧಿಕಾರಾವಧಿಯು ಎರಡು ವರ್ಷಗಳವರೆಗೆ ಇರುತ್ತದೆ.  ಕಾಂತ್ ಅವರ ಅಧಿಕಾರಾವಧಿಯನ್ನು ಜೂನ್ 2021 ರಲ್ಲಿ ಒಂದು ವರ್ಷಕ್ಕೆ ವಿಸ್ತರಿಸಲಾಗಿತ್ತು. ಕೇರಳ ಕೇಡರ್‌ನ 1980 ರ ಬ್ಯಾಚ್‌ನ ನಿವೃತ್ತ IAS ಅಧಿಕಾರಿ ಆಗಿದ್ದ ಕಾಂತ್ ಅವರು 2016 ರಿಂದ ನೀತಿ ಆಯೋಗದ CEO ಆಗಿದ್ದಾರೆ. ಅಯ್ಯರ್ ಅವರು 17 ವರ್ಷಗಳ ಸೇವೆಯ ನಂತರ 2009 ರಲ್ಲಿ ಭಾರತೀಯ ಆಡಳಿತ ಸೇವೆಗೆ (IAS) ರಾಜೀನಾಮೆ ನೀಡಿದ್ದರು, 2016 ರಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ (D0DWS) ಕಾರ್ಯದರ್ಶಿಯಾಗಿದ್ದು, ಸ್ವಚ್ಛ್ ಭಾರತದ ಹಿಂದಿನ ಶಕ್ತಿಯಾಗಿದ್ದರು. ಜುಲೈ 2020 ರಲ್ಲಿ, ಅವರು ತಮ್ಮ DoDWS ನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಅಮೆರಿಕದಲ್ಲಿ ವಿಶ್ವ ಬ್ಯಾಂಕ್ ನಲ್ಲಿ ಕೆಲಸ ಮಾಡಿದರು.

63ರ ಹರೆಯದ ಅಯ್ಯರ್, ಏಪ್ರಿಲ್ 1998 ಮತ್ತು ಫೆಬ್ರವರಿ 2006 ರ ನಡುವೆ ವಿಶ್ವಸಂಸ್ಥೆಯಲ್ಲಿ ಹಿರಿಯ ಗ್ರಾಮೀಣ ನೀರು ನೈರ್ಮಲ್ಯ ತಜ್ಞರಾಗಿ ಕೆಲಸ ಮಾಡಿದ್ದಾರೆ. ಅಯ್ಯರ್ ಅವರು ಉತ್ತರ ಪ್ರದೇಶದ ಮಾಯಾವತಿ ಸರ್ಕಾರದೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ಐಬಿ ಮುಖ್ಯಸ್ಥರಾಗಿ ತಪನ್ ಕುಮಾರ್ ದೇಕಾ , R&AW ಮುಖ್ಯಸ್ಥರಾಗಿ ಸಮಂತ್ ಗೋಯೆಲ್ ಅಧಿಕಾರವಧಿ ಒಂದು ವರ್ಷ ವಿಸ್ತರಣೆ

ಹಿರಿಯ ಐಪಿಎಸ್ ಅಧಿಕಾರಿ ತಪನ್ ಕುಮಾರ್ ದೇಕಾ ಅವರನ್ನು ಶುಕ್ರವಾರ ಇಂಟೆಲಿಜೆನ್ಸ್ ಬ್ಯೂರೋ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಈ ಹಿಂದೆ  ಮುಖ್ಯಸ್ಥರಾಗಿದ್ದ ಅರವಿಂದ್ ಕುಮಾರ್ ಅವರ ಅಧಿಕಾರಾವಧಿ ಜೂನ್ 30 ರಂದು ಕೊನೆಗೊಳ್ಳುತ್ತದೆ.

ಸಿಬ್ಬಂದಿ ಸಚಿವಾಲಯ ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, ಐಬಿಯ ಕಾರ್ಯಾಚರಣೆ ವಿಭಾಗವನ್ನು ನಿರ್ವಹಿಸುತ್ತಿರುವ ದೇಕಾ ಅವರು ಎರಡು ವರ್ಷಗಳ ಕಾಲ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಅವರು ಹಿಮಾಚಲ ಪ್ರದೇಶ ಕೇಡರ್‌ನ 1988 ರ ಬ್ಯಾಚ್ ಅಧಿಕಾರಿ.  ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (R&AW) ಮುಖ್ಯಸ್ಥರಾಗಿರುವ ಸಮಂತ್ ಗೋಯೆಲ್ ಅವರ ಅಧಿಕಾರಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ ಎಂದು ಸಚಿವಾಲಯವು ಮತ್ತೊಂದು ಆದೇಶದಲ್ಲಿ ತಿಳಿಸಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ