AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಧಾನ ಅರ್ಚಕರಾಗಿ ಪರಮೇಶ್ವರನ್ ನಂಬೂದಿರಿ ನೇಮಕ

ಇವರ ಮಗ ನಾರಾಯಣ ನಂಬೂದಿರಿ ಕರ್ನಾಟಕದ ಧಾರವಾಡ ಐಐಟಿಯಲ್ಲಿ ವಿದ್ಯಾರ್ಥಿ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಧಾನ ಅರ್ಚಕರಾಗಿ ಪರಮೇಶ್ವರನ್ ನಂಬೂದಿರಿ ನೇಮಕ
ಶಬರಿಮಲೆ ಅಯ್ಯಪ್ಪ ದೇಗುಲದ ಪ್ರಧಾನ ಅರ್ಚಕರಾಗಿ ನಿಯುಕ್ತರಾಗಿರುವ ಪರಮೇಶ್ವರನ್ ನಂಬೂದಿರಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 17, 2021 | 7:35 PM

Share

ತಿರುವನಂತಪುರ: ಪ್ರಸಿದ್ಧ ಯಾತ್ರಾ ಕೇಂದ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಧಾನ ಅರ್ಚಕರಾಗಿ ಮಾವೆಲಿಕ್ಕರದ ಎನ್. ಪರಮೇಶ್ವರನ್ ನಂಬೂದಿರಿ ಅವರನ್ನು ನೇಮಿಸಲಾಗಿದೆ. ನ.16ರಿಂದ ಮುಂದಿನ ಒಂದು ವರ್ಷದ ಅವಧಿಗೆ ಪರಮೇಶ್ವರನ್ ನಂಬೂದಿರಿ ಅಯ್ಯಪ್ಪ ದೇಗುಲದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಲಿದ್ದಾರೆ. ಮಲ್ಲಿಕಾಪುರಂ ದೇವಿ ದೇಗುಲದ ಪ್ರಧಾನ ಅರ್ಚಕರಾಗಿ ಶಂಭು ನಂಬೂದಿರಿ ನಿಯುಕ್ತರಾಗಿದ್ದಾರೆ. ಪ್ರಧಾನ ಅರ್ಚಕರ ಆಯ್ಕೆ ಭಾನುವಾರ ಬೆಳಗ್ಗೆ ದೇವಾಲಯದ ಸೋಪಾನಂನಲ್ಲಿ ಡ್ರಾ ಮೂಲಕ ನಡೆಯಿತು ಎಂದು ತಿರುವಾಂಕೂರು ದೇವಸ್ವಂ ಬೋರ್ಡ್ (ಟಿಡಿಬಿ) ಹೇಳಿದೆ.

ನಾರಾಯಣ ನಂಬೂದಿರಿ ಮತ್ತು ಸುಭದ್ರಾ ಅಂತರ್ಜಾನಂ ಅವರ ಮಗನಾದ ಪರಮೇಶ್ವರ ನಂಬೂದಿರಿ ಪ್ರಸ್ತುತ ಅಲಪ್ಪುಳ ಜಿಲ್ಲೆಯ ಏವೂರ್​ನ ಶ್ರೀ ಕೃಷ್ಣಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಹಿಂದೆ ಪಂಪ ಮಹಾ ಗಣಪತಿ ದೇಗುಲ, ಚೆಟ್ಟಿಕುಲ ದೇವಾಲಯಗಳಲ್ಲಿಯೂ ಅವರು ಈ ಹಿಂದೆ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು.

ಪರಮೇಶ್ವರ ನಂಬೂದಿರಿ ಅವರ ಪತ್ನಿ ಉಮಾದೇವಿ ಅಂತರ್ಜಾನಂ ಇನ್​ಫ್ಯಾಂಟ್ ಜೀಸಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಮಗ ನಾರಾಯಣ ನಂಬೂದಿರಿ ಕರ್ನಾಟಕದ ಧಾರವಾಡ ಐಐಟಿಯಲ್ಲಿ ವಿದ್ಯಾರ್ಥಿ.

ಪ್ರವಾಹದ ಆತಂಕ: ಶಬರಿಮಲೆ ಭೇಟಿ ಮೂಂದೂಡಿ ಎಂದ ಕೇರಳ ಸರ್ಕಾರ ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಲ್ಲಿ ಭಾನುವಾರವೂ (ಅ.17) ಮಳೆ ಮುಂದುವರಿದಿದೆ. ಸೋಮವಾರವೂ ವ್ಯಾಪಕವಾಗಿ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದರಿಂದ ಭಕ್ತರು ಶಬರಿಮಲೆ ಭೇಟಿಯನ್ನು ಮುಂದೂಡುವುದು ಒಳಿತು ಎಂದು ಕೇರಳ ಸರ್ಕಾರದ ಟ್ರಾವಂಕೋರ್ ದೇವಸ್ವಂ ಮಂಡಳಿ ಸಲಹೆ ಮಾಡಿದೆ.

ಇದನ್ನೂ ಓದಿ: ಕೇರಳ ಮುಖ್ಯಮಂತ್ರಿ ಪಿಣರಯಿ ವಿಜಯನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ: ಮಳೆ, ಭೂಕುಸಿತದಿಂದ ಮೃತಪಟ್ಟವರಿಗೆ ಸಂತಾಪ ಇದನ್ನೂ ಓದಿ: Kerala Rain Updates: ಕೇರಳದಲ್ಲಿ ಧಾರಾಕಾರ ಮಳೆ; ಇದುವರೆಗೆ 18 ಮಂದಿ ಸಾವು, ಸೇನೆಯಿಂದ ಸಹಾಯಬೇಕೆಂದ ಪಿಣರಾಯಿ ವಿಜಯನ್​

Published On - 7:35 pm, Sun, 17 October 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ