AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನಗಳ ಹಿಂದೆ ಚರಂಡಿಗೆ ಬಿದ್ದ ಮಗನಿಗಾಗಿ ಅನ್ನ, ನೀರು ಬಿಟ್ಟು ಪೋಷಕರ ಹುಡುಕಾಟ

ಮಳೆ ಬರುತ್ತಿದ್ದ ಸಂದರ್ಭದಲ್ಲಿ ತಂದೆಯ ಜತೆ ಸ್ಕೂಟರ್​ನಲ್ಲಿ ಹೋಗುತ್ತಿದ್ದ ಎಂಟು ವರ್ಷದ ಬಾಲಕ ಜಾರಿ ಚರಂಡಿಗೆ ಬಿದ್ದಿದ್ದು, ಮೂರು ದಿನಗಳಿಂದ ಬಾಲಕ ಅವಿನಾಶ್​ನಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

ಮೂರು ದಿನಗಳ ಹಿಂದೆ ಚರಂಡಿಗೆ ಬಿದ್ದ ಮಗನಿಗಾಗಿ ಅನ್ನ, ನೀರು ಬಿಟ್ಟು ಪೋಷಕರ ಹುಡುಕಾಟ
ಚರಂಡಿ
ನಯನಾ ರಾಜೀವ್
|

Updated on:Jul 07, 2024 | 11:15 AM

Share

ಅಸ್ಸಾಂನಲ್ಲಿ ಕಳೆದ ಎರಡು ವಾರಗಳಿಂದ ಪ್ರವಾಹದಂಥಾ ಮಳೆಯಾಗುತ್ತಿದೆ. ಎಂಟು ವರ್ಷದ ಬಾಲಕ ಅವಿನಾಶ್ ತನ್ನ ತಂದೆಯ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಜಾರಿ ಚರಂಡಿಗೆ ಬಿದ್ದಿದ್ದು, ಮೂರು ದಿನಗಳಿಂದ ಪೋಷಕರು ಅನ್ನ, ನೀರು ಬಿಟ್ಟು ಹುಡುಕಾಟ ನಡೆಸುತ್ತಿದ್ದಾರೆ. ಹುಡುಗನ ತಂದೆ ಹೀರಾಲಾಲ್ ಸರ್ಕಾರ್ ಅವರು ಜ್ಯೋತಿನಗರ ಪ್ರದೇಶದಲ್ಲಿ ಮೂರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದು, ಅಲ್ಲಿಂದ ಮನೆಗೆ ಹಿಂದಿರುಗಲು ನಿರಾಕರಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸೇರಿದಂತೆ ಅಧಿಕಾರಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಸ್ನಿಫರ್ ಡಾಗ್‌ಗಳು, ಅಗೆಯುವ ಯಂತ್ರಗಳು ಮತ್ತು ಇತರ ಉಪಕರಣಗಳನ್ನು ಚಂಡಮಾರುತದ ಚರಂಡಿಯನ್ನು ಜಾಲಾಡಲು ಬಳಸಲಾಗುತ್ತಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಹೀರಾಲಾಲ್ ಮತ್ತು ಅವರ ಪತ್ನಿಯನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡಿದರು. ಶೋಧ ತಂಡಗಳು ರಾತ್ರಿಯಿಡೀ ತಮ್ಮ ಕಾರ್ಯವನ್ನು ಮುಂದುವರಿಸಲಿವೆ, ಮನೆಯಲ್ಲಿರುವ ಮತ್ತೊಂದು ಮಗುವಿನ ಯೋಗಕ್ಷೇಮ ನೋಡಿಕೊಳ್ಳುವುದಕ್ಕಾದರೂ ನೀವು ಮನೆಗೆ ಹೋಗಿ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಅಸ್ಸಾಂನ ಹಲವು ಭಾಗಗಳಲ್ಲಿ ಭಾರೀ ಮಳೆ; ಗುವಾಹಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನೀರು

ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಘಟನಾ ಸ್ಥಳಿಂದ ತುಂಬಾ ದೂರ ಹೋಗಿರಬಹುದು ಎಂದು ಅಂದಾಜಿಸಲಾಗಿದೆ. ಕೆಳಭಾಗದ ಪ್ರದೇಶಗಳಲ್ಲಿ ಕಾಂಕ್ರೀಟ್ ಚಪ್ಪಡಿಗಳನ್ನು ತೆಗೆಯುವುದರೊಂದಿಗೆ ಹುಡುಕಾಟ ಮುಂದುವರೆದಿದೆ.

ಬಾಲಕ ಜೀವಂತವಾಗಿದ್ದಾನೆಂದು ಭಾವಿಸಿದರೂ ಕೂಡ ಆತನ ಸ್ಥಿತಿ ಹೇಗಿರಬಹುದು ಎಂದು ಅಂದಾಜಿಸಲು ಸಾಧ್ಯವಿಲ್ಲ. ಘಟನೆಗೆ ಕಾರಣವಾದ ಸರ್ಕಾರದ ನಿರ್ಲಕ್ಷ್ಯದ ಆರೋಪವನ್ನು ತಳ್ಳಿಹಾಕಿದ ಮುಖ್ಯಮಂತ್ರಿ, ಗುವಾಹಟಿಯಂತಹ ದೊಡ್ಡ ನಗರದಲ್ಲಿ ಕೆಲವು ಸಮಸ್ಯೆಗಳಿವೆ ಎಂದು ಸಮರ್ಥಿಸಿಕೊಂಡರು. ಎಲ್ಲೆಲ್ಲಿ ಗಮನಸೆಳೆದರೂ ಅವುಗಳನ್ನು ಸರಿಪಡಿಸಲು ಆಡಳಿತ ಸಿದ್ಧವಿದೆ ಎಂದು ತಿಳಿಸಿದರು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:13 am, Sun, 7 July 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್