Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನ ಸಾವಿನಿಂದ ಮನನೊಂದಿದ್ದ ದಂಪತಿ ಆತ್ಮಹತ್ಯೆ; ತಮಿಳುನಾಡಿನಲ್ಲೊಂದು ಮನಕಲಕುವ ಘಟನೆ

ಸೋಮವಾರ ಮುಂಜಾನೆ ದಂಪತಿ ಎಷ್ಟು ಹೊತ್ತಾದರೂ ಮನೆಯಿಂದ ಹೊರಗೆ ಬರಲಿಲ್ಲ. ಯಾಕೋ ಅನುಮಾನ ಬಂದು ಅಕ್ಕಪಕ್ಕದ ಮನೆಯವರೆಲ್ಲ ಬಾಗಿಲು ಬಡಿಯಲು ಶುರು ಮಾಡಿದರು. ಆದರೆ ಒಳಗಿನಿಂದ ಯಾವುದೇ ಮಾತೂ ಕೇಳುತ್ತಿರಲಿಲ್ಲ.

ಪುತ್ರನ ಸಾವಿನಿಂದ ಮನನೊಂದಿದ್ದ ದಂಪತಿ ಆತ್ಮಹತ್ಯೆ; ತಮಿಳುನಾಡಿನಲ್ಲೊಂದು ಮನಕಲಕುವ ಘಟನೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Feb 22, 2022 | 6:50 PM

ಪುತ್ರನ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಪಾಲಕರು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ. ಪುತ್ರ ಶೋಕ ನಿರಂತರವಾದದ್ದು ಎಂಬ ಮಾತಿದೆ. ಹಾಗೇ, 2021ರ ಡಿಸೆಂಬರ್​​ನಲ್ಲಿ ತಮ್ಮ 14ವರ್ಷದ  ಪುತ್ರ ಶ್ಯಾಮ್​​ನನ್ನು ಕಳೆದುಕೊಂಡಿದ್ದ ವಿ.ಸತ್ಯರಾಜ್​ ಮತ್ತು ಎಸ್​.ಶರಣ್ಯಾ ಫೆ.21ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರಿಗೂ 36ವರ್ಷ. ಸತ್ಯರಾಜ್ ಕಂಪ್ಯೂಟರ್​ ಆಪರೇಟರ್​ ಆಗಿ ಕೆಲಸ ಮಾಡುತ್ತಿದ್ದರು.

ಪುತ್ರ ಡೆಂಗ್ಯೂದಿಂದಾಗಿ ಮೃತಪಟ್ಟಿದ್ದ. ಸೋಮವಾರ ಮುಂಜಾನೆ ದಂಪತಿ ಎಷ್ಟು ಹೊತ್ತಾದರೂ ಮನೆಯಿಂದ ಹೊರಗೆ ಬರಲಿಲ್ಲ. ಯಾಕೋ ಅನುಮಾನ ಬಂದು ಅಕ್ಕಪಕ್ಕದ ಮನೆಯವರೆಲ್ಲ ಬಾಗಿಲು ಬಡಿಯಲು ಶುರು ಮಾಡಿದರು. ಆದರೆ ಒಳಗಿನಿಂದ ಯಾವುದೇ ಮಾತೂ ಕೇಳುತ್ತಿರಲಿಲ್ಲ.  ಅನುಮಾನ ಬಲವಾಗಿ ಬಾಗಿಲಿ ಒಡೆದು ಒಳಹೋದಾಗ ಸತ್ಯರಾಜು ಹೆಣ  ಸೀಲಿಂಗ್​ ಫ್ಯಾನ್​​ಗೆ ನೇತಾಡುತ್ತಿತ್ತು. ಹಾಗೇ, ಶರಣ್ಯಾ ಶವ ನೆಲದ ಮೇಲೆ ಬಿದ್ದಿತ್ತು ಎಂದು ಹೇಳಲಾಗಿದೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಸುಲುರ್​ ಠಾಣೆ ಪೊಲೀಸರು ಶವಗಳನ್ನು ಪೋಸ್ಟ್​ಮಾರ್ಟಮ್​​ಗೆ ಕೊಯಂಬತ್ತೂರ್​ ವೈದ್ಯಕೀಯ ಕಾಲೇಜಿಗೆ ಕಳಿಸಿದ್ದಾರೆ.  ಈ ದಂಪತಿ ಮೂಲತಃ ಮೈಸೂರಿನವರು. 15ವರ್ಷಗಳ ಹಿಂದೆ ಸುಲುರ್​​ಗೆ ಬಂದು ನೆಲೆಸಿದ್ದರು ಎಂಬುದು ಪೊಲೀಸ್ ತನಿಖೆಯ ವೇಳೆ ಗೊತ್ತಾಗಿದೆ.

ಇದನ್ನೂ ಓದಿ: 10 ರಾಜ್ಯಗಳು 27 ಪತ್ನಿಯರು; ಒಡಿಶಾ ವ್ಯಕ್ತಿಯ ವಂಚನೆ ಜಾಲ ಬಹುದೊಡ್ಡದು, ಮೋಸಹೋದವರೆಲ್ಲ ವಕೀಲರು, ವೈದ್ಯರು, ಶಿಕ್ಷಕಿಯರು !

Published On - 8:55 am, Tue, 22 February 22

ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ