AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ತಮ್ಮಿಷ್ಟಕ್ಕೆ ವಿರುದ್ಧವಾಗಿ ಮದುವೆಯಾದಳೆಂದು ಬದುಕಿರುವಾಗಲೇ ಅಂತ್ಯ ಸಂಸ್ಕಾರ ಮಾಡಿದ ಪೋಷಕರು

ಮಗಳು ಓಡಿ ಹೋಗಿ ಮದುವೆಯಾದಳೆಂದು ಪೋಷಕರು ಮಗಳು ಬದುಕಿದ್ದಾಗಲೇ ಅಂತ್ಯಸಂಸ್ಕಾರ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ, ತಮ್ಮ ಇಚ್ಛೆಗೆ ವಿರುದ್ಧವಾಗಿ ನಡೆದ ಮದುವೆಯನ್ನು ವಿರೋಧಿಸಿದ ಕುಟುಂಬವು 20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಮೃತಪಟ್ಟಿದ್ದಾಳೆಂದು ಘೋಷಿಸಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಮಗಳು ತಮ್ಮಿಷ್ಟಕ್ಕೆ ವಿರುದ್ಧವಾಗಿ ಮದುವೆಯಾದಳೆಂದು ಬದುಕಿರುವಾಗಲೇ ಅಂತ್ಯ ಸಂಸ್ಕಾರ ಮಾಡಿದ ಪೋಷಕರು
ಮದುವೆImage Credit source: ABP Live
Follow us
ನಯನಾ ರಾಜೀವ್
|

Updated on: Sep 08, 2023 | 11:55 AM

ಮಗಳು ಓಡಿ ಹೋಗಿ ಮದುವೆಯಾದಳೆಂದು ಪೋಷಕರು ಮಗಳು ಬದುಕಿದ್ದಾಗಲೇ ಅಂತ್ಯಸಂಸ್ಕಾರ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ, ತಮ್ಮ ಇಚ್ಛೆಗೆ ವಿರುದ್ಧವಾಗಿ ನಡೆದ ಮದುವೆಯನ್ನು ವಿರೋಧಿಸಿದ ಕುಟುಂಬವು 20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಮೃತಪಟ್ಟಿದ್ದಾಳೆಂದು ಘೋಷಿಸಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಔಲ್ ಪೊಲೀಸ್ ಠಾಣೆ ವ್ಯಾಪ್ತಿಯ ದೇಮಲ್ ಗ್ರಾಮದ ಮುನಾ ಮಲಿಕ್ ಅವರ ಪುತ್ರಿ ದೀಪಾಂಜಲಿ ಮಲಿಕ್ (20) ತನ್ನ ಪ್ರಿಯಕರ ರಾಜೇಂದ್ರ ಮಲಿಕ್ (23) ಅವರನ್ನು ಆಗಸ್ಟ್ 28 ರಂದು ದೇವಸ್ಥಾನದಲ್ಲಿ ವಿವಾಹವಾದರು.

ಇದಾದ ನಂತರ, ಮಗಳ ನಿರ್ಧಾರದಿಂದ ಕೋಪಗೊಂಡ ಪೋಷಕರು ಆಕೆಯೊಂದಿಗಿನ ಸಂಬಂಧವನ್ನು ಮುರಿದು ಆಕೆ ಸತ್ತಿದ್ದಾಳೆ ಎಂದು ಘೋಷಿಸಿದರು.

ದೀಪಾಂಜಲಿಯ ತಂದೆ ಮುನಾ ಮಲಿಕ್ ಮಾತನಾಡಿ, ನಮ್ಮ ಮಗಳು ರಾಜೇಂದ್ರ ಜತೆ ಓಡಿ ಹೋಗಿದ್ದಾಳೆ. ನಾವು ಅವರ ವಿರುದ್ಧ ಔಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ.

ಪೊಲೀಸರು ವಿಷಯ ತಿಳಿದು ನಮ್ಮ ಮಗಳನ್ನು ನಮಗೆ ಒಪ್ಪಿಸಿದರು. ಆದರೆ ದೀಪಾಂಜಲಿ ಗ್ರಾಮದ ದೇವಸ್ಥಾನದಲ್ಲಿ ರಾಜೇಂದ್ರನನ್ನು ಮದುವೆಯಾದಳು.

ಮತ್ತಷ್ಟು ಓದಿ: ಕೈಕಾಲು ಕಟ್ಟಿ ಕಗ್ಗೊಲೆ; ಪೋಸ್ಟ್​ಮಾರ್ಟಂ ವೇಳೆ ಬಯಲಾಯ್ತು ಅಚ್ಚರಿಯ ಸತ್ಯ

ಇದರಿಂದ ನಮಗೆ ತೀವ್ರ ನೋವಾಗಿದೆ. ನಾವು ಅವಳ ಅಂತಿಮ ಸಂಸ್ಕಾರವನ್ನು ಮಾಡಿದ್ದೇವೆ ಮತ್ತು ಈಗ ಅವಳು ನಮ್ಮ ಪಾಲಿಗೆ ಸತ್ತು ಹೋಗಿದ್ದಾಳೆ ಎಂದರು.

ನಾವು ಪಿಂಡದಾನ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ, ಆಕೆಗೆ ಸೂಕ್ತನಾದ ವರನನ್ನು ಹುಡುಕಿ ಮದುವೆ ಮಾಡಬೇಕೆಂಬ ಕನಸು ಕಂಡಿದ್ದೆವು, ನಮಗೆ ಒಪ್ಪಿಗೆ ಇಲ್ಲದೆ ಮದುವೆಯಾಗಿದ್ದಾಳೆ ಎಂದು ಪೋಷಕರು ಹೇಳಿದ್ದಾರೆ.

ನನಗೆ ಮದುವೆಯ ವಯಸ್ಸಾಗಿತ್ತು, ನಾನು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದಿದ್ದಾರೆ. ಇನ್ನು ಸೊಸೆಯ ಆಗಮನದಿಂದ ಯುವಕನ ಮನೆಯಲ್ಲಿ ಸಂತಸ ತುಂಬಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ