AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ತಮ್ಮಿಷ್ಟಕ್ಕೆ ವಿರುದ್ಧವಾಗಿ ಮದುವೆಯಾದಳೆಂದು ಬದುಕಿರುವಾಗಲೇ ಅಂತ್ಯ ಸಂಸ್ಕಾರ ಮಾಡಿದ ಪೋಷಕರು

ಮಗಳು ಓಡಿ ಹೋಗಿ ಮದುವೆಯಾದಳೆಂದು ಪೋಷಕರು ಮಗಳು ಬದುಕಿದ್ದಾಗಲೇ ಅಂತ್ಯಸಂಸ್ಕಾರ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ, ತಮ್ಮ ಇಚ್ಛೆಗೆ ವಿರುದ್ಧವಾಗಿ ನಡೆದ ಮದುವೆಯನ್ನು ವಿರೋಧಿಸಿದ ಕುಟುಂಬವು 20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಮೃತಪಟ್ಟಿದ್ದಾಳೆಂದು ಘೋಷಿಸಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಮಗಳು ತಮ್ಮಿಷ್ಟಕ್ಕೆ ವಿರುದ್ಧವಾಗಿ ಮದುವೆಯಾದಳೆಂದು ಬದುಕಿರುವಾಗಲೇ ಅಂತ್ಯ ಸಂಸ್ಕಾರ ಮಾಡಿದ ಪೋಷಕರು
ಮದುವೆImage Credit source: ABP Live
ನಯನಾ ರಾಜೀವ್
|

Updated on: Sep 08, 2023 | 11:55 AM

Share

ಮಗಳು ಓಡಿ ಹೋಗಿ ಮದುವೆಯಾದಳೆಂದು ಪೋಷಕರು ಮಗಳು ಬದುಕಿದ್ದಾಗಲೇ ಅಂತ್ಯಸಂಸ್ಕಾರ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ, ತಮ್ಮ ಇಚ್ಛೆಗೆ ವಿರುದ್ಧವಾಗಿ ನಡೆದ ಮದುವೆಯನ್ನು ವಿರೋಧಿಸಿದ ಕುಟುಂಬವು 20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಮೃತಪಟ್ಟಿದ್ದಾಳೆಂದು ಘೋಷಿಸಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಔಲ್ ಪೊಲೀಸ್ ಠಾಣೆ ವ್ಯಾಪ್ತಿಯ ದೇಮಲ್ ಗ್ರಾಮದ ಮುನಾ ಮಲಿಕ್ ಅವರ ಪುತ್ರಿ ದೀಪಾಂಜಲಿ ಮಲಿಕ್ (20) ತನ್ನ ಪ್ರಿಯಕರ ರಾಜೇಂದ್ರ ಮಲಿಕ್ (23) ಅವರನ್ನು ಆಗಸ್ಟ್ 28 ರಂದು ದೇವಸ್ಥಾನದಲ್ಲಿ ವಿವಾಹವಾದರು.

ಇದಾದ ನಂತರ, ಮಗಳ ನಿರ್ಧಾರದಿಂದ ಕೋಪಗೊಂಡ ಪೋಷಕರು ಆಕೆಯೊಂದಿಗಿನ ಸಂಬಂಧವನ್ನು ಮುರಿದು ಆಕೆ ಸತ್ತಿದ್ದಾಳೆ ಎಂದು ಘೋಷಿಸಿದರು.

ದೀಪಾಂಜಲಿಯ ತಂದೆ ಮುನಾ ಮಲಿಕ್ ಮಾತನಾಡಿ, ನಮ್ಮ ಮಗಳು ರಾಜೇಂದ್ರ ಜತೆ ಓಡಿ ಹೋಗಿದ್ದಾಳೆ. ನಾವು ಅವರ ವಿರುದ್ಧ ಔಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ.

ಪೊಲೀಸರು ವಿಷಯ ತಿಳಿದು ನಮ್ಮ ಮಗಳನ್ನು ನಮಗೆ ಒಪ್ಪಿಸಿದರು. ಆದರೆ ದೀಪಾಂಜಲಿ ಗ್ರಾಮದ ದೇವಸ್ಥಾನದಲ್ಲಿ ರಾಜೇಂದ್ರನನ್ನು ಮದುವೆಯಾದಳು.

ಮತ್ತಷ್ಟು ಓದಿ: ಕೈಕಾಲು ಕಟ್ಟಿ ಕಗ್ಗೊಲೆ; ಪೋಸ್ಟ್​ಮಾರ್ಟಂ ವೇಳೆ ಬಯಲಾಯ್ತು ಅಚ್ಚರಿಯ ಸತ್ಯ

ಇದರಿಂದ ನಮಗೆ ತೀವ್ರ ನೋವಾಗಿದೆ. ನಾವು ಅವಳ ಅಂತಿಮ ಸಂಸ್ಕಾರವನ್ನು ಮಾಡಿದ್ದೇವೆ ಮತ್ತು ಈಗ ಅವಳು ನಮ್ಮ ಪಾಲಿಗೆ ಸತ್ತು ಹೋಗಿದ್ದಾಳೆ ಎಂದರು.

ನಾವು ಪಿಂಡದಾನ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ, ಆಕೆಗೆ ಸೂಕ್ತನಾದ ವರನನ್ನು ಹುಡುಕಿ ಮದುವೆ ಮಾಡಬೇಕೆಂಬ ಕನಸು ಕಂಡಿದ್ದೆವು, ನಮಗೆ ಒಪ್ಪಿಗೆ ಇಲ್ಲದೆ ಮದುವೆಯಾಗಿದ್ದಾಳೆ ಎಂದು ಪೋಷಕರು ಹೇಳಿದ್ದಾರೆ.

ನನಗೆ ಮದುವೆಯ ವಯಸ್ಸಾಗಿತ್ತು, ನಾನು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದಿದ್ದಾರೆ. ಇನ್ನು ಸೊಸೆಯ ಆಗಮನದಿಂದ ಯುವಕನ ಮನೆಯಲ್ಲಿ ಸಂತಸ ತುಂಬಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!