AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕೆಂಡ್ ಹ್ಯಾಂಡ್ ಕಾರ್ ಖರೀದಿಸಲು ನವಜಾತ ಶಿಶುವನ್ನೇ ಮಾರಿದರು!

ಮಗು ಉದ್ಯಮಿ ಬಳಿ ಇದೆ. ನಾವು ಶುಕ್ರವಾರ ಮಹಿಳೆ ಮತ್ತು ಅವಳ ಪತಿಯನ್ನು ವಿಚಾರಣೆಗಾಗಿ ಕರೆದಿದ್ದೇವೆ ಎಂದು ಪೊಲೀಸ್ ಅಧಿಕಾರಿ ಮಿಶ್ರಾ ಹೇಳಿದ್ದಾರೆ. ದಂಪತಿ ಇತ್ತೀಚೆಗೆ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಸೆಕೆಂಡ್ ಹ್ಯಾಂಡ್ ಕಾರ್ ಖರೀದಿಸಲು ನವಜಾತ ಶಿಶುವನ್ನೇ ಮಾರಿದರು!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 23, 2021 | 12:35 PM

Share

ಕಾನ್ಪುರ: ತಮ್ಮ ನವಜಾತ ಶಿಶುವನ್ನು ದಂಪತಿ ಉದ್ಯಮಿಗಳಿಗೆ 1.5 ಲಕ್ಷ ರೂಪಾಯಿಗೆ ಮಾರಿದ ಅಮಾನುಷ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಸುದ್ದಿಸಂಸ್ಥೆಯು ವರದಿ ಮಾಡಿದೆ. ದಂಪತಿ ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಲು ತಮ್ಮ ಮಗುವನ್ನೇ ಮಾರಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಯ ಬಗ್ಗೆ ಜನರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಮಗುವಿನ ಅಜ್ಜ, ಅಜ್ಜಿಯಂದಿರು ಗುರುವಾರ ಪೊಲೀಸರನ್ನು ಸಂಪರ್ಕಿಸಿ ಪೋಷಕರ ವಿರುದ್ಧ ದೂರು ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ತಿರ್ವಾ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸತೌರ್‌ನ ದುಲಾರಿ ದೇವಿ (ಹೆಸರು ಬದಲಾಯಿಸಲಾಗಿದೆ) ಎಂಬವರಿಗೆ ಮೂರು ತಿಂಗಳ ಹಿಂದೆ ಮಗು ಜನಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ಸ್‌ಪೆಕ್ಟರ್ ಕೊತ್ವಾಲಿ ಶೈಲೇಂದ್ರ ಕುಮಾರ್ ಮಿಶ್ರಾ ಅವರು, ತಮ್ಮ ಮಗಳು ಮತ್ತು ಅಳಿಯ ಮಗುವನ್ನು, ಗುರ್ಸಹೈಗಂಜ್ ಮೂಲದ ಉದ್ಯಮಿಯೊಬ್ಬರಿಗೆ 1.5 ಲಕ್ಷ ರೂ.ಗೆ ಮಾರಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೆಕೆಂಡ್ ಹ್ಯಾಂಡ್ ಕಾರ್ ಕೊಳ್ಳಲು ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮಗು ಉದ್ಯಮಿ ಬಳಿ ಇದೆ. ನಾವು ಶುಕ್ರವಾರ ಮಹಿಳೆ ಮತ್ತು ಅವಳ ಪತಿಯನ್ನು ವಿಚಾರಣೆಗಾಗಿ ಕರೆದಿದ್ದೇವೆ ಎಂದು ಪೊಲೀಸ್ ಅಧಿಕಾರಿ ಮಿಶ್ರಾ ಹೇಳಿದ್ದಾರೆ. ದಂಪತಿ ಇತ್ತೀಚೆಗೆ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಭೀಮಾತೀರದಲ್ಲಿ ನೆತ್ತರು; ತಲೆ ಜಜ್ಜಿ ಪೌರ ಕಾರ್ಮಿಕನ ಬರ್ಬರ ಕೊಲೆ

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ

(Parents sell their newborn to buy a second hand car in Uttar Pradesh)

Published On - 3:04 pm, Fri, 14 May 21

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ