AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ರಾಜಕಾರಣ, ಅಧಿಕಾರಕ್ಕಾಗಿ ಹಗಲು-ರಾತ್ರಿ ಆಟ; ವಿಪಕ್ಷಗಳ ವಿರುದ್ಧ ವಾರಾಣಸಿಯಲ್ಲಿ ಮೋದಿ ವಾಗ್ದಾಳಿ

ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು. ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರ 8 ವರ್ಷಗಳನ್ನು ಪೂರೈಸಿದ ನಂತರ ವಾರಾಣಸಿಗೆ ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ. ಇಂದು ಪ್ರಧಾನಿ 3884.18 ಕೋಟಿ ರೂ. ಮೌಲ್ಯದ 44 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು.

ಕುಟುಂಬ ರಾಜಕಾರಣ, ಅಧಿಕಾರಕ್ಕಾಗಿ ಹಗಲು-ರಾತ್ರಿ ಆಟ; ವಿಪಕ್ಷಗಳ ವಿರುದ್ಧ ವಾರಾಣಸಿಯಲ್ಲಿ ಮೋದಿ ವಾಗ್ದಾಳಿ
Pm Modi In Varanasi
ಸುಷ್ಮಾ ಚಕ್ರೆ
|

Updated on: Apr 11, 2025 | 4:38 PM

Share

ವಾರಾಣಸಿ, ಏಪ್ರಿಲ್ 11: ವಾರಾಣಸಿಯಲ್ಲಿ ಇಂದು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರೋಧ ಪಕ್ಷಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. ವಾರಾಣಸಿಯಲ್ಲಿ  (Varanasi) 3,880 ಕೋಟಿ ರೂ. ಮೌಲ್ಯದ 44 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಪ್ರಧಾನಿ ಮೋದಿ, ಅಧಿಕಾರ ಪಡೆಯುವತ್ತ ಗಮನಹರಿಸಿದ ಪಕ್ಷಗಳು ಮುಖ್ಯವಾಗಿ ತಮ್ಮ ಕುಟುಂಬಗಳನ್ನು ಉತ್ತೇಜಿಸುವತ್ತ ಕಾಳಜಿ ವಹಿಸುತ್ತಿವೆ. ನಮ್ಮದು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬ ಮಂತ್ರವಾದರೆ ವಿರೋಧ ಪಕ್ಷಗಳದ್ದು ‘ಪರಿವಾರ್ ಕಾ ಸಾಥ್ ಪರಿವಾರ್ ಕಾ ವಿಕಾಸ್’ ಎಂಬುದು ಮಂತ್ರವಾಗಿದೆ. ನಮ್ಮ ಸರ್ಕಾರವು ಎಲ್ಲರನ್ನೂ ಒಳಗೊಳ್ಳುವ ಪ್ರಗತಿಯ ಕಲ್ಪನೆಯ ಮೂಲಕ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಕೆಲಸ ಮಾಡಲು ಬದ್ಧವಾಗಿದೆ ಎಂದು ಹೇಳಿದ್ದಾರೆ.

ಕೆಲವು ರಾಜಕೀಯ ಗುಂಪುಗಳು ಸಾರ್ವಜನಿಕ ಸೇವೆಗಿಂತ ಅಧಿಕಾರದ ಮೇಲೆ ಹೆಚ್ಚು ಗಮನಹರಿಸುತ್ತವೆ. “ಕೇವಲ ಅಧಿಕಾರವನ್ನು ಪಡೆದುಕೊಳ್ಳಲಿಕ್ಕಾಗಿ ಹಗಲಿರುಳು ಆಟವಾಡುವವರು ಅವರ ತತ್ವ ‘ಪರಿವಾರ್ ಕಾ ಸಾಥ್ ಪರಿವಾರ್ ಕಾ ವಿಕಾಸ್’ ಎಂಬುದಾಗಿದೆ” ಎಂದು ಮೋದಿ ಹೇಳಿದರು. ಇಂದು ಭಾರತ ಅಭಿವೃದ್ಧಿ ಮತ್ತು ಪರಂಪರೆ ಎರಡನ್ನೂ ಒಟ್ಟಿಗೆ ತೆಗೆದುಕೊಂಡು ಮುಂದುವರಿಯುತ್ತಿದೆ. ನಮ್ಮ ಕಾಶಿ ಇದಕ್ಕೆ ಅತ್ಯುತ್ತಮ ಮಾದರಿಯಾಗುತ್ತಿದೆ. ಭಾರತದ ಆತ್ಮವು ಅದರ ವೈವಿಧ್ಯತೆಯಲ್ಲಿ ನೆಲೆಸಿದೆ. ಕಾಶಿ ಅದರ ಅತ್ಯಂತ ಸುಂದರ ನಿದರ್ಶನವಾಗಿದೆ” ಎಂದು ಮೋದಿ ಹೇಳಿದರು.

ಇದನ್ನೂ ಓದಿ
Image
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಇದನ್ನೂ ಓದಿ: ಕಾಶಿ ನನ್ನದು: ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ

ವಾರಾಣಸಿಯಲ್ಲಿ ಪ್ರಧಾನಿ ಮೋದಿ 3880 ಕೋಟಿ ರೂ. ಮೌಲ್ಯದ 44 ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ಮಾಡಿದರು. ಕಳೆದ 10 ವರ್ಷಗಳಲ್ಲಿ ಬನಾರಸ್ ಅಭಿವೃದ್ಧಿ ಹೊಸ ವೇಗವನ್ನು ಪಡೆದುಕೊಂಡಿದೆ. ಇಂದು ಕಾಶಿ ಪ್ರಾಚೀನವಲ್ಲ, ಅದು ಪ್ರಗತಿಪರವೂ ಆಗಿದೆ. ಕಾಶಿಯ ಪ್ರೀತಿಗೆ ನಾನು ಋಣಿಯಾಗಿದ್ದೇನೆ. ಕಾಶಿ ನನ್ನದು ಮತ್ತು ನಾನು ಕಾಶಿಗೆ ಸೇರಿದವನು ಎಂದು ಮೋದಿ ಹೇಳಿದ್ದಾರೆ.

ತಮ್ಮ ಸಂಸದೀಯ ಕ್ಷೇತ್ರದ ಅಭಿವೃದ್ಧಿಯ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಪೂರ್ವಾಂಚಲ್‌ನಲ್ಲಿ ಮೊದಲು ಆರೋಗ್ಯ ಸೌಲಭ್ಯಗಳ ಕೊರತೆ ಇತ್ತು. ಆದರೆ ಇಂದು ಕಾಶಿ ಆರೋಗ್ಯದ ರಾಜಧಾನಿಯಾಗುತ್ತಿದೆ ಎಂದು ಹೇಳಿದರು. ಇಂದು ದೆಹಲಿ ಮತ್ತು ಮುಂಬೈನ ದೊಡ್ಡ ಆಸ್ಪತ್ರೆಗಳು ನಿಮ್ಮ ಮನೆಯ ಹತ್ತಿರ ಬಂದಿವೆ. ಇದು ಅಭಿವೃದ್ಧಿ. ಕಳೆದ 10 ವರ್ಷಗಳಲ್ಲಿ ನಾವು ಆಸ್ಪತ್ರೆಗಳ ಸಂಖ್ಯೆಯನ್ನು ಹೆಚ್ಚಿಸಿದ್ದಲ್ಲದೆ, ರೋಗಿಗಳ ಘನತೆಯನ್ನು ಹೆಚ್ಚಿಸಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ